CRIMENEWSನಮ್ಮಜಿಲ್ಲೆ

KSRTC ಬಸ್-ಟಿಪ್ಪರ್ Accident ಪ್ರಕರಣ: ಮೂವರ ವಿರುದ್ಧ FIR, ಇಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ

ಕುಂದಾಪುರ: ತಲ್ಲೂರು ಮೂಲಕ ನೇರಳಕಟ್ಟೆ-ಆಜ್ರಿ-ಸಿದ್ದಾಪುರ ರಸ್ತೆಯ ಶೆಟ್ರಕಟ್ಟೆ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ.

ಟಿಪ್ಪರ್ ಮಾಲೀಕ ಶ್ರೀಧರ್ ಮತ್ತು ಟಿಪ್ಪರ್ ಚಾಲಕ ರಾಘವೇಂದ್ರ ಬಂಧಿತ ಆರೋಪಿಗಳು. ಕೆಂಪು ಮಣ್ಣು ಜಾಗದ ಮಾಲೀಕ ಮಂಜುನಾಥ್ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಆತನ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ.

ಕೆಎಸ್‌ಆರ್‌ಟಿಸಿ ಮತ್ತು ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಿಂದ ಬಸ್ಸಿನಲ್ಲಿದ್ದ 29 ಮಂದಿ ಪ್ರಯಾಣಿಕರ ಪೈಕಿ 18 ಮಂದಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಸಹಿತ ಮೂರು ಮಂದಿ ತೀವ್ರ ಗಾಯ ಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿKSRTC ಬಸ್‌ ಮಣ್ಣು ಸಾಗಿಸುತ್ತಿದ್ದ ಲಾರಿ ನಡುವೆ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸೇರಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರಗಾಯ

ಈ ಸಂಬಂಧ ಕೆಎಸ್‌ಆರ್‌ಟಿಸಿ ಕುಂದಾಪುರ ಘಟಕದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಕುಂದಾಪುರ ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಠಾಣಾಧಿಕಾರಿ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ