KSRTC: ಬ್ರೇಕ್ ಫೇಲಾಗಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಬಸ್- ತಪ್ಪಿದ ಭಾರಿ ಅನಾಹುತ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ.

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಗರದ ಬಸ್ ನಿಲ್ದಾಣದಲ್ಲಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ನಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪೂರ್ಣ ಪುಡಿಯಾಗಿದ್ದು, ಬಳಿಕ ಬಸ್ ಮರಕ್ಕೆ ಡಿಕ್ಕಿಯಾಗಿ ನಿಂತಿದೆ. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಅದೃಷ್ಟವಶಾತ್ ಈ ಅವಘಡ ಬಸ್ ನಿಲ್ದಾಣದೊಳಗೆ ಸಂಭವಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಇದೇ ಘಟನೆ ರಸ್ತೆ ಮಧ್ಯೆ ನಡೆದಿದ್ದರೆ ಗಂಭೀರ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿತ್ತು.
ಸರ್ಕಾರಿ ಬಸ್ಗಳ ನಿರ್ವಹಣಾ ಸ್ಥಿತಿಗತಿಗಳ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಬಸ್ಗಳ ತಾಂತ್ರಿಕ ವರಿಶೀಲನೆ ಮತ್ತು ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಅಲ್ಲದೆ ಡಿಪೋಗಳಿಂದ ಬಸ್ ಹೊರಗಡೆ ಬರುವಾಗಲೇ ಬಸ್ನಲ್ಲಿ ಇರುವ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಎಂಬ ಬಗ್ಗೆ ಡಿಪೋ ಡಿಎಂಗೆ ಗೊತ್ತಿಲ್ಲವೇ? ಇವರನ್ನು ಘಟಕ ವ್ಯವಸ್ಥಾಪಕರಾಗಿ ಸಂಬಳಕೊಟ್ಟು ಕೂರಿಸಿರುವುದು ಈ ರೀತಿಯ ಬಸ್ ಕಳಿಸಲಿ ಎಂಬುದಕ್ಕಾಗಿಯಾ ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗಂತು ಈರೀತಿಯ ಘಟನೆಗಳು ಮರುಕಳಿಸುತ್ತಲೇ ಇವೆ ಆದರೂ ಸಾರಿಗೆ ಸಚಿವರು ಏನು ಮಾಡುತ್ತಿದ್ದಾರೆ? ಸಂಬಂಧಪಟ್ಟ ಎಂಡಿಗಳು ಏನು ಮಾಡುತ್ತಿದ್ದಾರೆ? ವಿಭಾಗೀಯ ನಿಯಂತ್ರಣಾಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಇನ್ನಾದರೂ ಜನವರ ಜೀವಗಳ ಜತೆ ಆಟವಾಡುವುದನ್ನು ಬಿಟ್ಟು ಸುಸ್ಥಿತಿಯಲ್ಲಿರುವ ಬಸ್ಗಳನ್ನು ರಸ್ತೆ ಮೇಲೆ ಬಿಡಬೇಕು ಎಂದು ಆಗ್ರಹಿಸಿದ್ದಾರೆ.
Related









