Please assign a menu to the primary menu location under menu

NEWSಆರೋಗ್ಯನಮ್ಮಜಿಲ್ಲೆ

KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ – ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು

ಪ್ರತಿ ನೌಕರನೂ 100 ರೂ. ಹಾಕಿದರೂ ಸಹೋದ್ಯೋಗಿಗೆ ದೊಡ್ಡಮಟ್ಟದಲ್ಲಿ ನೆರವಾಗುತ್ತದೆ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದ ಸಾಗರ ಬಸ್‌ ನಿಲ್ದಾಣದಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ಸಾರಿಗೆ ಸಿಬ್ಬಂದಿ 50 ವರ್ಷದ ರವಿ ನಾಗೇಶ್‌ ನಾಯ್ಕ್‌ ಅವರ ಚಿಕಿತ್ಸೆಗೆ ಆರ್ಥಿಕ ನೆರವು ಬೇಕಿದೆ.

ಸಾಗರ ಬಸ್ಟ್ಯಾಂಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ನಾಗೇಶ್‌ ನಾಯ್ಕ್‌ ಅವರು ಆರೋಗ್ಯದಲ್ಲಿ ಏರುಪೇರಾಗುತ್ತಿದ್ದರೂ ಕೆಲಸಕ್ಕೆ ಪ್ರಾಮಾಣಿಕವಾಗಿ ಹಾಜರಾಗುತ್ತಿದ್ದರು. ಈ ಹಿಂದೆ ಅಪಘಾತವೊಂದರಲ್ಲಿ ಕಾಲು ಕಳೆದುಕೊಂಡ ಮೇಲೆ ದೈಹಿಕ ಕ್ಷಮತೆ ಕಳೆದುಕೊಂಡರೂ ಮಾನಸಿಕವಾಗಿ ಕುಗ್ಗದೆ ಎಲ್ಲರ ಜತೆಗೂ ನಸುನಗುತ್ತಾ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತಿದ್ದರು.

ಇಂಥ ಪ್ರಾಮಾಣಿಕ ನೌಕರ ರವಿ ನಾಗೇಶ್ ನಾಯ್ಕ್ ಅವರಿಗೆ ಕೆಲಸದ ವೇಳೆಯೇ ಬ್ರೈನ್‌ಸ್ಟ್ರೋಕ್‌ ಆಗಿ ಕುಸಿದುಬಿದ್ದಿದ್ದಾರೆ. ಅದನ್ನು ಗಮನಿಸಿದ ಸಹೋದ್ಯೋಗಿಗಳು ತಕ್ಷಣ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಲ್ಲರಿಗೂ ಗೊತ್ತಿರುವಂತೆ ಮಣಿಪಾಲ ಆಸ್ಪತ್ರೆಯಲ್ಲಿ ಉತ್ಸಮ ಚಿಕಿತ್ಸೆಯೇನೋ ದೊರೆಯುತ್ತದೆ. ಇದರ ಹೊರತಾಗ್ಯೂ ಹಣ ಸಾಕಷ್ಟು ಖರ್ಚು ಮಾಡಲೇಬೇಕಾಗುತ್ತದೆ. ಆದರೆ ಸಾಮಾನ್ಯ ನೌಕರನಾದ ರವಿ ನಾಗೇಶ್‌ ನಾಯ್ಕ್‌ ಮತ್ತು ಕುಟುಂಬದವರಿಗೆ ಆ ಆಸ್ಪತ್ರೆಗೆ ಹಣ ಭರಿಸುವಷ್ಟು ಶಕ್ತಿಯಿಲ್ಲ. ಹೀಗಾಗಿ ಅವರಿಗೆ ಹೆಚ್ಚಿನ ಆರ್ಥಿಕ ನೆರವಿನ ಅಗತ್ಯವಿದೆ.

ಆಶ್ಚರ್ಯ ಎಂದರೆ ನೌಕರರು ಮತ್ತು ಸಾರ್ವಜನಿಕರಲ್ಲಿ ಮನುಷ್ಯತ್ವ ಇನ್ನೂ ಇದೇ ಎನ್ನುವುದಕ್ಕೆ ಸಾಕ್ಷಿ ಎನ್ನುವಂತೆ ಅವರ ಖಾತೆಗೆ ಈಗಾಗಲೇ ಹಣ ಸಂದಾಯವಾಗಿದೆ. ಗೂಗಲ್‌ ಪೇ-ಫೋನ್‌ ಪೇ ಮೂಲಕ ಹಣ ನೀಡುತ್ತಿದ್ದಾರೆ. ಆದರೆ ಆ ಹಣ ಸಾಲುತ್ತಿಲ್ಲ. ಆದ್ದರಿಂದ ಸಾರಿಗೆ ನೌಕರರು ಮತ್ತು ಸಾರ್ವಜನಿಕರು ತಮ್ಮ ಕೈಲಾದ ಸಹಾಯವನ್ನು ಮಾಡಬೇಕಿದೆ.

ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು ಚಿಕಿತ್ಸೆಗೆ ಹೆಚ್ಚಿನ ಹಣದ ಅಗತ್ಯವಿದೆ. ಹೀಗಾಗಿ ಅವರಿಗೆ ಆರ್ಥಿಕವಾಗಿ ಬೆಂಬಲ ನೀಡುವ ಮೂಲಕ ಅವರ ಆರೋಗ್ಯ ಚೇತರಿಕೆಗೆ ಸಹಾಯ ಬೇಕಿದೆ.  IFSC : SBIN0007906 A/c No: 41394848648 SBI Ashoka road Sagara ಬ್ರಾಂಚ್‌ ಈ ಖಾತೆಗೆ ನೆರವು ನೀಡುವವರು ಹಣ ಸಂದಾಯ ಮಾಡಬಹುದು.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ