KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ ಭ್ರಷ್ಟ ಅಧಿಕಾರಿಗಳು ಈ ಸೌಲಭ್ಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೌಕರರಿಗೆ ಕೊಡದೆ ಯಾಮಾರಿಸುತ್ತಿದ್ದಾರೆ.
ಇನ್ನು ಸಂಸ್ಥೆಯಲ್ಲಿ ಇರುವುದರಿಂದ ಈ ಬಗ್ಗೆ ತಿಳಿದುಕೊಂಡಿರುವವರು ನೌಕರರಿಗೆ ಮಾಹಿತಿ ಕೊಡಲು ಮುಂದಾದರೆ ನಿನ್ನದೆಷ್ಟೆ ಅಷ್ಟು ನೋಡಿಕೋ ಯಾವುದೇ ಮಾಹಿತಿಯನ್ನು ನೌಕರರಿಗೆ ಕೊಡಬೇಕು ಎಂದು ಮಾಹಿತಿ ಕೊಡಬೇಕಾದ ಅಧಿಕಾರಿಗಳೇ ಬೆದರಿಕೆ ಹಾಕುತ್ತಿದ್ದಾರೆ ಎಂದರೆ ಇದರ ಅರ್ಥ ಏನು?
ಇನ್ನು ಸಂಸ್ಥೆಯಿಂದ ನೌಕರರಿಗೆ ಸಿಗಬೇಕಿರುವ ಸೌಲಭ್ಯವನ್ನು ಮರೆಮಾಚುವ ಇಂಥ ಅಧಿಕಾರಿಗಳು ಇರುವುದರಿಂದ ನೌಕರರಿಗೆ ಕಾಲ ಕಾಲಕ್ಕೆ ಸಿಗಬೇಕಿರುವ ವೇತನ ಸೇರಿದಂತೆ ಇತರ ಸೌಲಭ್ಯಗಳನ್ನು ಪಡೆಯಲು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಥೋ ಏನ್ ಅಧಿಕಾರಿಗಳು ಇವರು ಅನಿಸುವಷ್ಟು ಅಸಹ್ಯವಾಗುತ್ತಿದೆ.
ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ಸವಿಸ್ತಾರವಾದ ಮಾಹಿತಿಯೊಂದಿಗೆ ವಿಡಿಯೋ ಮಾಡುತ್ತೇನೆಂದು ಮತ್ತು ಸಂಸ್ಥೆಯಿಂದ ಕ್ಯಾಶ್ ಬ್ಯಾಗ್ ಟ್ರೇ ಬಾಕ್ಸ್ ಮತ್ತು ಟ್ರಂಕ್ಕನ್ನು ಹೇಗೆ ತೆಗೆದುಕೊಳ್ಳುವುದು ಎಂದು ಸುತ್ತೋಲೆ ಸಮೇತ ಹಾಕಲು ಸಂಸ್ಥೆಯ ನೌಕರ ಜಯದೇವ್ ಎಂಬುವರು ಮುಂದಾಗಿದ್ದರು.
ಈ ಬಗ್ಗೆ ಹಾಕುವುದಕ್ಕೆ ಅವರ ವಾಟ್ಸಪ್ ಗ್ರೂಪ್ಗಳಲ್ಲಿ ಪೋಸ್ಟ್ ಮಾಡಿದ್ದರು. ಆದರೆ, ಅವರ ವಾಟ್ಸಪ್ ಗ್ರೂಪ್ಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಘಟಕ ವಿಭಾಗಗಳ ಗ್ರೂಪ್ಗಳಿಗೂ ಇದು ಶೇರ್ ಆಗಿತ್ತು. ಈ ನಡುವೆ ಯಾವುದೋ ಮಾರ್ಗದಲ್ಲಿ ಅಧಿಕಾರಿ ವರ್ಗದ ಕೆಲ ಭ್ರಷ್ಟ ಅಧಿಕಾರಿಗಳು ಇದನ್ನು ನೋಡಿದ್ದಾರೆ.
ಇಲ್ಲಿ ಅಧಿಕಾರಿಗಳಿಗೆ ಒಂದು ರೀತಿಯ ಬಕೆಟ್ ಹಿಡಿಯುವ ಕೆಲಸ ಮಾಡುತಿರುವ ನೌಕರರೂ ಅವರ ಗ್ರೂಪಲ್ಲಿದ್ದು ಅವರು ಹಾಕಿರುವ ಪೋಸ್ಟ್ಗಳನ್ನು ಸ್ಕ್ರೀನ್ಶಾಟ್ ತೆಗೆದು ವಾಟ್ಸಾಪ್ ಮಾಡಿದ್ದು, ನಿನ್ನೆ ದಿನ ಕೆಲವು ಅಧಿಕಾರಿಗಳು ಜಯದೇವ ಅವರ ಜತೆ ಮಾತನಾಡಿ ಸಂಸ್ಥೆಯ ನಿಯಮಾವಳಿ ಪ್ರಕಾರ ನೀನು ಡ್ರೈವಿಂಗ್ ಲೈಸೆನ್ಸ್ ರಿನಿವಲ್ ತೆಗೆದುಕೊಂಡಿದ್ದೀಯ ಮತ್ತು ಕ್ಯಾಶ್ ಬ್ಯಾಗ್ ತೆಗೆದುಕೊಂಡಿದ್ದೀಯ.
ಆದರೆ ಅದರ ಬಗ್ಗೆ ವಿಡಿಯೋ ಮಾಡಿ ಸವಿಸ್ತಾರವಾಗಿ ತಿಳಿಸುತ್ತೇನೆ ಎಂದು ಗ್ರೂಪ್ಗಳಲ್ಲಿ ಹಾಕಿದ್ದೀಯ ಬೇರೆಯವರಿಗೆ ಏಕೆ ತಿಳಿಸುತ್ತೀಯಾ? ನೀನು ಕೇಳಿದ್ದೀಯ ಕೊಟ್ಟಿದ್ದೇವೆ ಅವರು ಕೇಳಲಿ ಕೊಡುತ್ತೇವೆ ಅದನ್ನು ಬಿಟ್ಟು ಈ ರೀತಿಯಲ್ಲ ಮಾಡಬೇಡ. ಯಾವುದೇ ವಿಡಿಯೋ ಮಾಡಿ ಬಿಡಬೇಡ ಅವರಿಗೆಲ್ಲರಿಗೂ ಕೂಡ ಕೊಡಲಿಕ್ಕೆ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಜಯದೇವ್ ನೌಕರರಿಗೆ ಇದೇ ವಾಟ್ಸ್ಆಪ್ ಮೂಲಕವೇ ತಿಳಿಸಿದ್ದಾರೆ.
ಅಲ್ಲದೆ ಅಧಿಕಾರಿಗಳು ಈ ರೀತಿ ಬೆದರಿಕೆ ಹಾಕಿರುವುದರಿಂದ ನಾನು ಈ ವಿಡಿಯೋ ಮಾಡಲು ಮತ್ತೆ ಸವಿಸ್ತಾರವಾದ ಮಾಹಿತಿ ನೀಡಲು ಹಿಂದೇ ಸರಿಯುತ್ತಿದ್ದೇನೆ ಎಂದು ಕೂಡ ತಿಳಿಸಿದ್ದಾರೆ. ಜತೆಗೆ ನನ್ನನ್ನು ಪರ್ಸನಲ್ ಆಗಿ ಬಂದು ಮೀಟ್ ಮಾಡಿದರೆ ಎಲ್ಲ ಮಾಹಿತಿಯನ್ನು ನೀಡುತ್ತೇನೆ. ಅದರಂತೆ ತಾವು ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಹಣ ಮತ್ತು ಕ್ಯಾಶ್ ಬ್ಯಾಗ್ ತೆಗೆದುಕೊಳ್ಳಬಹುದು ಅಥವಾ ನಿಯಮಾವಳಿ ಪ್ರಕಾರ ಪತ್ರದ ಮುಖಾಂತರ ಬರೆದು ಕೊಡಿ ಕೊಡಬಹುದು ಎಂದು ತಿಳಿಸದ್ದಾರೆ.
ಸಾರಿಗೆ ನಿಗಮಗಳಲ್ಲಿ ನೌಕರರಿಗೆ ಸೌಲಭ್ಯ ಸಿಗಬೇಕು ಎಂದು ನಿಯಮ ಮಾಡಲಾಗಿದೆ. ಆದರೆ ಆ ನಿಯಮವನ್ನು ನೌಕರರಿಗೆ ತಿಳಿಸದೆ ಅಧಿಕಾರಿಗಳು ಏಕೆ ಈ ರೀತಿ ನಡೆಸುಕೊಳ್ಳುತ್ತಿದ್ದಾರೆ. ಇನ್ನು ಸೌಲಭ್ಯ ಪಡೆಯುವ ಬಗ್ಗೆ ಸಂಸ್ಥೆ ಹಣ ಖರ್ಚ್ ಮಾಡಿ ನೌಕರರಿಗೆ ಮಾಹಿತಿ ನೀಡಬೇಕಿತ್ತು. ಆದರೆ, ಅದನ್ನು ಒಬ್ಬ ಸಂಸ್ಥೆಯ ನೌಕರರ ಯಾವುದೇ ಸಂಭಾವನೆ ಪಡೆಯದೆ ಉಚಿತವಾಗಿ ನೌಕರರಿಗೆ ಸೌಲಭ್ಯ ಪಡೆಯುವುದು ಹೇಗೆ ಎಂದು ತಿಳಿಸಲು ಮುಂದಾದರೆ ಅವರನ್ನು ಬೆದರಿಸುವುದು ಎಷ್ಟರ ಮಟ್ಟಿಗೆ ಸರಿ.
ಈ ರೀತಿ ಒಂದು ವೇಳೆ ಬೆದರಿಕೆ ಹಾಕಿದರೆ ಫೋನ್ ಮಾಡಿದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು, ಅಲ್ಲದೆ ನೌಕರರಿಗೆ ಸಿಗಬೇಕಿರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಮಸ್ತ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಆಗ್ರಹಿಸಿದ್ದಾರೆ.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...