CrimeNEWSನಮ್ಮಜಿಲ್ಲೆ

ಮನೆ ಬಳಿ ಬಸ್‌ ನಿಲ್ಲಿಸದಿದ್ದಕ್ಕೆ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ: ಆರೋಪಿ ವಿರುದ್ಧ ಪೊಲೀಸ್‌ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ಕಡೂರು: ಮನೆ ರಸ್ತೆಯಲ್ಲೇ ಸಂಚರಿಸುತ್ತಿದ್ದ ಬಸ್‌ ಕೈ ಸನ್ನೆ ಮಾಡಿದರೂ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೆ.ಎಸ್.ಆ‌ರ್.ಟಿ.ಸಿ.ಬಸ್ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಆಣೆಗೆರೆ ನಾರಣಾಪುರ ಗ್ರಾಮದಲ್ಲಿ ನಡೆದಿದೆ.

ಕಡೂರು ಘಟಕದ ಚಾಲಕ ಬಿ.ವೈ.ರೇಣುಕಾರಾಧ್ಯ ಹಲ್ಲೆಗೊಳಗಾದವರು. ಪಂಚನಹಳ್ಳಿಯಿಂದ ಮಧ್ಯಾಹ್ನ ಕಡೂರಿಗೆ ಹೊರಟ ಕೆ.ಎಸ್.ಆರ್.ಟಿ.ಸಿ. ಬಸ್ ಆಣೆಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿ ಕೊಂಡು ಮುಂದೆ ಸಾಗುವಾಗ ಎ.ಜಿ.ಮಂಜುನಾಥ್ ಎಂಬುವರು ತನ್ನ ಮನೆಯ ಹತ್ತಿರ ಪತ್ನಿಯನ್ನು ಬಸ್‌ಗೆ ಹತ್ತಿಸುವ ಸಲುವಾಗಿ ಬಸ್ ನಿಲ್ಲಿಸುವಂತೆ ಚಾಲಕನಿಗೆ ಕೈ ತೋರಿಸಿದ್ದಾರೆ.

ಆದರೆ, ನಿಲ್ದಾಣವಲ್ಲದ ಕಾರಣ ಚಾಲಕ ರೇಣುಕಾರಾಧ್ಯ ಬಸ್ ನಿಲ್ಲಸದೆ ಮುಂದೆ ಸಾಗಿದ್ದಾನೆ. ಕೂಡಲೆ ಮಂಜುನಾಥ್ ತನ್ನ ದ್ವಿಚಕ್ರ ವಾಹನದಲ್ಲಿ ಹೆಂಡತಿಯನ್ನು ಕೂರಿಸಿಕೊಂಡು ಬಸ್ ಹಿಂಬಾಲಿಸಿದ್ದಾನೆ. ಮುಂದಿನ ನಿಲ್ದಾಣವಾದ ನಾರಣಾಪುರ ಗ್ರಾಮದಲ್ಲಿ ನಿಂತಿದ್ದ ಬಸ್‌ಗೆ ಹೆಂಡತಿಯನ್ನು ಹತ್ತಿಸಿ ಮುಂದೆ ಬಂದು ಡ್ರೈವರ್‌ ಹತ್ತಿರ ಜಗಳ ತೆಗೆದಿದ್ದಾನೆ.

ಈ ವೇಳೆ ಮಾತು ಮಾತಿಗೆ ಜಗಳ ಬೆಳೆದು ಎ.ಜಿ.ಮಂಜುನಾಥ್ ಚಾಲಕ ಬಿ.ವೈ.ರೇಣುಕಾರಾಧ್ಯನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ