KSRTC: 26 ವರ್ಷ ಸೇವೆಯ ನೌಕರರ ಮೂಲ ವೇತನ 31 ಸಾವಿರ- ಕೇವಲ 8ವರ್ಷ ಸೇವೆಯ ಸರ್ಕಾರಿ ನೌಕರರ ಮೂಲ ವೇತನ 48 ಸಾವಿರ!

- ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ಇದು ಅರ್ಥವಾಗುತ್ತಿಲ್ಲವೇಕೆ- ಒಕ್ಕೂಟದ ಪದಾಧಿಕಾರಿಗಳ ಪ್ರಶ್ನೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳ-ನೌಕರರ ವೇತನ ಸರ್ಕಾರಿ ಅಧಿಕಾರಿಗಳು-ನೌಕರರಿಗೆ ಹೋಲಿಸಿದರೆ ಭಾರಿ ವ್ಯತ್ಯಾಸವಿದೆ ಎಂಬುವುದು ಏಕೆ ಈ ಜಂಟಿ ಸಮಿತಿ ಪದಾಧಿಕಾರಿಗಳಿಗೆ ಅರ್ಥವಾಗುತ್ತಿಲ್ಲ.
26 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಚಾಲಲ ಸಿಬ್ಬಂದಿಗಳ ವೇತನ ಯಾವುದೇ ಇಂಕ್ರಿಮೆಂಟ್ ಕೂಡ ಕಟ್ಟಾಗದೆ ಕಾಲಕಾಲಕ್ಕೆ ಹೆಚ್ಚಳವಾಗುತ್ತ ಬಂದಿದ್ದರೂ ಕೂಡ ಅವರ ಮೂಲ ವೇತನ ಕೇವಲ 31,570 ರೂ.ಗಳಿದೆ.
ಅದೇ ಸರ್ಕಾರಿ ನೌಕರರ ಅದೇ ಸಿ ಗ್ರೂಪ್ನಡಿ ಅದೇ ವಿದ್ಯಾರ್ಹತೆಯಡಿ ಅಂದರೆ ಎಸ್ಸೆಸ್ಸೆಲ್ಸಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿ ಒಬ್ಬ ಸರ್ಕಾರಿ ಅಧಿಕಾರಿಯ ಕಾರು ಚಾಲಕನಾಗಿ, ಸಹಾಯಕ ಅಥವಾ ಎಸ್ಡಿಎಯಾಗಿ 8 ವರ್ಷಗಳ ಹಿಂದೆ ಕೆಲಸಕ್ಕೆ ಸೇರಿದ, ಈಗ ಬಡ್ತಿಯೊಂದಿಗೆ ಆ ನೌಕರರ ಮೂಲ ವೇತನ ಪ್ರಸ್ತುತ 48 ಸಾವಿರವಿದೆ.
ನೋಡಿ 26 ವರ್ಷಗಳ ಹಿಂದೆ ಅದೇ ಚಾಲಕ ಅದರಲ್ಲೂ ಭಾರಿ ವಾಹನ ಚಾಲನಾ ಸಿಬ್ಬಂದಿಯಾಗಿ ಕೆಎಸ್ಆರ್ಟಸಿಗೆ ಸೇರಿ ಕೊಂಡಿರುವವರ ಮೂಲ ವೇತನ ಕೇವಲ 31,570 ರೂಪಾಯಿ ಇದೆ. ಅಂದರೆ ಯೋಚನೆ ಮಾಡಿ 26 ವರ್ಗಳಿಂದಲೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಮೂಲ ವೇತನ ಕೇವಲ 8 ವರ್ಷಗಳಲ್ಲಿ ಸರ್ಕಾರಿ ನೌಕರರಾಗಿ ಸೇರಿದ ನೌಕರರಿಗಿಂತ ಸುಮಾರು 17 ಸಾವಿರ ವ್ಯತ್ಯಾಸವಿದೆ.
ಇನ್ನು 26 ವರ್ಷಗಳ ಹಿಂದೆ ಸರ್ಕಾರಿ ಕೆಲಸಕ್ಕೆ ಸೇರಿರುವ ನೌಕರರ ಮೂಲ ವೇತನ ಬಡ್ತಿಯೊಂದಿಗೆ ಎಷ್ಟಿರಬೇಕು ಎಂಬುದನ್ನು ನೀವೆ ಯೋಚಿಸಿ. ಹೀಗಾಗಿ ಸರ್ಕಾರಿ ನೌಕರರಿಗೆ ಕೊಡುವ ವೇತನವನ್ನು ಅದೇ ಸಿ ಗ್ರೂಪ್ ಹುದ್ದೆಯಲ್ಲಿರುವ ನಮಗೂ ಕೊಡಿ ಎಂದು ಸಾರಿಗೆ ನೌಕರರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸುತ್ತಿದೆ.
ಆದರೆ, ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಇಲ್ಲ ಇಲ್ಲ ನಾವು ಶೇ.25 ರಷ್ಟು ವೇತನ ಹೆಚ್ಚಳ ಮಾಡಿದರೆ ಸಾಕು ಅದು ಕೂಡ ಅಗ್ರಿಮೆಂಟ್ ಆಗಬೇಕು. ಈ ಬಗ್ಗೆ ಚರ್ಚಿಸಲು ಸಭೆ ಕರೆಯಿರಿ ಎಂದು ಸಿಎಂ, ಸಾರಿಗೆ ಸಚಿವರು ಹಾಗೂ ನಿಗಮಗಳ ಎಂಡಿಗಳಿಗೆ ಮನವಿ ಪತ್ರ ಕೊಡುತ್ತಿದೆ.
ಅಂದರೆ ನಮಗೆ ಇವರ ಉದ್ದೇಶವೆ ಅರ್ಥವಾಗುತ್ತಿಲ್ಲ. ಪ್ರಸ್ತುತ ಹೊಸದಾಗಿ ಸರ್ಕಾರಿ ಕೆಲಸಕ್ಕೆ ಸೇರುವ ನೌಕರರ ಮೂಲ ವೇತನ 27 ಸಾವಿರ ಆಗಿದೆ. ಆದರೆ, ನಮ್ಮ ಸಂಸ್ಥೆಯಲ್ಲಿ 12 ವರ್ಷಳಿಂದಲೂ ಸೇವೆ ಸಲ್ಲಿಸುತ್ತಿರುವವರ ಮೂಲ ವೇತನ ಈಗಲೂ 24,980 ರೂ.ಗಳಿದೆ ಎಂದರೆ ನಂಬುತ್ತೀರ ನಂಬಲೇ ಬೇಕು.
ಕಾರಣ ಸಾರಿಗೆ ನೌಕರರಿಗೆ ಸರಿಯಾಗಿ ವೇತನ ಹೆಚ್ಚಳ ಮಾಡಿಸುವಲ್ಲಿ ಈ ಹಿಂದಿನಿಂದಲೂ ಹೋರಾಟ ಮಾಡಿಕೊಂಡು ಬಂದಿರುವ ಕೆಲವರ ತಾತ್ಸಾರದಿಂದ ಈ ವ್ಯತ್ಯಾಸ ಕಾಣುವಂತಾಗಿದೆ. ಹೀಗಾಗಿ ಇದನ್ನು ಸರಿ ಪಡಿಸುವ ಉದ್ದೇಶದಿಂದ ಸಾರಿಗೆ ನೌಕರರ ಒಕ್ಕೂಟ ನಮ್ಮ ನೌಕರರಿಗೂ ವಿದ್ಯಾರ್ಹತೆ, ಹುದ್ದೆಗೆ ತಕ್ಕ ವೇತನ ಕೊಡಿ ಎಂದು ಒತ್ತಾಯ ಮಾಡುತ್ತಿದೆ.
ಇಲ್ಲಿ ಹೇಳಬಹುದು ಈ ಹಿಂದೆ ಯಾವುದೇ ವಿದ್ಯಾರ್ಹತೆ ಇಲ್ಲದಿದ್ದರು ಕೇವಲ 3-4 ಕ್ಲಾಸ್ ಓದಿದವರನ್ನು ಕೆಲಸಕ್ಕೆ ತೆಗೆದುಕೊಂಡಿರುವವರಿಗೆ ಯಾವ ಲೆಕ್ಕಚಾರದಲ್ಲಿ ವೇತನ ಕೊಡಿಸುತ್ತೀರಿ ಎಂದು. ಇಲ್ಲಿ ಅವರ ಹುದ್ದೆಯ ಮಾನದಂಡದ ಆಧಾರದ ಮೇಲೆ ಅವರಿಗೆ ಮೂಲ ವೇತನವನ್ನು ಹುದ್ದೆಗೆ ಸರಿ ಸಮಾನವಾಗಿ ಕೊಡಬೇಕು ಎಂಬುವುದು ಒಕ್ಕೂಟದ ವಾದವಾಗಿದೆ.
ಇನ್ನು ಇದು ಕೇವಲ ಸಾರಿಗೆ ನೌಕರರಿಗೆ ಮಾತ್ರ ಈ ಮೂಲ ವೇತನದಲ್ಲಿ ವ್ಯತ್ಯಾಸವಾಗಿಲ್ಲ ಅಧಿಕಾರಿ ವರ್ಗದವರಿಗೂ ಇಲ್ಲಿ ತಾರತಮ್ಯವಾಗಿದೆ. ಆದರೆ ಇದನ್ನು ಸರಿ ಪಡಿಸಿ ಎಂದು ಏಕೋ ಅಧಿಕಾರಿಗಳು ಕೇಳುತ್ತಿಲ್ಲ. ಕೇಳಿದ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸದ್ಯ ಮೌನಕ್ಕೆ ಜಾರಿದ್ದಾರೆ. ಕಾರಣ ಗೊತ್ತಿಲ್ಲ.
ಅದೇನೆ ಇರಲಿ ಸರ್ಕಾರ ಈಗಾಗಲೇ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಮಾಡುವುದಕ್ಕೆ ಬಹುತೇಕೆ ನಿರ್ಧಾರ ಮಾಡಿದೆ. ಹೀಗಾಗಿ ನೌಕರರ ಪರವಾಗಿದ್ದೇವೆ ಎನ್ನುವ ಎಲ್ಲ ಸಂಘಟನೆಗಳು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿ ಈ 4 ವರ್ಷಕ್ಕೊಮ್ಮೆ ಆಗುತ್ತಿರುವ ಅನಾಹುತವನ್ನು ತಪ್ಪಿಸಬೇಕು ಎಂಬುವುದು ಒಕ್ಕೂಟದ ಎಲ್ಲ ಪದಾಧಿಕಾರಿಗಳು ಮನವಿ ಮಾಡುತ್ತಿದ್ದೇವೆ.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...