KSRTC: SO ಮಗಳ ಮದುವೆಗೆ ಹೋಗಲು ಸಂಸ್ಥೆ ವಾಹನ, ಚಾಲಕರ ದುರುಪಯೋಗಪಡಿಸಿಕೊಂಡ CSO- ತರಾಟೆಗೆ ತೆಗೆದುಕೊಂಡ ಕೆಆರ್ಎಸ್ ಪಕ್ಷ

ಬೆಂಗಳೂರು: ಸಹೋದ್ಯೋಗಿಯ ಮಗಳ ಮದುವೆಗೆ ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗಲು ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ವಾಹನಗಳನ್ನು ಸಂಸ್ಥೆಯ ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದು, ಅದನ್ನು ಕೋಲಾರ ಜಿಲ್ಲೆಯ ಕೆಆರ್ಎಸ್ ಪಕ್ಷದ ಪದಾಧಿಕಾರಿಳು ಪತ್ತೆಹಚ್ಚಿ ತರಾಟೆಗೆ ತೆಗೆದುಕೊಂಡಿದ್ದಾರೆ.
KSRTC ಮುಖ್ಯ ಭದ್ರತಾ ಹಾಗೂ ಜಾಗೃತಾಧಿಕಾರಿ (CSO) ಲಿಂಗರಾಜು ತಮ್ಮ ಸಹೋದ್ಯೋಗಿ ಸಂಸ್ಥೆಯ ಭದ್ರತಾಧಿಕಾರಿ (SO) ಚಂದ್ರೇಗೌಡ ಅವರ ಮಗಳ ವಿವಾಹಕ್ಕೆ ಬೆಂಗಳೂರಿನಿಂದ 115 ಕಿಮೀ ದೂರದಲ್ಲಿರುವ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಕಲ್ಯಾಣ ಮಂಟಪ ಒಂದರಲ್ಲಿ ಆಯೋಜಿಸಿದ್ದ ಮದುವೆಯ ಆರತಕ್ಷತೆ ಕಾರ್ಯಕ್ರಮಕ್ಕೆ ಹೋಗಲು ನಿನ್ನೆ ಅಂದರೆ ಏ.29ರ ರಾತ್ರಿ ಸಂಸ್ಥೆಯ ವಾಹನ ಮತ್ತು ಸಂಸ್ಥೆಯ ಚಾಲಕರನ್ನು ದುರುಪಯೋಪಡಿಸಿಕೊಂಡಿದ್ದಾರೆ.
ಇವರಷ್ಟೇ ಅಲ್ಲದೆ ಇನ್ನೂ ಮೂರು ಸಂಸ್ಥೆಯ ವಾಹನಗಳು ದುರುಪಯೋಗವಾಗಿದ್ದು ಈ ಬಗ್ಗೆ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳು ಪೊಲೀಸ್ ಠಾಣೆಯಲ್ಲಿಎಫ್ಐಆರ್ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ರೀತಿ ಸಂಸ್ಥೆಯ ವಾಹನಗಳನ್ನು ಮೇಲಧಿಕಾರಿಗಳು ಪದೇ ಪದೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಅಧ್ಯಕ್ಷರು ಹಾಗೂ ಸಾರಿಗೆ ಸಚಿವರು ಇವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಅಚ್ಚರಿಗೆ ಕಾರಣವಾಗಿದೆ.
ಇನ್ನು ಈ ಹಿಂದೆ KSRTC ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದ್ರ ಕಠಾರಿಯ ಅವರ ಅವಧಿಯಲ್ಲಿ ಅಧಿಕಾರಿಗಳು ಸಂಸ್ಥೆಯ ವಾಹನಗಳನ್ನು ತಮ್ಮ ಸ್ವಂತಕ್ಕೆ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಗೊತ್ತಾದ ಕೂಡಲೇ ಅವರು ಎಲ್ಲ ವಾಹನಗಳಿಗೂ ಜಿಪಿಎಸ್ ಅಳವಡಿಸಿದ್ದರು. ಆ ವೇಳೆ ವಾಹನಗಳ ಮತ್ತು ಸಂಸ್ಥೆಯ ಚಾಲಕರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದ ಅಧಿಕಾರಿಗಳಿಗೆ ನಡುಕವಿತ್ತು.
ಆದರೆ, ಇತ್ತೀಚೆಗೆ ಬಂದ ಹೊಸ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಈ ಅಧಿಕಾರಿಗಳು ಮುಂದಾಗಿ, ಇದಕ್ಕೆ ಎಂಡಿ ಅನ್ಬುಕುಮಾರ್ ಅವರು ಕಾಳಜಿವಹಿಸಿಲ್ಲದ ಕಾರಣ ಈಗ ಸಂಸ್ಥೆಯ ವಾಹನಗಳನ್ನು ಹಾಗೂ ಚಾಲಕರನ್ನು ಬಹುತೇಕ ಅಧಿಕಾರಿಗಳು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಶಾಂತಿ ನಗರದ ಕೇಂದ್ರ ಕಚೇರಿಯ ಅಧಿಕಾರಿಯೊಬ್ಬರು ವಿಜಯಪಥಕ್ಕೆ ಮಾಹಿತಿ ನೀಡಿದ್ದಾರೆ.
ಇನ್ನು ಮಂಗಳವಾರ ರಾತ್ರಿ ಮುಳಬಾಗಿಲಿಗೆ ಅಂದರೆ 115 ಕಿಮೀ ಸಂಸ್ಥೆಯ ವಾಹನವನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಕೆಆರ್ಎಸ್ ಪಕ್ಷದ ಕಾರ್ಯಕರ್ತು ಬಂದು ಫೇಸ್ಬುಕ್ ಲೈವ್ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡ ಇತರೆ ಅಧಿಕಾರಿಗಳು ಬಸ್ ನಿಲ್ದಾಂಣದಲ್ಲಿ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ಕಲ್ಯಾಣ ಮಂಟಪದವರೆಗೂ ಆಟೋ ಮಾಡಿಕೊಂಡು ಹೋಗಿದ್ದರು ಎನ್ನಲಾಗಿದೆ.
ಹೀಗಾಗಿ ಮುಳಬಾಗಿಲು ಬಸ್ ನಿಲ್ದಾಣದ ಸಿಸಿ ಕ್ಯಾಮೆರಾವನ್ನು ಚೆಕ್ ಮಾಡಿದರೆ ಯಾವ ಯಾವ ಅಧಿಕಾರಿಗಳು ವಾಹನಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂಬುವುದು ತಿಳಿಯಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನು ಸಾರಿಗೆ ನೌಕರರು ಮುಷ್ಕರ ಮಾಡಿದರು ಎಂಬ ಕಾರಣಕ್ಕೆ ವಜಾ, ಅಮಾನತು, ವರ್ಗಾವಣೆ ಮತ್ತು ಪೊಲೀಸ್ ಪ್ರಕರಣಗಳನ್ನು ದಾಖಲಿಸಿ ಇನ್ನಿಲ್ಲದ ಹಿಂಸೆ ನೀಡುತ್ತಿರುವ ಸಾರಿಗೆ ಆಡಳಿತ ವರ್ಗ ಈ ರೀತಿ ಸಾರಿಗೆ ವಾಹನ ಮತ್ತು ಸಾರಿಗೆ ನೌಕರರನ್ನು ತನ್ನ ವೈಯಕ್ತಿಕ ಕೆಲಸಕ್ಕೆ ಬಳಸಿಕೊಂಡ ಈ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸದೆ ಹಿಂದೆ ಸರಿಯಬಾರದು.
ಅಧಿಕಾರಿಗಳು ವೈಯಕ್ತಿಕ ಕೆಲಸಕ್ಕೆ ಸಾರಿಗೆ ವಾಹನ ಮತ್ತು ನೌಕರರನ್ನು ಬಳಸಿಕೊಂಡಿರುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧ. ಆದರೂ ಈ ಕೃತ್ಯವನ್ನು ಅಧಿಕಾರಿಗಳು ನಿನ್ನೆ ಎಸಗಿದ್ದಾರೆ. ಅವರು ಸಾರಿಗೆ ವಾಹನವನ್ನು ಮತ್ತು ಸಿಬ್ಬಂದಿಯನ್ನು ದುರುಪಯೋಗ ಪಡಿಸಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಅದೇ ಒಬ್ಬ ನೌಕರ ತಪ್ಪು ಮಾಡದಿದ್ದರೂ ಕೂಡಲೇ ಅಮಾನತು, ವಜಾ ಮಾಡುತ್ತೀರಿ ಅದಕ್ಕೆ ನೌಕರರ ಹೇಳಿಕೆಯನ್ನು ಪಡೆಯುವುದಿಲ್ಲ. ಈಗ ಇಂಥ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ನಿಮಗೆ ಬೇಕಾದ ಸಾಕ್ಷಿ ಸಹಿತ ದಾಖಲೆಗಳು ಕಣ್ಣಮುಂದೆ ಇವೆ. ಹೀಗಾಗಿ ಇವರಿಗೆ ತಕ್ಷ ಶಿಕ್ಷೆ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.
ಇನ್ನು ಈ ಅಧಿಕಾರಿಗಳ ವಿರುದ್ಧ ಸಂಸ್ಥೆಯ ಎಂಡಿ ಮತ್ತು ಸಾರಿಗೆ ಸಚಿವರು ಸೇರಿದಂತೆ ಸರ್ಕಾರ ಯಾವ ಕ್ರಮ ಜರುಗಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...