KSRTC: ಪ್ರಯಾಣಿಕ ಮಹಿಳೆಯೊಬ್ಬರ ಗುಪ್ತಾಂಗ ಸ್ಪರ್ಶಿಸಿದ ಕಂಡಕ್ಟರ್ ಅಮಾನತು- ಸುಮೋಟೊ ಕೇಸ್ ದಾಖಲು

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಗುಪ್ತಾಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ನಡೆದುಕೊಂಡಿದ್ದು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.
KSRTC ಮಂಗಳೂರು ವಿಭಾಗದ 3ನೇ ಘಟಕದ ಉಲ್ಲಾಳ-ಮುಡಿಪು ಮಾರ್ಗದಲ್ಲಿ ಚಲಿಸುತ್ತಿದ್ದಾಗ ಶೀಟ್ನಲ್ಲಿ ಕುಳಿತಿದ್ದ ಮಹಿಳೆ ಪಕ್ಕದಲ್ಲಿ ಹೋಗಿ ನಿಂತುಕೊಂಡ ನಿರ್ವಾಹಕ ಪ್ರದೀಪ್ ನಾಯ್ಕರ್ ಎಂಬಾತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಿದ್ದಾನೆ. ಇನ್ನು ಅದನ್ನು ಗಮನಿಸಿದ ಸಹ ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕರನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ FIR ಕೂಡ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಪ್ರಕ್ರಿಯೆ ನಡೆಸಿದ್ದಾರೆ.
ಇತ್ತ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ಮೇಲೆ ಕೈ ಹಾಕುತ್ತಿರುವ ಸರಕಾರಿ ಬಸ್ ಕಂಡಕ್ಟರ್… ಇಂತಹ ಕಾಮುಕ ಕಂಡಕ್ಟರನ್ನು ಕೂಡಲೆ ಕೆಲಸದಿಂದ ಅಮಾನತು ಮಾಡಿ ಕಠಿಣ ಕಾನೂನಿನ ಅಡಿಯಲ್ಲಿ ಬಂಧಿಸಿ… ಇಲ್ಲದಿದ್ದಲ್ಲಿ ಸಾರ್ವಜನಿಕರಿಂದ ಗೂಸ ಬೀಳೋದಂತೂ ಗ್ಯಾರಂಟಿ ಎಂದು ಎಚ್ಚರಿಕೆ ಸಂದೇಶವನ್ನು ನೆಟ್ಟಿಗರು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.
ಅಲ್ಲದೆ ಈತ KSRTC ಮಂಗಳೂರು ವಿಭಾಗದ ಕಂಡಕ್ಟರ್ ಆಗಿರುತ್ತಾನೆ.. ಇವನ ಬಗ್ಗೆ ಹೆಣ್ಣು ಮಕ್ಕಳು ಜಾಗರೂಕರಾಗಿರಿ… ಮಂಗಳೂರಿನ ಪೋಲೀಸ್ ಇಲಾಖೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
Related

You Might Also Like
KSRTC ನೌಕರರ ವೇತನ ಹೆಚ್ಚಳ ಸಂಬಂಧದ ಪ್ರಕರಣ: ಜು.16ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ನಂದಿ ಬೆಟ್ಟದಲ್ಲಿ 14ನೇ ಸಚಿವ ಸಂಪುಟ ಸಭೆ: ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ರೂ. ಖರ್ಚಾಗಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ...
KSRTC ಬಸ್ ಪಲ್ಟಿ: ಯುವತಿಗೆ ಕೈ ಮುರಿತ- ಒಬ್ಬರ ತಲೆಗೆ ಗಂಭೀರ ಪೆಟ್ಟು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, 20ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ...
ಕರ್ನಾಟಕ ವಿಕಾಸ ರಂಗದ ಕೊಡಗು ಜಿಲ್ಲಾಧ್ಯಕ್ಷರಾಗಿ KSRTC ನಿವೃತ್ತ ನೌಕರ, ಸಾಹಿತಿ ವೈಲೇಶ್ ನೇಮಕ
ಕೊಡಗು: ಕರ್ನಾಟಕ "ವಿಕಾಸ ರಂಗ"ವು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೊಡಗು...
ನಂದಿಗಿರಿಯ ಯೋಗ – ಭೋಗ ನಂದೀಶ್ವರರ ಸನ್ನಿಧಿಯಲಿ ಸಚಿವ ಸಂಪುಟ ಸಭೆ
ನಂದಿ ಗಿರಿಯಲ್ಲಿ ನಡೆಯುತಿರುವ ವೈಭೋಗವ ಕಂಡ ಬೆಳಗಿನ ಚುಮು ಚುಮು ಚಳಿಯಿಂದ ಮೈಮುದುರಿ ಮಲಗಿದ್ದ ಸೂರ್ಯದೇವ ತನ್ನ ಕಿರಣಗಳನು ನಿಧಾನವಾಗಿ ಪಸರಿಸಲು ಪ್ರಯತ್ನಿಸಿದರೂ ಬೆಟ್ಟಕ್ಕೆ ಹೊದಿಕೆಯಾಗಿದ್ದ ಮಂಜು...
BMTC ನೌಕರರಿಗೆ ಸಾರಿಗೆ ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರ ವಿತರಣೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ...
KKRTC ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ತಾತ್ಕಾಲಿಕ ನೇಮಕ
ಕೊಪ್ಪಳ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಜಾಧವ್ ರಾಜೇಂದ್ರ ಬಾಹುರಾವ್ ಅವರನ್ನು ತಾತ್ಕಾಲಿಕವಾಗಿ ನೇಮಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (CPM)...
ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ 20ಕ್ಕೂ ಹೆಚ್ಚು ಜನರು ಮೃತ: ಸರ್ಕಾರ ಗಂಭೀರವಾಗಿ ಪರಿಗಣಿಸಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು...
KSRTC ನೌಕರರ ವೇತನ ಹೆಚ್ಚಳ ಪ್ರಕರಣ: ನಾಳೆ ಹೈ ಕೋರ್ಟ್ನಲ್ಲಿ ವಿಚಾರಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...