ಬೆಂಗಳೂರು : ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ ವಿತರಿಸಲು ಮತ್ತೆ ಸರ್ಕಾರ ಚಾಲನೆ ನೀಡಿದ್ದು, ಈ ಬಗ್ಗೆ ಕಾರ್ಮಿಕರಿಗೆ ತಿಳಿವಳಿಕೆ ಮೂಡಿಸುವಂತೆ ನೌಕರರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕಟ್ಟಡ ಕಾರ್ಮಿಕರಿಗೆ ಬಸ್ ಪಾಸ್ಗಳನ್ನು ಕಾರ್ಮಿಕ ಇಲಾಖೆಯು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಫಲಾನುಭವಿಗಳಗೆ ವಿತರಿಸಲಾಗುತ್ತದೆ. ಕಟ್ಟಡ ಕಾರ್ಮಿಕರು ಈ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನುಈ ಮಂಡಳಿಯಲ್ಲಿ ಈಗಾಗಲೇ ನೋಂದಾಯಿಸಿರುವ ಫಲಾನುಭವಿಗಳು ತಮ್ಮ ವಾಸಸ್ಥಳಕ್ಕೆ ಹತ್ತಿರದಲ್ಲಿರುವ ಕರ್ನಾಟಕ ಒನ್/ಗ್ರಾಮ ಸೇವಾ ಒನ್ ಸೆಂಟರ್ಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಉಚಿತವಾಗಿ ಪಾಸು ಪಡೆದುಕೊಳ್ಳಬಹುದಾಗಿದೆ.
ಈ ಉಚಿತ ಪಾಸುದಾರರು ಪಾಸು ಪಡೆದ ಸ್ಥಳದಿಂದ 45 ಕಿ.ಮೀ ವ್ಯಾಪ್ತಿಯಲ್ಲಿ ನಿಗಮಗಳ ನಗರ, ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ ಈ ಪಾಸುಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.ಈ ಬಸ್ ಪಾಸ್ ಪಡೆಯಲು ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯ ಉಚಿತ ಸಹಾಯವಾಣಿ ಸಂ: 155214 ನ್ನು ಸಂಪರ್ಕಿಸಲು ತಿಳಿಸಿದ್ದಾರೆ.
ಇನ್ನು ಈ ಬಸ್ಪಾಸ್ ಪಡೆದ ಕಾರ್ಮಿಕರು ತಾವು ವಾಸಿಸುವ ಸ್ಥಳದಿಂದ 45 ಕಿ.ಮೀ. ವರೆಗೆ ಮಾತ್ರ ಉಚಿತವಾಗಿ ಪ್ರಯಾಣಿಸಬೇಕು. ತದನಂತರ ಟಿಕೆಟ್ ಪಡೆದು ಪ್ರಯಾಣಿಸಬೇಕು ಎಂದು ವಿವರಿಸಿದ್ದಾರೆ.