KSRTC: ಮೊಬೈಲ್ ಬಳಸಿ ಸಹ ಪ್ರಯಾಣಿಕರಿಗೆ ಕಿರಿಕಿರಿ ಮಾಡಿದರೆ ಬಸ್ನಿಂದ ಕೆಳಗಿಳಿಸ್ತಾರೆ ಎಚ್ಚರ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ನಲ್ಲಿ ಸಹ ಪ್ರಯಾಣಿಕರಿಗೆ ತೊಂದರೆ ಆಗುವಂತೆ ಮೊಬೈಲ್ನಲ್ಲಿ ಜೋರಾಗಿ ಹಾಡು ಹಾಕುವುದು, ಗಟ್ಟಿಯಾಗಿ ಮಾತನಾಡುವುದು, ಪಕ್ಕದಲ್ಲಿರುವವರಿಗೆ ಕಿರಿಕಿರಿ ಆಗುವಂತೆ ಸಿನಿಮಾ ನೋಡುವುದು ಹೀಗೆ ರಗಳೆಗಳನ್ನು ಮಾಡಿದರೆ ಬಸ್ನಿಂದ ಚಾಲಕ-ನಿರ್ವಾಹಕರು ಕಳಗಿಳಿಸುತ್ತಾರೆ ಹುಷಾರ್!
ಹೌದು! ಇದನ್ನು ತಪ್ಪಿಸಲು ಸಾರಿಗೆ ಸಂಸ್ಥೆಗಳು ಮುಂದಾಗಿದ್ದು, ಪ್ರಯಾಣಿಕರ ವಿರುದ್ಧ ಇನ್ನು ಮುಂದೆ ಬಸ್ ಚಾಲನಾ ಸಿಬ್ಬಂದಿಗಳು ಕ್ರಮ ಜರುಗಿಸುವ ಅಧಿಕಾರವನ್ನು ಹೊಂದಿದ್ದಾರೆ. ಅಲ್ಲದೆ ಅಂಥ ಪ್ರಯಾಣಿಕರನ್ನು ಬಸ್ನಿಂದ ಇಳಿಸಲೂ ಹೈ ಕೋರ್ಟ್ ಅದೇಶದ ಮೇರೆಗೆ ಇಲಾಖೆ ಕೂಡ ಚಾಲನಾ ಸಿಬ್ಬಂದಿಗಳಿಗೆ ಅಧಿಕಾರ ನೀಡಿದೆ.
ಹೈ ಕೋರ್ಟ್ ಸೂಚನೆ ಏನು?: ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆಯಾಗುವಂತೆ ಮೊಬೈಲ್ ಬಳಸುವುದು ಸರಿಯಲ್ಲ. ಬಸ್ನಲ್ಲಿ ಪ್ರಯಾಣಿಸುವಾಗಲಂತೂ ಅನೇಕರು ಈ ಮೊಬೈಲ್ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಹೈಕೋರ್ಟ್ ವಕೀಲ ತುಮಕೂರಿನ ಎಲ್. ರಮೇಶ್ ನಾಯಕ್ ಎಂಬುವರು ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿತ್ತು. ಇದರ ಅನ್ವಯ ಇಲಾಖೆಯು ಎಲ್ಲ ಸಾರಿಗೆ ನಿಗಮಗಳಿಗೆ ಕಟ್ಟುನಿಟ್ಟಿನ ಕ್ರಮಕೈಗೊಂಡು ಅದರ ಅನುಷ್ಠಾನಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದೆ.
ಕೆಲವರಿಗೆ ಸೌಂಡ್ ಅಲರ್ಜಿ ಇದೆ. ಅಂಥವರು ಬಸ್ನಲ್ಲಿ ಪ್ರಯಾಣಿಸುವಾಗ ಭಾರಿ ಸಮಸ್ಯೆ ಅನುಭವಿಸುತ್ತಿರುತ್ತಾರೆ. ಆದರೆ ಅದನ್ನು ಹೇಳಿಕೊಳ್ಳುವುದಕ್ಕೆ ಆಗುವುದಿಲ್ಲ. ಒಂದು ವೇಳೆ ಹೇಳಿಕೊಂಡರು ಕೆಲವರು ಕಿವಿಗೆ ಹಾಕಿಕೊಳ್ಳುವುದಿಲ್ಲ. ಹೀಗಾಗಿ ಮೊಬೈಲ್ ಸೌಂಡ್ ಕಿರಿಕಿರಿ ತಪ್ಪಿಸಲು ಹಾಗೂ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲು ಹೈಕೋರ್ಟ್ ಸೂಚನೆ ಮೇರೆಗೆ ಸಾರಿಗೆ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮುಲಾಜಿಲ್ಲದೆ ಬಸ್ಸಿನಿಂದ ಇಳಿಸಿ: ಕರ್ನಾಟಕ ಮೋಟಾರು ವಾಹನಗಳ ನಿಯಮಗಳು-1989, ನಿಯಮ 94(1) (ವಿ) ಅನ್ನು ಉಲ್ಲಂಘಿಸಿ ನಿಗಮದ ಬಸ್ಸುಗಳಲ್ಲಿ ಮೊಬೈಲ್ ಮೂಲಕ ಜೋರು ಶಬ್ದ ಮಾಡುವುದನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಕರ್ತವ್ಯ ನಿರತ ಸಿಬ್ಬಂದಿ ಸೂಕ್ತ ತಿಳಿವಳಿಕೆ ನೀಡಬೇಕು.
ಹೆಚ್ಚಾಗಿ ಶಬ್ದ ಬರದಂತೆ, ಪ್ರಯಾಣಿಕರಿಗೆ ತೊಂದರೆಯಾಗದಂತೆ ಮೊಬೈಲ್ ಬಳಸುತ್ತಿದ್ದರೆ ಯಾವುದೇ ಸಮಸ್ಯೆ ಇಲ್ಲ. ಒಂದು ವೇಳೆ ವಿರುದ್ಧವಾಗಿ ಬಳಸುತ್ತಿದ್ದರೆ ಬಳಸದಂತೆ ಚಾಲನಾ ಸಿಬ್ಬಂದಿಗಳು ಮನವಿ ಮಾಡಿ ನಿಮ್ಮ ಮನವಿಗೆ ಸ್ಪಂದಿಸದಿದ್ದರೆ ನಿಯಮಾನುಸಾರ ಚಾಲಕ ಅಥವಾ ನಿರ್ವಾಹಕರು ಬಸ್ಸಿನಿಂದ ಆ ಪ್ರಯಾಣಿಕನನ್ನು ಇಳಿಸಬೇಕು. ಆತ ಕೆಳಕ್ಕೆ ಇಳಿಯುವವರೆಗೂ ಬಸ್ಸನ್ನು ಅಲ್ಲೇ ನಿಲ್ಲಿಸಬೇಕು ಹಾಗೂ ಕೆಳಕ್ಕಿಳಿದ ಪ್ರಯಾಣಿಕಗೆ ಬಸ್ ದರವನ್ನು ಹಿಂತಿರುಗಿಸಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ವಕೀಲ ಎಲ್. ರಮೇಶ್ ನಾಯಕ್: ಇತ್ತೀಚಿನ ಜನರು ಮೊಬೈಲ್ಗೆ ಅವಲಂಬಿತರಾಗಿದ್ದಾರೆ. ಬಸ್ನಲ್ಲಿ ಪ್ರಯಾಣಿಸುವಾಗ ಸಹ ಪ್ರಯಾಣಿಕರ ಕಡೆಗೆ ಹೆಚ್ಚು ಗಮನ ಕೊಡದೆ ತಮ್ಮಿಷ್ಟದಂತೆ ಜೋರಾಗಿ ಹಾಡು, ಸಿನಿಮಾ, ವಾರ್ತೆ ಮೊದಲಾದ ಆಡಿಯೋ ಅಥವಾ ವಿಡಿಯೋಗಳನ್ನು ಜೋರಾಗಿ ಹಾಕುವುದು ಇತರರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದೆ.
ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆಯಾಗುವಂತೆ ಮೊಬೈಲ್ ಬಳಸುವುದು ಸರಿಯಲ್ಲ. ಬಸ್ನಲ್ಲಿ ಪ್ರಯಾಣಿಸುವಾಗಲಂತೂ ಅನೇಕರು ಈ ಮೊಬೈಲ್ ಕಿರಿಕಿರಿ ಅನುಭವಿಸುತ್ತಿದ್ದಾರೆ. ಆದ್ದರಿಂದ ನಾನು ಹೈಕೋರ್ಟ್ನಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಹೈಕೋರ್ಟ್ ವಕೀಲ ತುಮಕೂರಿನ ಎಲ್. ರಮೇಶ್ ನಾಯಕ್ ತಿಳಿಸಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...