NEWSನಮ್ಮಜಿಲ್ಲೆನಮ್ಮರಾಜ್ಯ

ರಾತ್ರೋರಾತ್ರಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಬಳಿ ಸತ್ಯಾಗ್ರಹ ನಿರತ ನೌಕರರ ಕೂಟದ ಅಧ್ಯಕ್ಷ ಚಂದ್ರು ಬಂಧಿಸಿದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ಕೊಡಬೇಕು ಅಥವಾ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡಬೇಕು ಎಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿ ಹಾಗೂ ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರೇಶಖರ್‌ ಅವರನ್ನು ಇಂದು ರಾತ್ರಿ 11 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶಾಂತಿನಗರದಲ್ಲಿರುವ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿ ಬಳಿ ಇಂದು ಸಂಜೆ 7ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ಚಂದ್ರು ಅವರನ್ನು ಬಿಎಂಟಿಸಿ ಎಸ್‌ಅಂಡ್‌ವಿ ಅಧಿಕಾರಿ ರಾಧಿಕಾ ಅವರು ರಾತ್ರಿ 8.30ರ ಸುಮಾರಿಗೆ ಮತ್ತೊಮ್ಮೆ ಸಭೆ ಕರೆದು ಚರ್ಚಿಸಿದ್ದಾರೆ.

ಆದರೆ, ಈ ವೇಳೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸುವ ನೀಟ್ಟಿನಲ್ಲಿ ಸರ್ಕಾರ ನಡೆದುಕೊಳ್ಳುವುದಕ್ಕೆ ಮುಂದಾಗುತ್ತಿಲ್ಲ ಎಂಬ ವಿಷಯ ಚರ್ಚೆಯಾಗಿದ್ದು, ಇದರಿಂದ ಬೇಸತ್ತ ಚಂದ್ರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

ಆದರೆ, ಏಕಾಏಕಿ ಸತ್ಯಾಗ್ರಹ ನಿರತ ಚಂದ್ರು ಅವರನ್ನು ಸುಮಾರು ರಾತ್ರಿ 11 ಗಂಟೆಗೆ ಬಂದ ವಿಲ್ಸನ್‌ಗಾರ್ಡನ್‌ ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಇನ್ನು ಸತ್ಯಾಗ್ರಹ ಸ್ಥಳದಲ್ಲಿ ಇದ್ದ ನೌಕರರು ಕೂಡ ಈಗ ಅಂದರೆ, ರಾತ್ರಿ 11.35ರಲ್ಲಿ ಠಾಣೆ ಮುಂದೆ ಜಮಾಯಿಸಿದ್ದಾರೆ. ಸರ್ಕಾರ ನೌಕರರ ವಿರುದ್ಧ ಈ ರೀತಿ ತಾರತಮ್ಯ ಧೋರಣೆ ಅನುಸರಿಸುತ್ತಿರುವುದು. ಪ್ರಜಾ ಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿ ಪರಿಣಮಿಸುತ್ತಿದೆ.

ಇದರಿಂದ ಕುಪಿಗೊಳ್ಳುತ್ತಿರುವ ನೌಕರರನ್ನು ಇನ್ನಷ್ಟು ಕೆಣಕುವ ಮಟ್ಟಕ್ಕೆ ಸರ್ಕಾರ ಇಳಿದಿದ್ದು ಇದು ಯಾವ ದಿಕ್ಕಿನಲ್ಲಿ ಸಾಗುತ್ತದೋ ಎಂಬುದನ್ನು ಕಾದು ನೋಡಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ