ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ.
ಒಂಟಿ ಪೋಷಕರಾಗಿರುವ ನಿಗಮದ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಸಂಬಂಧ ಜ.2-2025ರ ಗುರುವಾರ ಆದೇಶ ಹೊರಡಿಸುವ ಮೂಲಕ ಎಂಡಿ ಅನ್ಬುಕುಮಾರ್ಅವರು ಸಂಸ್ಥೆಯಲ್ಲಿ ಕರ್ತವ್ಯ ನಿರತ ಒಂಟಿ ಪೋಷಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ರಾಜ್ಯ ಸರ್ಕಾರವು ಒಂಟಿ ಪೋಷಕರಾಗಿರುವ (Single male parent) ಅವಿವಾಹಿತ/ ವಿವಾಹ- ವಿಚ್ಛೇದಿತ / ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೆ ಮಕ್ಕಳ ಆರೈಕೆಗಾಗಿ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ 180 ದಿನಗಳಿಗೆ ಮೀರದಂತೆ ಸರ್ಕಾರದ ಆದೇಶ ಸಂಖ್ಯೆ: ಆಇ 4(ಇ) ಸೇನಿಸೇ 2021 ದಿನಾಂಕ 21.06.2021 ವಿಧಿಸಲಾದ ಷರತ್ತುಇಗಳನ್ನು ಸಂದರ್ಭಾನುಸಾರ ಅನ್ವಯಿಸಿಕೊಂಡು ಶಿಶುಪಾಲನಾ ರಜೆ ಮಂಜೂರು ಮಾಡುವ ಸೌಲಭ್ಯವನ್ನು ಸರ್ಕಾರದ ಆದೇಶ ಸಂಖ್ಯೆ: ಆಇ 3 (ಇ) ಸೇನಿಸೇ 2023, ದಿನಾಂಕ:09.06.2023 ರನ್ವಯ ಜಾರಿಗೆ ಬರುವಂತೆ ವಿಸ್ತರಿಸಿದೆ.
ಅದರಂತೆ. KSRTC ನಿಗಮದಲ್ಲಿ ಒಂಟಿ ಪೋಷಕರಾಗಿರುವ (Single male parent) ಅವಿವಾಹಿತ/ ವಿವಾಹ-ವಿಚ್ಛೇದಿತ /ವಿಧುರ ಪುರುಷ ನೌಕರರಿಗೆ ಮಕ್ಕಳ ಆರೈಕೆಗಾಗಿ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ 180 ದಿನಗಳಿಗೆ ಮೀರದಂತೆ ಸುತ್ತೋಲೆ ಸಂಖ್ಯೆ: 1696. ದಿನಾಂಕ:18.01.2022 ರ ಷರತ್ತು ಮತ್ತು ನಿಬಂಧನೆಗಳನ್ವಯ ಶಿಶುಪಾಲನಾ ರಜೆ ಮಂಜೂರು ಮಾಡಲು ನಿಗಮದ ನಿರ್ದೇಶಕ ಮಂಡಳಿ ಠರಾವು ಸಂಖ್ಯೆ: 10453, ದಿನಾಂಕ:13.11.2024 ರನ್ವಯ ಒಪ್ಪಿಗೆ ನೀಡಿದೆ.
ಹೀಗಾಗಿ ಯಾವುದೇ ಸಂದರ್ಭದಲ್ಲಿ ಶಿಶುಪಾಲನಾ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡಲ್ಲಿ ಆ ದಿನಾಂಕದಿಂದ ಶಿಶುಪಾಲನಾ ರಜೆಯು ತಾನಾಗಿಯೇ ರದ್ದುಗೊಳ್ಳುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಇನ್ನು ಸಾರಿಗೆ ನಿಗಮದ ಸಂಬಂಧಪಟ್ಟವರೆಲ್ಲರೂ ಈ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳತಕ್ಕದ್ದು, ಜತೆಗೆ ಈ ಸುತ್ತೋಲೆಯು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...