CrimeNEWSನಮ್ಮರಾಜ್ಯ

KSRTC: ಪ್ರಯಾಣಿಕರಿಗೆ ಟಿಕೆಟ್ ನೀಡದ ಆರೋಪ ಸಾಬೀತ್‌ – ಕಂಡಕ್ಟರ್‌ ವಜಾ ಆದೇಶ ಎತ್ತಿ ಹಿಡಿದ ಹೈ ಕೋರ್ಟ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಯಾಣಿಕರಿಗೆ ಟಿಕೆಟ್ ಕೊಡದ ಆರೋಪದಡಿ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಈ ಸಂಬಂಧ KSRTC ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸಿಬ್ಬಂದಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ಅವರ ಹಿಂದಿನ ನಡವಳಿಕೆಯನ್ನೂ ಪರಿಗಣಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರ ಕರಣವೇನು?: ಕಂಡಕ್ಟರ್ ಎನ್.ಎನ್.ಮಹಾದೇವ ಅವರು ಗೋಣಿಕೊಪ್ಪದಿಂದ ಬಿ.ಶೆಟ್ಟಿಗೇರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ನಲ್ಲಿ 2013ರ ಜನವರಿ 23ರಂದು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಅವರು ಮೂವರು ಪ್ರಯಾಣಿಕರಿಗೆ ಟಿಕೆಟ್ ನೀಡದೇ ಇರುವುದನ್ನು ತಪಾಸಣಾ ತಂಡ ಪತ್ತೆ ಹಚ್ಚಿತ್ತು.

ಈ ಕುರಿತು ಇಲಾಖಾ ತನಿಖೆ ನಡೆಸಲಾಗಿತ್ತು. ಕರ್ತವ್ಯ ಲೋಪ ಎಸಗಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಮಹಾದೇವ ಅದನ್ನು ಮೈಸೂರಿನ ಕಾರ್ಮಿಕ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಕಾರ್ಮಿಕ ನ್ಯಾಯಾಲಯವು ವಜಾ ಆದೇಶವನ್ನು 2017ರಲ್ಲಿ ರದ್ದು ಪಡಿಸಿತ್ತು.

ಈ ವೇಳೆ ಎರಡು ವೇತನ ಹೆಚ್ಚಳವನ್ನು ಸ್ಥಗಿತಗೊಳಿಸಬೇಕು ಎಂದು ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಕೆಎಸ್ಆರ್ಟಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಮಹಾದೇವ ಅವರು ಈ ಹಿಂದೆ ಇಂತಹ 122 ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬುದು ಕಂಡು ಬಂದಿದೆ.

ಇದನ್ನೇ KSRTCಯ ಶಿಸ್ತು ಸಮಿತಿ ಪರಿಗಣಿಸಿಯೇ ಸೇವೆಯಿಂದ ವಜಾಮಾಡುವಂತೆ ಆದೇಶಿಸಿದೆ. ಆದ್ದರಿಂದ, ವಜಾ ಆದೇಶವನ್ನು ಕಾರ್ಮಿಕ ನ್ಯಾಯಾಲಯ ಹಗುರವಾಗಿ ಪರಿಗಣಿಸಬಾರದಿತ್ತು ಎಂದು ನ್ಯಾಯಪೀಠ ಹೇಳಿದ್ದು, ಅಲ್ಲದೆ ಸಂಸ್ಥೆಯ (KSRTC) ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್