NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ ಟಿಕೆಟ್‌ ದರ ಹೆಚ್ಚಳ- ಸ್ಪಷ್ಟನೆ ಕೊಟ್ಟ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರಿ ಬಸ್​​ಗಳ ಟಿಕೆಟ್ ದರ ಏರಿಕೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಆದರೆ, ಈ ವಿಚಾರವಾಗಿ ಸಾರಿಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಪ್ರಯಾಣಿಕರ ವಿರೋಧದ ನಡುವೆಯೂ ನಮ್ಮ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಅಸ್ತು ಎಂದಿದೆ. ಸೋಮವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಹೀಗಿರುವಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಟಿಕೆಟ್‌ ದರ ಹೆಚ್ಚಳವಾಗುತ್ತಿದೆ ಎಂಬ ವಿಷಯದಿಂದ ಜನರು ಸಿಟ್ಟಾಗಿದ್ದರು. ಅದಕ್ಕೆ ಸಾರಿಗೆ ಅಧಿಕಾರಿಗಳು ಯಾವುದೇ ಟಿಕೆಟ್ ದರ ಏರಿಕೆ ಆಗಿಲ್ಲ ಎಂದು ತಿಳಿಸಿದ್ದಾರೆ.

ಪ್ರಕಟಣೆಯಲ್ಲಿ ಏನಿದೆ?: ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣ ವ್ಯತ್ಯಾಸದ ಬಗ್ಗೆ ವರದಿಯಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕೆಎಸ್ಆರ್​​ಟಿಸಿ ನಿಗಮ, ಮೈಸೂರು ಮತ್ತು ಬೆಂಗಳೂರು ನಡುವಿನ ಐರಾವತ ಕ್ಲಬ್ ಕ್ಲಾಸ್ ದರ 430 ರೂ. ಆಗಿರುತ್ತದೆ ಎಂದು ತಿಳಿಸಿದೆ.

ಪ್ರಯಾಣದ ಸಮಯದಲ್ಲಿ ವಿತರಣೆಯಾಗಿರುವ 431 ರೂ. ಮೌಲ್ಯದ ಟಿಕೆಟ್ ನಿರ್ವಾಹಕರು ಮಾರ್ಗಕ್ಕೆ ತೆರಳಿ ಕಾರ್ಯಾಚರಣೆ ಮಾಡುವಾಗ ಈ ಮಾರ್ಗಕ್ಕೆ ಇಟಿಎಂ ಯಂತ್ರದಲ್ಲಿ ಆಯ್ಕೆ ಮಾಡಬೇಕಾದ ರೂಟ್ ನಂಬರ್ 94ರ ಬದಲು ಇಟಿಎಂ ಯಂತ್ರದ ರೂಟ್ ನಂಬರ್ 908ನ್ನು ತಪ್ಪಾಗಿ ಆಯ್ಕೆ ಮಾಡಿಕೊಂಡು ಕಾರ್ಯಾಚರಣೆ ಮಾಡಿರುವುದರಿಂದ ಈ ರೀತಿ ಆಗಿದ್ದು, ಇದನ್ನು ಸರಿಪಡಿಸಲಾಗಿದೆ. ಯಾವುದೇ ದರ ಏರಿಕೆ ಆಗಿಲ್ಲ ಎಂದು ಕೆಎಸ್ಆರ್​​ಟಿಸಿ ನಿಗಮ ಸ್ಪಷ್ಟನೆ ನೀಡಿದೆ.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಇತ್ತೀಚೆಗೆ ಸಿಡಿದೆದ್ದಿದ್ದರು. ಆ ಮೂಲಕ ‘ಬೆಂಗಳೂರು ಚಲೋ’ಗೆ ಕರೆ ನೀಡಿದ್ದರು. ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನೇತೃತ್ವದಲ್ಲಿ ಫ್ರೀಡಂ ಪಾರ್ಕ್​​ನಲ್ಲಿ ನಾಲ್ಕೂ ನಿಗಮಗಳಿಂದ ಪ್ರತಿಭಟನೆ ನಡೆಯಬೇಕಿತ್ತು. ಆದರೆ ಅನಂತ್ ಸುಬ್ಬರಾವ್​ ಅವರ ನಿಧನ ಹಿನ್ನೆಲೆ ಬೆಂಗಳೂರು ಚಲೋ ಅನ್ನು ಮುಂದೂಡಲಾಗಿದೆ.

ಇನ್ನು ಇದೇ 19 ರಂದು ಪ್ರತಿಭಟನಾ ಧರಣಿ ಹಮ್ಮಿಕೊಳ್ಳುವುದಾಗಿ ಕೆಲ ಸಂಘಟನೆಗಳು ತಿಳಿಸಿವೆ.

Megha
the authorMegha

Leave a Reply

error: Content is protected !!
Latest news
BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ! ಮೇ 20ರಿಂದ ಸಾರಿಗೆ ನೌಕರರ ಮುಷ್ಕರ ಮಾಡೇ ತೀರುತ್ತೇವೆ: ವಿಜಯಭಾಸ್ಕರ್ KSRTC: ಮೇ 20 ರಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಎಂಟಿಸಿ-ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘ ಬೆಂಬಲ ವಿಜಯಪಥ ವರದಿಗೆ ಎಚ್ಚೆತ್ತ NWKRTC: ನೌಕರರಿಗೆ 11ತಿಂಗಳ ಹಿಂಬಾಕಿ ಪಾವತಿಯಾಗಿದೆ- ಸ್ಪಷ್ಟನೆ ನೀಡಿ ಸಿಬ್ಬಂದಿ ಗೊಂದಲ ನ... ಸಾರಿಗೆ ನೌಕರರಿಗೆ ಶೇ.12.5 ರಷ್ಟು ವೇತನ ಹೆಚ್ಚಳ ತೀವ್ರ ಖಂಡನೀಯ: ನೌಕರರ ಹಕ್ಕಿಗಾಗಿ ಹೋರಾಟಕ್ಕೆ ಸಿದ್ಧ: ಬೀದರ್‌ ಬಿಎಂ... ಚಿನ್ನ ಇಂದು ಬಲುಭಾರ: 1ಗ್ರಾಂ 22K ಚಿನ್ನದ ಬೆಲೆ ₹1275 ಏರಿಕೆ, ಬೆಳ್ಳಿ ₹20 ಸಾವಿರ ಏರಿಕೆ NWKRTC: ನೌಕರರಿಗೆ 11ತಿಂಗಳ ಬದಲಿಗೆ 8 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಕಿದ್ದಾರಾ? ಗೊಂದಲದಲ್ಲಿ ಸಿಬ್ಬಂದಿ! "ನಷ್ಟದ ನೆಪದಲ್ಲಿ ವೇತನ ತಡೆಹಿಡಿಯಲು" ಅವಕಾಶ ಇಲ್ಲ: ಭಾರತ ಸಂವಿಧಾನ ಮಿಲನ ಕಳನಾಯಕ ಖ್ಯಾತಿಯ, ಹಿಟ್ಲರ್ ಕಲ್ಯಾಣ’ ಧಾರವಾಹಿಯ ಹೀರೋ ದಿಲೀಪ್ ರಾಜ್ ಇನ್ನಿಲ್ಲ KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..?