CRIMENEWSನಮ್ಮಜಿಲ್ಲೆ

ಪಂಕ್ಚರಾಗಿ ನಿಂತಿದ್ದ ಕ್ಯಾಂಟರ್‌ಗೆ KSRTC ಬಸ್‌ ಡಿಕ್ಕಿ: ಚಾಲಕನ ಕಾಲುಗಳು ಮುರಿತ- 20ಕ್ಕೂ ಹೆಚ್ಚು ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್‌ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಕಾಲುಗಳು ಮುರಿದಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಲೂರು ಬಳಿ ನಡೆದಿದೆ.

ಚಿಕ್ಕಮಂಗಳೂರು ವಿಭಾಗದ ಸಕಲೇಶಪುರ ಘಟಕದ ಬಸ್‌ ಅಪಘಾತಕೀಡಾಗಿದ್ದು, ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಬಸ್ಸಿನಲ್ಲಿದ್ದ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ನ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.

ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು ಈ ವೇಳೆ ಕ್ಯಾಂಟರ್ ಪಂಕ್ಚರ್ ಆಗಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿತ್ತು. ಚಾಲಕ ಅದನ್ನೆಲ್ಲ ಗಮನಿಸದೆ ಬಸ್ ಚಲಾಯಿಸಿದ್ದ ಪರಿಣಾಮ ಬಸ್ ಕ್ಯಾಂಟರ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಇನ್ನು ಅಪಘಾತದಿಂದ ಗಾಯಗೊಂಡ ಪ್ರಯಾಣಿಕರು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಬಂಧ ಸೋಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Deva
the authorDeva

Leave a Reply

error: Content is protected !!
Latest news
ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಸೌಲಭ್ಯ ಜಾರಿಗೆ ಮುಂದಾದ ಸಾರಿಗೆ ಇಲಾಖೆ ಕಾರು-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಐವರು ಸಾವು, ಏಳು ಮಂದಿಗೆ ಗಂಭೀರ ಗಾಯ ನೌಕರರ 18 ತಿಂಗಳ ಬಾಕಿ ಹಣ 6 ಕಂತುಗಳಲ್ಲಿ ನೀಡಲಾಗುವುದು: ವಿತ್ತ ಸಚಿವರ ಭರವಸೆ KSRTC ಕೋಲಾರ ವಿಭಾಗದ ಅಧಿಕಾರಿಗಳ ದರ್ಪ- ಚಾಲಕರ ಹೆದರಿಸಿ ವಿಶ್ರಾಂತಿ ರಹಿತ ಡಬಲ್‌ ಡ್ಯೂಟಿ, ಸಿಂಗಲ್‌ ಪೇಮೆಂಟ್‌, ಒಟಿ ...