NEWSನಮ್ಮರಾಜ್ಯಬೆಂಗಳೂರು

ದೀಪಾವಳಿಗೆ KSRTCಯಿಂದ 2,500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ- ಆದರೆ ನೌಕರರಿಗಿಲ್ಲ ವಿಶೇಷ ಭತ್ಯೆ, ಬೋನಸ್‌: ಇದು ನ್ಯಾಯವೇ?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೀಪಾವಳಿ ಹಬ್ಬ ದಿನಗಣನೆ ಆರಂಭವಾಗಿದ್ದು, ಹಬ್ಬದ ಹಿನ್ನೆಲೆ ಅ.17ರಿಂದ 20ರವರೆಗೆ ರಾಜ್ಯಾದ್ಯಂತ 2,500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಾಡಿದೆ.

ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲ ಐಷಾರಾಮಿ ಬಸ್‌ಗಳು ಲಭ್ಯವಿರಲಿದೆ. ಮೆಜೆಸ್ಟಿಕ್, ಶಾಂತಿನಗರ, ಸ್ಯಾಟಲೈಟ್, ಪೀಣ್ಯಾ ಬಸ್ ನಿಲ್ದಾಣದಿಂದ ಬಸ್‌ಗಳು ಈ ನಾಲ್ಕು ದಿನ ಬೆಂಗಳೂರಿನಿಂದ ರಾಜ್ಯದ ನಾನಾಕಡೆಗಳಿಗೆ ಬಸ್ ವ್ಯವಸ್ಥೆ ಇರಲಿದೆ.

ಹಬ್ಬ ಮುಗಿದ ಬಳಿಕವೂ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿದೆ. ಅ.22 ಹಾಗೂ 26ರಂದು ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗೂ ಈ ಸೇವೆ ಇರಲಿದೆ. ರಾಜ್ಯ ಹಾಗೂ ಅಂತರಾಜ್ಯದಿಂದಲೂ ಕೆಎಸ್‌ಆರ್‌ಟಿಸಿ ಬಸ್‌ಗಳು ಲಭ್ಯವಿರಲಿದೆ ಎಂದು ಕೆಎಸ್‌ಆರ್‌ಟಿಸಿ ನಿಗಮ ಪ್ರಕಟಣೆ ಹೊರಡಿಸಿದೆ.

ಎಲ್ಲಿಂದ ಎಲ್ಲಿಗೆ?: ಮೆಜೆಸ್ಟಿಕ್‌ಯಿಂದ ಧರ್ಮಸ್ಥಳ, ಶೃಂಗೇರಿ, ಹೊರನಾಡು, ಮಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಗೋಕರ್ಣ, ಕಾರವಾರ ಭಾಗ. ಉತ್ತರ ಕರ್ನಾಟಕದ ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ ಸೇರಿ ಇತರೆಡೆ ಬಸ್ ವ್ಯವಸ್ಥೆ ಇರಲಿದೆ. ಅಲ್ಲದೇ ಅಂತರಾಜ್ಯ ತಿರುಪತಿ, ವಿಜಯವಾಡ, ಹೈದರಾಬಾದ್ ಕಡೆಗೂ ಹೆಚ್ಚುವರಿ ಬಸ್‌ಗಳು ಲಭ್ಯವಿರಲಿದೆ.

ಸ್ಯಾಟಲೈಟ್ ಬಸ್ ನಿಲ್ದಾಣ: ಮೈಸೂರು ಭಾಗದ ಎಲ್ಲಾ ಕಡೆ ಬಸ್‌ಗಳ ಕಾರ್ಯಾಚರಿಸಲಿದೆ. ಮಂಡ್ಯ, ರಾಮನಗರ, ಕುಶಾಲನಗರ, ಚಾಮರಾಜನಗರ, ಕೊಡಗು, ವಿರಾಜಪೇಟೆ, ಪಿರಿಯಾಪಟ್ಟಣಕ್ಕೆ ಬಸ್‌ಗಳು ಲಭ್ಯ ವ್ಯವಸ್ಥೆ ಇರಲಿದೆ.

ಶಾಂತಿನಗರ ಬಸ್ ನಿಲ್ದಾಣ: ತಮಿಳುಳುನಾಡು ಮತ್ತು ಕೇರಳ ಭಾಗಗಳಾದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆ ಬಸ್‌ಗಳು ಲಭ್ಯವಿರಲಿದೆ.

ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದ್ರೆ ಶೇ.5 ರಿಯಾಯಿತಿ ಇರಲಿದೆ. ಅಲ್ಲದೇ ಎರಡೂ ಬದಿಯ ಮುಂಗಡ ಟಿಕೆಟ್ ಬುಕ್ ಮಾಡಿದ್ರೆ ಶೇ.10 ರಿಯಾಯಿತಿಯ ಆಫರ್ ಅನ್ನು ಕೆಎಸ್‌ಆರ್‌ಟಿಸಿ ನೀಡಿದೆ.

ಇನ್ನು ರಾಜ್ಯಾದ್ಯಂತ 2,500 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸದೆ ಡ್ಯೂಟಿ ಮಾಡುವ ನೌಕರರಿಗೆ ಯಾವುದೇ ವಿಶೇಷ ಭತ್ಯ ವ್ಯವಸ್ಥೆ ಮಾಡಿಲ್ಲ. ಇದು ಭಾರಿ ನೋವಿನ ಸಂಘತಿ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ನಮಗೂ ಬೋನಸ್‌ ಸೇರಿದಂತೆ ವಿಶೇಷ ಭತ್ಯೆಯನ್ನು ಘೋಷಣೆ ಮಾಡಿ ಎಂದು ಸರ್ಕಾರ ಹಾಗೂ ಸಾರಿಗೆಯ ನಾಲ್ಕೂ ನಿಗಮಗಳ ಆಡಳಿತ ಮಂಡಳಿಗಳನ್ನು ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ