KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಉತ್ತಮ ಸಾಧನೆ ತೋರಿರುವ ಘಟಕ, ವಿಭಾಗಗಳಿಗೆ ನಗದು ಪುರಸ್ಕಾರ ನೀಡಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆದೇಶಿಸಿದ್ದಾರೆ ಎಂದು ಉಪ ಮುಖ್ಯ ಸಂಖ್ಯಾಧಿಕಾರಿ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿ ಮಾಹೆಯಲ್ಲಿ ಉತ್ತಮ ಸಾಧನೆ ಮಾಡಿ ಮೊದಲ ಮೂರು ಸ್ಥಾನಗಳನ್ನು ಪಡೆಯುವ ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹಾಗೂ ವಿಭಾಗಗಳ ಉಸ್ತುವಾರಿ ಅಧಿಕಾರಿಗಳಿಗೆ ಮತ್ತು ಉತ್ತಮ ಸಾಧನೆ ಮಾಡಿ ಮೊದಲ ಮೂರು ಸ್ಥಾನಗಳನ್ನು ಪಡೆಯುವ ಘಟಕಗಳ ಘಟಕ ವ್ಯವಸ್ಥಾಪಕರಿಗೆ ತಲಾ 1,000 ರೂಪಾಯಿ ನಗದು ಪುರಸ್ಕಾರ ನೀಡಲು ಸೂಕ್ತಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ.
ಹೀಗಾಗಿ ನವೆಂಬರ್-2024ರಲ್ಲಿ ಉತ್ತಮ ಸಾಧನೆ ಮಾಡಿರುವ ವಿಭಾಗ/ ಘಟಕಗಳ ಅಧಿಕಾರಿಗಳಿಗೆ ತಲಾ 1 ಸಾವಿರ ರೂಪಾಯಿ ನಗದು ಪುರಸ್ಕಾರ ನೀಡುತ್ತಿದ್ದು ಈ ಪುರಸ್ಕಾರಕ್ಕೆ ಮೊದಲ ಮೂರು ಸ್ಥಾನ ಪಡೆದ ವಿಭಾಗೀಯ ನಿಯಂತ್ರಣಾಧಿಕಾರಿಗಳು, ವಿಭಾಗ ಉಸ್ತುವಾರಿ ಅಧಿಕಾರಿಗಳು ಹಾಗೂ ಘಟಕಗಳ ಘಟಕ ವ್ಯವಸ್ಥಾಪಕರು ಭಾಜನರಾಗಿದ್ದಾರೆ.
1) ಚಾಮರಾಜನಗರ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಅಶೋಕ್ ಕುಮಾರ್, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ, ಉಸ್ತುವಾರಿ ಅಧಿಕಾರಿ ಜಿ.ಎನ್.ಲಿಂಗರಾಜು, ಮೈಸೂರು ಗ್ರಾಮಾಂತರ ವಿಭಾಗದ ಪಿರಿಯಾಪಟ್ಟಣ ಘಟಕದ ಘಟಕ ವ್ಯವಸ್ಥಾಪಕ ಜಿ. ರಾಮಚಂದ ದರ್ಶನ್.
2) ಹಾಸನ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ಕುಮಾರ್, ಉಗ್ರಾಣ ಮತ್ತು ಖರೀದಿ ನಿಯಂತ್ರಣಾಧಿಕಾರಿ, ಉಸ್ತುವಾರಿ ಅಧಿಕಾರಿ ಶಿವಾನಂದ, ಎಂ.ಕವಳಿಕಾಯಿ, ಗುಂಡ್ಲುಪೇಟೆ ಘಟಕ ಘಟಕ ವ್ಯವಸ್ಥಾಪಕ ಪಿ.ತ್ಯಾಗರಾಜ.
3) ಹಿರಿಯ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಇ.ಶ್ರೀನಿವಾಸ ಮೂರ್ತಿ, ಮುಖ್ಯ ಕಾಮಗಾರಿ ಅಭಿಯಂತರರು, ಉಸ್ತುವಾರಿ ಅಧಿಕಾರಿ ಚಿತ್ರದುರ್ಗ ವಿಭಾಗ, (ಪ್ರಸ್ತುತ ನಿವೃತ್ತಿ ಹೊಂದಿದ್ದಾರೆ) ಎ.ಎನ್. ಶಿವಕುಮಾರ್, ಪಾವಗಡ ಘಟಕ ಘಟಕ ವ್ಯವಸ್ಥಾಪಕ ಇ.ಹನುಮಂತರಾಯ.
ಡಿಸೆಂಬರ್-2024ರ ಮಾಹೆಯ ಉತ್ತಮ ಸಾಧನೆ ಮಾಡಿರುವ ವಿಭಾಗ/ಘಟಕಗಳ ಅಧಿಕಾರಿಗಳ ವಿವರ: 1) ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್. ಹೆಬ್ಬಾರ್, ಮುಖ್ಯ ಕಾನೂನು ಅಧಿಕಾರಿ, ಉಸ್ತುವಾರಿ ವಿಭಾಗ ಅಧಿಕಾರಿ ವೆಂಕಟೇಶ್, ಶಿವಮೊಗ್ಗ ವಿಭಾಗದ ಶಿಕಾರಿಪುರ ಘಟಕದ ಘಟಕ ವ್ಯವಸ್ಥಾಪಕಿ ಸೌಮ್ಯ.
2) ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಮುಖ್ಯ ಲೆಕ್ಕಾಧಿಕಾರಿ ಹಾಗೂ ಉಸ್ತುವಾರಿ ಅಧಿಕಾರಿ ಮಂಜುಳಾ ನಾಯ್ಕ್ ಹಾಗೂ ಚಿತ್ರದುರ್ಗ ವಿಭಾಗದ ಚಳ್ಳಕೆರೆ ಘಟಕದ ಘಟಕ ವ್ಯವಸ್ಥಾಪಕ ಎಸ್.ಪ್ರಭು.
3) ಮೈಸೂರು ನಗರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ.ವೀರೇಶ್ , ಉಪ ಮುಖ್ಯ ಗಣಕ ವ್ಯವಸ್ಥಾಪಕರು, ಉಸ್ತುವಾರಿ ಅಧಿಕಾರಿ ಆರ್.ಸುಧಾರಾಣಿ, ಬೆಂಗಳೂರು ಕೇಂದ್ರೀಯ ವಿಭಾಗ ಘಟಕದ ಹಿರಿಯ ಘಟಕ ವ್ಯವಸ್ಥಾಪಕ ಶಿವಲಿಂಗಯ್ಯ,
ಜನವರಿ-2025ರ ಮಾಹೆಯ ಉತ್ತಮ ಸಾಧನೆ ಮಾಡಿರುವ ವಿಭಾಗ/ಘಟಕಗಳ ಅಧಿಕಾರಿಗಳ ವಿವರ.
1) ಚಿಕ್ಕಬಳ್ಳಾಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಮಂಡ್ಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಪಿ.ನಾಗರಾಜ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಉಸ್ತುವಾರಿ ಅಧಿಕಾರಿ ಮಂಜುಳಾ ನಾಯ್ಕ್, ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಉಸ್ತುವಾರಿ ಅಧಿಕಾರಿ ಎಚ್.ಡಿ.ಗೌರಾಂಬ, ಚಿತ್ರದುರ್ಗ ವಿಭಾಗದ ಹೊಸದುರ್ಗ ಘಟಕದ ಘಟಕ ವ್ಯವಸ್ಥಾಪಕ ಸೋಮಶೇಖರಪ್ಪ.
2) ಕೋಲಾರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಶ್ರೀನಾಥ್, ಟಿ.ಎಲ್.ನಟರಾಜ ಘಟಕ ವ್ಯವಸ್ಥಾಪಕರು, ದೊಡ್ಡಬಳ್ಳಾಪುರ ಘಟಕ, ಚಿಕ್ಕಬಳ್ಳಾಪುರ ವಿಭಾಗ, (ಪ್ರಸ್ತುತ ನಿವೃತ್ತಿ).
3) ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅಮಲಿಂಗಯ್ಯ ಪಿ. ಹೊಸಪೂಜಾರಿ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು, ಉಸ್ತುವಾರಿ ಅಧಿಕಾರಿ ಕೆ.ಎಂ.ಅಶ್ರಫ್ ಹಾಗೂ ಚಿಕ್ಕಮಗಳೂರು ವಿಭಾಗ ಬೇಲೂರು ಘಟಕದ ಘಟಕ ವ್ಯವಸ್ಥಾಪಕಿ ಶಾಜಿಯಾ ಬಾನು ಅವರು ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...