CrimeNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಹುಚ್ಚು ಪ್ರಾಣಿ ಕಡಿತಕ್ಕೊಳಗಾದ ನೌಕರ 28 ದಿನಗಳವರೆಗೂ ರಜೆ ತೆಗೆದುಕೊಳ್ಳಬಹುದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹುಚ್ಚು (ಆ್ಯಂಟಿ ರೇಬಿಸ್) ಪ್ರಾಣಿಯಿಂದ ಕಚ್ಚಿಸಿಕೊಂಡ ನೌಕರನು ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕು ಎಂದು 2016ರರಲ್ಲೇ ಅಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದರ್‌ ಕುಮಾರ ಕಟಾರಿಯಾ ಅವರು ಆದೇಶ ಹೊರಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು 27-05-1975ರಲ್ಲಿ ಸ್ಪಷ್ಟ ನಿರ್ದೇಶನವಿದೆ. ಮುಂದುವರಿದಂತೆ, ಹುಚ್ಚುಪ್ರಾಣಿ ಕಡಿದ ಚುಚ್ಚುಮದ್ದಿನ ಚಿಕಿತ್ಸಾ ಪದ್ಧತಿಯು ಬದಲಾವಣೆಗೊಂಡಿದ್ದು, ನಿರ್ದಿಷ್ಟ ಅಂತರಗಳಲ್ಲಿ ಒಟ್ಟು 0.3.7.28ನೇ ದಿವಸದ ಚುಚ್ಚುಮದ್ದು ನೀಡುವ ಪದ್ಧತಿಯನ್ನು ಅನುಸರಿಸಲಾಗುತ್ತಿರುವುದಾಗಿ ತಿಳಿಸಿ ಕರ್ನಾಟಕ ಸರ್ಕಾರವು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ಅನುಬಂಧ-ಬಿ ಯಲ್ಲಿನ ನಿಯಮ-5 ನ್ನು ತಿದ್ದುಪಡಿ ಮಾಡಿ ಈ ಆದೇಶದ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶಿಸಿದೆ.

ಹುಚ್ಚುಪ್ರಾಣಿ ಕಡಿದ ಸರ್ಕಾರಿ ನೌಕರನಿಗೆ ಚುಚ್ಚುಮದ್ದು ಪಡೆಯಬಹುದಾದ ವಾಸ್ತವ ದಿನಗಳಿಗೆ ಮಾತ್ರ ಮತ್ತು ಹುಚ್ಚುಪ್ರಾಣಿ ಕಡಿತದ ಪರಿಣಾಮವಾಗಿ ನಿರಂತರ ಚಿಕಿತ್ಸೆಯ ಅಗತ್ಯತೆಯ ಬಗ್ಗೆ ವೈದ್ಯರು ದೃಢೀಕರಿಸಿ ನೀಡುವ ವೈದ್ಯಕೀಯ ಪ್ರಮಾಣ ಪತ್ರ ಆಧಾರದ ಮೇರೆಗೆ ಗರಿಷ್ಠ 14 ದಿನಗಳಿಗೆ ಸೀಮಿತಗೊಳಿಸಿ ಸಾಂದರ್ಭಿಕ ರಜೆಯನ್ನು ಕೊಡಬಹುದು.

ಇಂಥ ರಜೆಯ ಹೊರತಾಗಿ ಇನ್ನೂ ಹೆಚ್ಚಿನ ರಜೆ ಬೇಕಾಗಿರುವಲ್ಲಿ ಅದನ್ನು ಗಳಿಕೆ ರಜೆ ಅಥವಾ ಹಕ್ಕಿನ ರಜೆ ಅಥವಾ ಅರ್ಧ ವೇತನ ರಜೆಯಾಗಿ ಪರಿಗಣಿಸಬೇಕು ಎಂದು ಮೇ 23 – 2016ರಂದೆ ಎಂಡಿ ಆದೇಶ ಹೊರಡಿಸಿದ್ದಾರೆ.

ಆದುದರಿಂದ. ಈ ಆದೇಶದಂತೆ ನಿಗಮದ ಅಧಿಕಾರಿ/ ನೌಕರರಿಗೂ (ತರಬೇತಿಯಲ್ಲಿರುವವರನ್ನು ಒಳಗೊಂಡಂತೆ) ಸಹ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವುದು. ಉಳಿದಂತೆ 27-05-1975ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಸುತ್ತೋಲೆಯು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.

ಆದರೆ, ಇತ್ತೀಚೆಗೆ ನಿಗಮಗಳ ಕೆಲ ಅಧಿಕಾರಿಗಳು ಇದನ್ನು ಪಾಲಿಸದೆ ಇಂಥ ಸಂದರ್ಭದಲ್ಲಿ ನೌಕರರಿಗೆ ರಜೆ ಕೊಡದೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಹೀಗಾಗಿ ಇನ್ನಾದರೂ ಅಧಿಕಾರಿಗಳು 2016ರಲ್ಲೇ ಜಾರಿಗೆ ಬಂದಿರುವ ಈ ಆದೇಶವನ್ನು ಪಾಲಿಸಬೇಕು ಎಂದು ನೊಂದ ನೌಕರರು ಆಗ್ರಹಕಫರ್ವಕವಾಗಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ