ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ.
ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಹೆಚ್ಚಳ ಹಾಗೂ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.
ಇದರ ಭಾಗವಾಗಿ ನಿನ್ನೆ ಅಂದರೆ ಜು.30ರಂದು ನಗರದ ಫ್ರೀಡಂಪಾರ್ಕ್ನಲ್ಲೂ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದು, ಆ ಸತ್ಯಾಗ್ರಹ ಬಹುತೇಕ ಯಶಸ್ವಿಯೂ ಆಗಿದೆ. ಇದನ್ನು ಗಮನಿಸಿರುವ ನಿಗಮದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು ಆ.5ರ ಮುಷ್ಕರವನ್ನು ಹತ್ತಿಕ್ಕುವ ಪ್ರಯತ್ನವಾಗಿ ನೌಕರರ ವಿರುದ್ಧ ಕ್ರಮ ಜರುಗಿಸಲು ಮುಂದಾಗುತ್ತಿರುವ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಸಾಮೂಹಿಕ ಉಪವಾಸ ಸತ್ಯಾಗ್ರಹದಲ್ಲಿ ಅಧಿಕಾರಿಗಳನ್ನು ನಾವು ಮುಷ್ಕರಕ್ಕೆ ಬಂಬಲಿ ನೀಡಿ ಎಂದು ಕರೆಯುತ್ತಿದ್ದೇವೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದು, ಇಲ್ಲಿ ವೇತನ ಹೆಚ್ಚಳವಾದರೆ ಅದು ನಿಗಮಗೂ ಕೂಡ ಆಗುತ್ತದೆ. ಹೀಗಾಗಿ ಬೆಂಬಲಿಸಿ ಎಂದು ಕೇಳಿರುವುದಾಗಿ ವೇದಿಕೆಯಲ್ಲೇ ತಿಳಿಸಿದ್ದಾರೆ.
ಆದರೆ, ಇಲ್ಲಿ ನೌಕರರು ಮುಷ್ಕರಕ್ಕೆ ಬಂಬಲ ಕೊಡುವುದಿರಲಿ ನೌಕರರು ಬಸ್ ನಿಲ್ಲಿಸಿ ಮುಷ್ಕರ ಮಾಡಿದರೆ ಮುಲಾಜಿಲ್ಲದೆ ಅಂಥವರನ್ನು ಅಮಾನತು ಮಾಡಿ ಎಂದು ಸೂಚನೆ (instruction) ನೀಡಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ಮುಷ್ಕರದಲ್ಲಿ ಭಾಗವಹಿಸಲು ಮುಂದಾಗುತ್ತಿರುವ ನೌಕರರ ಹೆಸರನ್ನು ಪಟ್ಟಿಮಾಡಿಕೊಳ್ಳಲಾಗುತ್ತಿದೆ.
ಇದರ ಜತೆಗೆ ಮುಷ್ಕರದ ದಿನಗಳಲ್ಲಿ ಯಾರಿಗೂ ರಜೆಗಳನ್ನು ಕೊಡಬಾರದು ಈಗಾಗಲೇ ಆ.5ರಿಂದ ರಜೆ ತೆಗೆದುಕೊಂಡಿರುವವರ ರಜೆಗಳನ್ನು ರದ್ದು ಮಾಡಿ ಡ್ಯೂಟಿಗೆ ಬರುವುದಕ್ಕೆ ತಾಕೀತು ಮಾಡಿ ಎಂಬ ಸೂಚನೆಯನ್ನು ಡಿಪೋಮಟ್ಟ ಅಧಿಕಾರಿಗಳಿಗೆ ಮೇಲಧಿಕಾರಿಗಳು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಬಸ್ನಿಲ್ಲಿಸಿ ಮುಷ್ಕರಕ್ಕೆ ಹೋಗುವ ನೌಕರರನ್ನು ಕೂಡಲೇ ಅಮಾನತು ಮಾಡಬೇಕು. ಜತೆಗೆ ಈಗಾಗಲೇ ಅಂದಿನಿಂದ ರಜೆ ತೆಗೆದುಕೊಂಡಿರುವ ನೌಕರರ ರಜೆಗಳನ್ನು ರದ್ದು ಮಾಡ ಡ್ಯೂಟಿಗೆ ಬರುವಂತರ ತಿಳಿಸಿ ಎಂದು ಮೇಲಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಇನ್ನೆಲೆಯಲ್ಲಿ ನೌಕರರು ಈಗ ಆ.5ರಿಂದ ನಡೆಯುವ ಮುಷ್ಕರಕ್ಕೆ ನಾವು ಹೋಗಬೇಕೋ ಬೇಡವೋ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ. ಇನ್ನು ಕೆಲ ನೌಕರರು ಅಧಿಕಾರಿಗಳು ಮುಷ್ಕರವನ್ನು ಬೆಂಬಲಿಸದಿದ್ದರೆ ನಾವು ಕೂಡ ಹೋಗುವುದಿಲ್ಲ ಡ್ಯೂಟಿಗೆ ಹೋಗುತ್ತೇವೆ ಎಂಬ ನಿಲುವಮನ್ನು ತಾಳಿದ್ದಾರೆ. ಹೀಗಾಗಿ ಆ.5ರ ಮುಷ್ಕರ ಅಧಿಕಾರಿಗಳ ನಡೆಯ ಮೇಲೆ ನಿಂತಿದೆ ಎಂದು ನೌಕರರು ಅಭಿಪ್ರಾಯಪಟ್ಟಿದ್ದಾರೆ.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...