NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಹಬ್ಬದ ರಜೆಗಳಂದು ಕರ್ತವ್ಯಕ್ಕೆ ಹಾಜರಾದರೆ ಡಬಲ್‌ ವೇತನ – ಮುಖ್ಯ ಕಾರ್ಮಿಕ, ಕಲ್ಯಾಣಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಸಾರ್ವತ್ರಿಕ ಮತ್ತು ಹಬ್ಬದ ರಜೆ ದಿನಗಳಂದು ಕರ್ತವ್ಯ ನಿರ್ವಹಿಸಿದರೆ ಅವರಿಗೆ ಡಬಲ್‌ ವೇತನ ನೀಡಬೇಕು ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಜನದಟ್ಟಣೆ ಹೆಚ್ಚಿದ್ದು, ಪೀಕ್ ಸೀಸನ್ ಆಗಿರುವುದರಿಂದ ವಾಹನಗಳ ಕಾರ್ಯಾಚರಣೆಗೆ ಸಿಬ್ಬಂದಿಗಳ ಲಭ್ಯತೆಯ ಸಲುವಾಗಿ ಜನವರಿ 23 ರಿಂದ ಜೂನ್ 23ರವರೆಗೆ ನೌಕರರು ಆಯ್ಕೆ ಮಾಡಿಕೊಂಡಿರುವ ಸಾರ್ವತ್ರಿಕ/ ಹಬ್ಬದ ರಜಾ ದಿನಗಳಿಗೆ ಸೀಮಿತಗೊಳಿಸಿ ಈ ಸಾರ್ವತ್ರಿಕ/ ಹಬ್ಬದ ರಜೆ ದಿನದಂದು ಕರ್ತವ್ಯ ನಿರ್ವಹಿಸಿದಲ್ಲಿ ಹೆಚ್ಚುವರಿ ವೇತನ (Double, Wages) ಪಾವತಿ ಮಾಡಲು ಸೂಕ್ತಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ.

ಈ ಆದೇಶದ ಪ್ರತಿಯನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು/ ನಿರ್ದೇಶಕರು (ಸಿ&ಜಾ) ಾವರ ಹಿರಿಯ/ ಆಪ್ತ ಕಾರ್ಯದರ್ಶಿಗಳು ಹಾಗೂ ನಿಗಮದ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಘಟಕ ಮಟ್ಟದ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

ಹೆಚ್ಚುವರಿ ಬಸ್‌ಗಳ ಓಡಾಟ:  ಸಾಲು-ಸಾಲು ರಜೆ, ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿನ ಸಾರ್ವಜನಿಕರು ನಮ್ಮ ಕೆಎಸ್ಆರ್‌ಟಿಸಿ ಬಸ್‌ಗಳನ್ನು ಹೆಚ್ಚಾಗಿ ಅವಲಂಬಿಸುವುದಿಂದ ಕೆಎಸ್ಆರ್‌ಟಿಸಿಯೂ ಸಹ ಜನರ ದಟ್ಟಣೆ ಮತ್ತು ಜನರ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸಿದ್ಧವಾಗಿದೆ. ಹೀಗಾಗಿ ಹಬ್ಬ ಮತ್ತಿತರ ವಿಶೇಷ ದಿನಗಳಂದು ಹಬ್ಬದ ರಜೆ ಅಥವಾ ಸಾರ್ವತ್ರಿಕ ರಜೆ ಇರುವ ಚಾಲಕರು, ನಿರ್ವಾಹಕರು ಸೇರಿದಂತೆ ಹಲವು ಸಿಬ್ಬಂದಿಗಳು ಕಾರ್ಯ ನಿರ್ವಹಣೆ ಮಾಡಿದೆ ಅವರಿಗೆ ಹೆಚ್ಚುವರಿ ವೇತನ ನೀಡಲಾಗುತ್ತದೆ.

ಈ ಹಿಂದೆ ಹಬ್ಬದ ರಜೆ ಅಥವಾ ಸಾರ್ವತ್ರಿಕ ರಜೆ ಇರುವ ಚಾಲಕರು, ನಿರ್ವಾಹಕರು ಡ್ಯೂಟಿಗೆ ಬಂದರೆ ಅವರಿಗೆ ಬೇರೊಂದು ದಿನ ರಜೆ ತೆಗೆದುಕೊಳ್ಳಬೇಕಿತ್ತು. ಆದರೆ, ಈ ಆದೇಶದಿಂದ ನೌಕರರಿಗೆ ಡಬ್ಬಲ್‌ ವೇತನ ಸಿಗಲಿದ್ದು, ಇದು ಖುಷಿ ನೀಡುತ್ತಿದೆ ಎಂದು ನೌಕರರು ಹಲವು ನೌಕರರು ತಿಳಿಸಿದ್ದಾರೆ.

ಇನ್ನು ಸಂಸ್ಥೆಯಲ್ಲಿ ನಿವೃತ್ತರಾಗುತ್ತಿರುವ ಚಾಲನಾ ಸಿಬ್ಬಂದಿಗಳ ಸ್ಥಳಕ್ಕೆ ಬೇರೆಯವರ ನೇಮಕ ಮಾಡಿಕೊಳ್ಳದೆ ಇರುವುದರಿಂದ ತಿಂಗಳಿಂದ ತಿಂಗಳಿಗೆ ಚಾಲನಾ ಸಿಬ್ಬಂದಿಯ ಕೊರತೆ ಹೆಚ್ಚಾಗುತ್ತಿದ್ದು ಹಲವು ರೂಟ್‌ಗಳಲ್ಲಿ  ಬಸ್‌ ಓಡಿಸುವುದಕ್ಕೆ ಘಟಕ ವ್ಯವಸ್ಥಾಪಕರು ಪರದಾಡುವಂತಾಗಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...