ಬೆಂಗಳೂರು: ಚಾಲನಾ ಸಿಬ್ಬಂದಿಗಳ ಕಣ್ಣಿಗೆ ಅಧಿಕಾರವೆಂಬ ಮಣ್ಣೆರಚಿ ಸಂಸ್ಥೆಯಲ್ಲಿ ಅಧಿಕಾರಿಗಳು ಯಾವ ರೀತಿ ವಂಚಿಸುತ್ತಿದ್ದಾರೆಂದರೆ. ಪ್ರಸ್ತುತ ಮಾರ್ಚ್ ಏಪ್ರಿಲ್ ಮೇ ತಿಂಗಳುಗಳು ಪೀಕ್ ಸಿಜನ್ ಎಂದು ಕೆಎಸ್ಆರ್ಟಿಸಿಯ ಎಲ್ಲ ವಿಭಾಗದ ಪ್ರತಿ ಘಟಕಗಳಿಂದ ಹಬ್ಬ ಹರಿದಿನ ಸರ್ಕಾರಿ ರಜಾದಿನಗಳಂದು ರಾಜಧಾನಿ ಬೆಂಗಳೂರಿಗೆ ಹೆಚ್ಚುವರಿಯಾಗಿ ಅಡಿಷನಲ್ ಬಸ್ಸುಗಳು ಓಡಿಸಲಾಗುತ್ತಿದೆ.
ಆದರೆ, ಈ ಅಡಿಷನಲ್ (ಹೆಚ್ಚುವರಿ) ಮಾರ್ಗಗಳಿಗೆ ನಿಯೋಜಿಸಿರುವ ಚಾಲನಾ ಸಿಬ್ಬಂದಿಗಳಿಗೆ ಮುಕ್ಕಾಲು ಪರ್ಸೆಂಟ್ ಇನ್ಸೆಂಟಿವ್ ಮತ್ತು ಯಾವುದೇ ಒಟಿ ಕೊಡುವುದಿಲ್ಲ. ಇಲ್ಲಿ ಅದೇ ಫಾರಂ ನಂ.4 ಮಾರ್ಗಗಳಿಗಿರುವ, ಒಟಿ ಅಡಿಷನಲ್ ಮಾರ್ಗಗಳಿಗೆ ಕೊಡುವುದಿಲ್ಲ.
ಇಲ್ಲಿ ನೋಡಿ ಅದೇ ಮಾರ್ಗ ಅದೇ ಬಸ್ಸು ಅದೇ ಶ್ರಮ ಆದರೆ ಫಲ ಮಾತ್ರ ತಾರತಮ್ಯ, ಇದು ಯಾವ ನ್ಯಾಯ ಮತ್ತು ಘಟಕದಲ್ಲಿ ಅಡಿಷನಲ್ ಆಗಿ ಒಂದು ಬಸ್ಸು ಕಾರ್ಯಚರಿಸಿದರೆ, ಘಟಕ ವ್ಯವಸ್ಥಾಪಕರು, ಎಟಿಎಸ್ ಹಾಗೂ ಎಡಬ್ಲ್ಯೂಎಸ್ ಅವರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇಲ್ಲಿ ಅಧಿಕಾರಿಗಳಿಗೆ ಪ್ರೋತ್ಸಾಹ ಧನ ಕೊಡುತ್ತಿರುವುದರಿಂದ, ಚಾಲನಾ ಸಿಬ್ಬಂದಿಗಳಿಗೆ ಯಾವುದೇ ಅಭ್ಯಂತರವಿಲ್ಲ.
ಆದರೆ, ಹಬ್ಬ ಹರಿದಿನ ಬಿಟ್ಟು ಕುಟುಂಬದವರಿಂದ, ದೂರವಾಗಿ ಶ್ರಮವಹಿಸಿ ದುಡಿಯುವ, ಚಾಲನಾ ಸಿಬ್ಬಂದಿಗಳಿಗೆ ಮುಕ್ಕಾಲು ಪರ್ಸೆಂಟ್ ಇನ್ಸೆಂಟಿವ್ ಮತ್ತು ಯಾವುದೇ ಒಟಿ ಇಲ್ಲ ಎಂಬುದು ಬೇಸರದ ಸಂಗತಿ.
ಅದೇ ಫಾರಂ ನಂಬರ್-4, ಮಾರ್ಗಗಳಿರುವ ಒಟಿ ಮತ್ತು ಫುಲ್ ಇನ್ಸೆಂಟಿವ್, ಅಡಿಷನಲ್ ಮಾರ್ಗಗಳಿಗೆ ಕೂಡ ಕೊಡಬೇಕು ಎಂದು ಈ ಹಿಂದೆಯೇ ವಿಭಾಗಿಯ ನಿಯಂತ್ರಣಾಧಿಕಾರಿಗಳಿಗೂ ಮತ್ತು ಹಿಂದಿನ ಎಂಡಿ ಅವರ ಗಮನಕ್ಕೆ ತರಲಾಗಿತ್ತು. ಆದರೆ ಅದರ ಪ್ರಯೋಜನವಾಗದೆ, ಇಲ್ಲಿವರೆಗೂ ಆ ತಾರತಮ್ಯ ಹಾಗೆ ಮುಂದುವರಿದುಕೊಂಡು ಬಂದಿದೆ.
ಪ್ರಸ್ತುತ ಇರುವ ಸಾರಿಗೆ ನೌಕರರ ನೆಚ್ಚಿನ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರು, ಈ ಚಾಲನಾ ಸಿಬ್ಬಂದಿಗಳಿಗೆ ಆಗುತ್ತಿರುವ ತಾರತಮ್ಯಯನ್ನು, ಕೂಡಲೇ ಬಗೆಹರಿಸುವ ಕಡೆ ಗಮನ ಹರಿಸಿಬೇಕು ಎಂದು ಚಾಲನಾ ಸಿಬ್ಬಂದಿಗಳು ಒತ್ತಾಯಿಸಿದ್ದಾರೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...