CRIMENEWSನಮ್ಮಜಿಲ್ಲೆ

KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ – ಚಾಲಕನ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊಬೈಲ್ನಲ್ಲಿ ಮಾತನಾಡಿಕೊಂಡು ಚಾಲಕ ಬಸ್‌ ಓಡಿಸುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಈ ರೀತಿ ಬೇಜವಾಬ್ದಾರಿಯ ಚಾಲಕನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ದಾವಣಗೆರೆ ಘಟಕ 1ರ KA 51 F 0067 ಸೂಪರ್ ಪ್ಲಸ್ ಎಲೆಕ್ಟ್ರಿಕ್ ಎ/ಸಿ ಬಸ್ಇದಾಗಿದ್ದು, ಗುರುವಾರ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಮೊಬೈಲ್ನಲ್ಲಿ ಮಾತನಾಡುತ್ತಲೇ ಚಾಲಕ ಸುನೀಲ್ ಕುಮಾರ್ ಬಸ್ ಚಾಲನೆ ಮಾಡಿದ್ದಾರೆ.

ಮೊಬೈಲ್ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ವಿಡಿಯೋ ಸಿಕ್ಕಿದ್ದು, ಚಾಲಕನ ಈ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಈ ನಿರ್ಲಕ್ಷ್ಯಕ್ಕೆ ಚಾಲಕನ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಈ ರೀತಿ ಮೊಬೈಲ್ಫೋನ್ನಲ್ಲಿ ಮಾತನಾಡಿಕೊಂಡು ಬಸ್ಓಡಿಸುವಾಗ ಏನಾದರೂ ಅವಘಡ ಸಂಭವಿಸಿದೆ ಬಸ್ನಲ್ಲಿರುವ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವ ಮಟ್ಟದಲ್ಲಿ ತೊಂದರೆ ಆಗುತ್ತದೆ ಎಂಬುವುದನ್ನು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವಾಗುತ್ತದೆ. ಹೀಗಾಗಿ ಆದಷ್ಟು ಫೋನ್ಗಳನ್ನು ಬಳಸದೆ ಚಾಲಕರು ತಮ್ಮ ಚಾಲನೆಯತ್ತ ಗಮನ ಹರಿಸಬೇಕಿದೆ.

ಚಾಲಕರನ್ನೇ ನಂಬಿ 50ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಅರಾಮವಾಗಿ ಪ್ರಯಾಣಿಸುತ್ತಿರುತ್ತಾರೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಚಾಲಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರೆ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಚಾಲನಾ ಸಿಬ್ಬಂದಿಗಳು ತಮ್ಮ ಕರ್ತವ್ಯದ ಮೇಲೆ ಹೆಚ್ಚು ಗಮನಕೊಡಬೇಕಿದೆ.

Deva
the authorDeva

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ