CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಚಲಿಸುತ್ತಿದ್ದ ಬಸ್‌ ಡೋರ್‌ ಓಪನ್‌ ಆಗಿ ರಸ್ತೆಗೆ ಬಿದ್ದ ಯುವ ಕಂಡಕ್ಟರ್‌ ಮೃತ

ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು: ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನ ಹಿಂಬದಿ ಡೋರ್‌ ಓಪನ್‌ ಆದ ಪರಿಣಾಮ ಯುವ ನಿರ್ವಾಹಕರೊಬ್ಬರು ಬಿದ್ದು ಮೃತಪಟ್ಟಿರುವ ಘಟನೆ ಮಲ್ಲನಮೂಲೆ ಬಳಿ ಸಂಭವಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

KSRTC ಸಂಸ್ಥೆಯ ಚಾಮರಾಜನಗರ ಘಟಕದ ಚಾಲಕ ಕಂ ನಿರ್ವಾಹಕ ಮಹದೇವಸ್ವಾಮಿ (35) ಮೃತರು.

ಇಂದು (ಮಾ.8) ಮುಂಜಾನೆ 6 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಉಮ್ಮತ್ತೂರಿನಲ್ಲಿ ನೈಟ್‌ಹಾಲ್ಟ್‌ ಆಗಿದ್ದ ಬಸ್‌ ಬೆಳಗ್ಗೆ 6 ಗಂಟೆಗೆ ನಂಜನಗೂಡಿಗೆ ಹೊರಟ್ಟಿತ್ತು. ಈ ವೇಳೆ ಮಲ್ಲನಮೂಲೆ ಸೇತುವೆ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಬಸ್‌ನ ಹಿಂಬದಿ ಡೋರ್‌ ಓಪನ್‌ಆಗಿ ಈ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಬಸ್‌ ಡೋರ್‌ ಓಪನ್‌ ಆಗಿದ್ದರಿಂದ ಡೋರ್‌ ಬಳಿಯೇ ಟಿಕೆಟ್‌ ವಿತರಸಲು ನಿಂತಿದ್ದ ಚಾಲಕ ಕಂ ನಿರ್ವಾಹಕ ಮಹದೇವಸ್ವಾಮಿ ಅವರು ಬಸ್‌ನಿಂದ ಕೆಳಗೆ ಬಿದ್ದಿದ್ದಾರೆ. ಅವರು ಬಿದ್ದ ರಭಸಕ್ಕೆ ರಸ್ತೆಗೆ ತಲೆ ಒಡೆದು ರಕ್ತ ಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಿಗಮದ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಜರುಗಿಸಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್‌ಗಳಲ್ಲಿ ಓಡಾಡುವ ಸಾರ್ವಜನಿಕರ ಸಂಖ್ಯೆ ಹೆಚ್ಚಳವಾಗಿದ್ದು, ಚಾಲನಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುವುದೇ ತುಂಬ ತ್ರಾಸದಾಯವಾಗುತ್ತಿದೆ. ನೂಕುನುಗ್ಗಲಿನಲ್ಲೇ ಕೆಲಸ ನಿರ್ವಹಿಸಬೇಕಿರುವುದರಿಂದ ನೌಕರರು ಮಾನಸಿಕವಾಗಿ ಕುಗ್ಗಿಹೋಗುತ್ತಿದ್ದಾರೆ.

ಇನ್ನು ಈ ರೀತಿಯ ಘಟನೆ ಇದೇ ಮೊದಲೇನಲ್ಲ. ಆದರೂ ಇಂಥ ಘಟನೆಗಳಿಂದ ಚಾಲನಾ ಸಿಬ್ಬಂದಿ ಧೈರ್ಯಗುಂದುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬಸ್‌ ಡೋರ್‌ಗಳು ಸರಿಯಾಗಿವೆಯೇ ಎಂಬುದರ ಬಗ್ಗೆಯೂ ಹೆಚ್ಚಿನ ಗಮನಹರಿಸಿ ಇಂಥ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ