CrimeNEWSನಮ್ಮಜಿಲ್ಲೆ

ಮನೆ ಬಳಿ ಬಸ್‌ ನಿಲ್ಲಿಸದಿದ್ದಕ್ಕೆ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ: ಆರೋಪಿ ವಿರುದ್ಧ ಪೊಲೀಸ್‌ ಪ್ರಕರಣ ದಾಖಲು

ವಿಜಯಪಥ ಸಮಗ್ರ ಸುದ್ದಿ

ಕಡೂರು: ಮನೆ ರಸ್ತೆಯಲ್ಲೇ ಸಂಚರಿಸುತ್ತಿದ್ದ ಬಸ್‌ ಕೈ ಸನ್ನೆ ಮಾಡಿದರೂ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೆ.ಎಸ್.ಆ‌ರ್.ಟಿ.ಸಿ.ಬಸ್ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಆಣೆಗೆರೆ ನಾರಣಾಪುರ ಗ್ರಾಮದಲ್ಲಿ ನಡೆದಿದೆ.

ಕಡೂರು ಘಟಕದ ಚಾಲಕ ಬಿ.ವೈ.ರೇಣುಕಾರಾಧ್ಯ ಹಲ್ಲೆಗೊಳಗಾದವರು. ಪಂಚನಹಳ್ಳಿಯಿಂದ ಮಧ್ಯಾಹ್ನ ಕಡೂರಿಗೆ ಹೊರಟ ಕೆ.ಎಸ್.ಆರ್.ಟಿ.ಸಿ. ಬಸ್ ಆಣೆಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿ ಕೊಂಡು ಮುಂದೆ ಸಾಗುವಾಗ ಎ.ಜಿ.ಮಂಜುನಾಥ್ ಎಂಬುವರು ತನ್ನ ಮನೆಯ ಹತ್ತಿರ ಪತ್ನಿಯನ್ನು ಬಸ್‌ಗೆ ಹತ್ತಿಸುವ ಸಲುವಾಗಿ ಬಸ್ ನಿಲ್ಲಿಸುವಂತೆ ಚಾಲಕನಿಗೆ ಕೈ ತೋರಿಸಿದ್ದಾರೆ.

ಆದರೆ, ನಿಲ್ದಾಣವಲ್ಲದ ಕಾರಣ ಚಾಲಕ ರೇಣುಕಾರಾಧ್ಯ ಬಸ್ ನಿಲ್ಲಸದೆ ಮುಂದೆ ಸಾಗಿದ್ದಾನೆ. ಕೂಡಲೆ ಮಂಜುನಾಥ್ ತನ್ನ ದ್ವಿಚಕ್ರ ವಾಹನದಲ್ಲಿ ಹೆಂಡತಿಯನ್ನು ಕೂರಿಸಿಕೊಂಡು ಬಸ್ ಹಿಂಬಾಲಿಸಿದ್ದಾನೆ. ಮುಂದಿನ ನಿಲ್ದಾಣವಾದ ನಾರಣಾಪುರ ಗ್ರಾಮದಲ್ಲಿ ನಿಂತಿದ್ದ ಬಸ್‌ಗೆ ಹೆಂಡತಿಯನ್ನು ಹತ್ತಿಸಿ ಮುಂದೆ ಬಂದು ಡ್ರೈವರ್‌ ಹತ್ತಿರ ಜಗಳ ತೆಗೆದಿದ್ದಾನೆ.

ಈ ವೇಳೆ ಮಾತು ಮಾತಿಗೆ ಜಗಳ ಬೆಳೆದು ಎ.ಜಿ.ಮಂಜುನಾಥ್ ಚಾಲಕ ಬಿ.ವೈ.ರೇಣುಕಾರಾಧ್ಯನ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂಬಂಧ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ