ಪಂಕ್ಚರಾಗಿ ನಿಂತಿದ್ದ ಕ್ಯಾಂಟರ್ಗೆ KSRTC ಬಸ್ ಡಿಕ್ಕಿ: ಚಾಲಕನ ಕಾಲುಗಳು ಮುರಿತ- 20ಕ್ಕೂ ಹೆಚ್ಚು ಮಂದಿಗೆ ಗಾಯ

ರಾಮನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕಾಲುಗಳು ಮುರಿದಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಲೂರು ಬಳಿ ನಡೆದಿದೆ.
ಚಿಕ್ಕಮಂಗಳೂರು ವಿಭಾಗದ ಸಕಲೇಶಪುರ ಘಟಕದ ಬಸ್ ಅಪಘಾತಕೀಡಾಗಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್ನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.
ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಈ ವೇಳೆ ಕ್ಯಾಂಟರ್ ಪಂಕ್ಚರ್ ಆಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿತ್ತು. ಚಾಲಕ ಅದನ್ನೆಲ್ಲ ಗಮನಿಸದೆ ಬಸ್ ಚಲಾಯಿಸಿದ್ದ ಪರಿಣಾಮ ಬಸ್ ಕ್ಯಾಂಟರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಇನ್ನು ಅಪಘಾತದಿಂದ ಗಾಯಗೊಂಡ ಪ್ರಯಾಣಿಕರು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಬಂಧ ಸೋಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Related

You Might Also Like
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...
ಸಾರಿಗೆ ನೌಕರರ ಮುಷ್ಕರದ ಬಗ್ಗೆ ನನ್ನ ಅಭಿಪ್ರಾಯ-ಅನಿಸಿಕೆಗಳು
ಸಾರಿಗೆ ಮುಷ್ಕರ ಎಂಬುದು ಎಲ್ಲಾ ಅಧಿಕಾರಿಗಳು ಮತ್ತು ನೌಕರ ಸಿಬ್ಬಂದಿಗಳ ವೇತನಕ್ಕೆ ಸಂಬಂಧಪಟ್ಟಿರುವುದಾಗಿರುತ್ತದೆ.ಎಲ್ಲರೂ ಒಗ್ಗಟ್ಟಿನಿಂದ ಒಟ್ಟಾಗಿ ಮುಷ್ಕರ ಮಾಡಬೇಕಾಗಿದೆ. ಆದರೆ ನಮ್ಮ ನಿಗಮದಲ್ಲಿ ಅಧಿಕಾರಿಗಳು ಮತ್ತು ಆಡಳಿತ...
ಡಿ.31ರವರೆಗೆ ಸಾರಿಗೆ ನೌಕರರು ಮುಷ್ಕರ ಮಾಡದಂತೆ ಎಸ್ಮಾಜಾರಿ ಮಾಡಿದ ಸರ್ಕಾರ- ಎಸ್ಮಾ ಜಾರಿ ಮಾಡಿದರೆ ಮುಷ್ಕರಕ್ಕೆ ಅವಕಾಶವಿಲ್ಲವೇ? ತಜ್ಞರ ಹೇಳಿಕೆ ಏನು?
ಬೆಂಗಳೂರು: ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಬಾಗಿಲು ಬಡಿದು ಸುಸ್ತಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಸಿಬ್ಬಂದಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಜುಲೈ 29ರಿಂದ...
KSRTC ನೌಕರರ ವೇತನ ಹೆಚ್ಚಳ ಸಂಬಂಧ ಉಪವಾಸ ಸತ್ಯಾಗ್ರಹ ಮಾಡುವ ಕುರಿತು ಜು.18ರಂದು ಸುದ್ದಿಗೋಷ್ಠಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜು.29ರಿಂದ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವ...
ಜು.29ರೊಳಗೆ KSRTC ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ: ಎಂಡಿಗೆ ಒಕ್ಕೂಟ ಮನವಿ
ಬೆಂಗಳೂರು: ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಇದೇ ಜುಲೈ...
ಬೀಡನಹಳ್ಳಿ: ಸಂಭ್ರಮದ ಚಾಮುಂಡೇಶ್ವರಿ ವರ್ಧಂತಿ – ಭಕ್ತರಿಗೆ ಅನ್ನಸಂತರ್ಪಣೆ
ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು...