KSRTC ಚಾಲನಾ ಸಿಬ್ಬಂದಿಗಳು ಅಮ್ಮನ್.., ಅಕ್ಕನ್.. ಅಂತ ಬೈಸಿಕೊಳ್ಳೋದಕ್ಕೆ ಇರುವವರಲ್ಲ: ಶಿಲ್ಪ ಆರ್.ಗೌಡ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ಚಾಲನಾ ಸಿಬ್ಬಂದಿಗಳು (ಚಾಲಕ, ನಿರ್ವಾಹಕರು) ಎಂದರೆ ಅವರು ನಿಮ್ಮ ಪಾಲಿನ ದೇವರೆಂದರೂ ತಪ್ಪಾಗಲಾರದು. ಅಂತ ದೇವರನ್ನು ಪ್ರಯಾಣಿಕ ದೇವರಾದ ನೀವು ದುರಹಂಕಾರದಿಂದ ಅಮ್ಮನ್…, ಅಕ್ಕನ್… ಅಂತ ಅವಾಚ್ಯ ಶಬ್ದಗಳಿಂದ ಬೈಯ್ಯೋದು ಎಷ್ಟರ ಮಟ್ಟಿಗೆ ಸರಿ ಎಂದು ಹೇಳಿ?
ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಬದಿಗೊತ್ತಿ ಮುಂಜಾನೆ 4ಗಂಟೆಗೆ ಎದ್ದು ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಸರಿಯಾಗಿ ಒಂದು ಲೋಟ ಕಾಫಿಯನ್ನು ಕುಡಿಯದೇ ನಿಮ್ಮ ಸೇವೆಗೆ ಹಾಜರಾಗುವ ಇಂಥ ದೇವರುಗಳನ್ನು ನೀವು ಸೌಜನ್ಯದಿಂದ ನಡೆಸಿಕೊಳ್ಳದೆ. ಅವರನ್ನು ಶತ್ರುಗಳಂತೆ ಕಾಣುವುದು ಸರಿಯೇ ಎಂದು ಪತ್ರಕರ್ತರಾದ ಶಿಲ್ಪ ಆರ್.ಗೌಡ ತಮ್ಮ ಸಮಾಜಿಕ ಜಾಲತಾಣದಲ್ಲಿ ಸ್ವಲ್ಪ ಕಾರವಾಗಿಯೇ ಜಾಡಿಸಿದ್ದಾರೆ.
ಕಂಡಕ್ಟರ್ಗಳಿಗೆ ವೇತನ ನೀಡುತ್ತಿರುವುದು ಪ್ರಯಾಣಿಕರಿಗೆ ಟಿಕೆಟ್ ವಿತರಿಸಿ ಸುರಕ್ಷಿತ ಪ್ರಯಾಣ ಮಾಡಿಸಲು ಅಂತ. ಆದರೆ, ದುರಹಂಕಾರದಿಂದ ಪ್ರಯಾಣಿಕರಾದ ನೀವು ಅಮ್ಮನ್… ಅಕ್ಕನ್ ಅಂತ ಅವಾಚ್ಯ ಶಬ್ದಗಳನ್ನು ಅವರ ಮೇಲೆ ಬಳಸಿ ಬೈಯ್ಯೋದಕ್ಕಲ್ಲ. ಬಸ್ ಹತ್ತಿದ ತಕ್ಷಣ ಸೌಜನ್ಯದಿಂದ ನಡೆದುಕೊಳ್ಳೋದನ್ನು ಕಲಿಯಿರಿ, ನಿಮ್ಮ ಮನೆಯ ಗುಲಾಮರಂತು ಅಲ್ಲವೇ ಅಲ್ಲ ಚಾಲನಾ ಸಿಬ್ಬಂದಿ ಎಂದು ದುರಹಂಕಾರದಿಂದ ನಡೆದುಕೊಳ್ಳುವವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇನ್ನು ನಾನು ಇತ್ತೀಚೆಗೆ ಹಲವಾರು ಬಾರಿ ಬಸ್ಸಿನಲ್ಲೇ ಪ್ರಯಾಣ ಮಾಡುತ್ತಿದ್ದೇನೆ ಕಾರಣ ನನ್ನ ಸ್ನೇಹಿತರೊಬ್ಬರು ಬೈಕ್, ಕಾರಿನಲ್ಲಿ ಓಡಾಡುವ ನಿಮಗೆ ನಮ್ಮ ಪರಿಸ್ಥಿತಿ ಏನು ಗೊತ್ತು ನೀವೊಂದು ಬಾರಿ ಬಸ್ಸಿನಲ್ಲಿ ಪ್ರಯಾಣ ಮಾಡಿ ಗೊತ್ತಾಗುತ್ತೆ ಎಂದು ನೊಂದು ಹೇಳಿದ್ದರು.
ಸರಿ ಎಂದು ಅವರ ನೋವಿನ ನುಡಿಯ ಹಿಂದಿರುವ ಸಮಸ್ಯೆ ಮತ್ತು ಸತ್ಯ ಏನು ಎಂದು ತಿಳಿದುಕೊಳ್ಳುವುದಕ್ಕಾಗಿ ಬಸ್ನಲ್ಲಿ ಪ್ರಯಾಣ ಮಾಡಿದ್ದೀನಿ, ಈಗಲೂ ಮಾಡ್ತಾ ಇದ್ದೀನಿ… ನನ್ನ ಸ್ನೇಹಿತರ ಸಮಸ್ಯೆಗಿಂತ ಪ್ರಯಾಣಿಕರಿಂದ ಚಾಲಕ ನಿರ್ವಾಹಕರಿಗಾಗುತ್ತಿರುವ ತೊಂದರೆಗಳೇ ಜಾಸ್ತಿ… ಎಂಬುವುದು ಈಗ ಅರ್ಥವಾಯಿತು.
ಬಸ್ಸಿಗೆ ಹತ್ತಿದ ಪ್ರಯಾಣಿಕರನ್ನು ಮುಂದಕ್ಕೆ ಹೋಗಿ ಎಂದರೆ ಜಗಳ, ಬೇಗ ಇಳಿಯಿರಿ ಎಂದರೆ ಜಗಳ, ಸ್ವಲ್ಪ ಜಾಗ ಬಿಡಿ ಮುಂದೆ ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರೂ ಜಗಳ. ಇದನ್ನೆಲ್ಲಾ ನಾನೇ ಖುದ್ದಾಗಿ ಗಮನಿಸಿದೆ. ಇನ್ನು ಸ್ವಲ್ಪ ಮುಂದೆ ಹೋಗಿ ನೋಡೋದಾದರೆ ಕ್ಷುಲ್ಲಕ ಕಾರಣಕ್ಕೆ ನಿರ್ವಾಹಕರಿಗೆ ಅಮ್ಮನ್ ಅಕ್ಕನ್ ನಿಮ್ ಅವ್ವನ್ ಎಂಬ ಹೀನಾಯ ಪದಗಳನ್ನು ಬಳಸಿ ಸಾರ್ವಜನಿಕರ ಮುಂದೆ ನಿಂದಿಸುವುದು…
ಬಹುಶಃ ಈ ಪದಗಳ ಬಳಕೆ ತಾಯಿ, ಅಕ್ಕ-ತಂಗಿ, ಹೆಂಡತಿ ಇವರ ಮಧ್ಯೆ ವ್ಯತ್ಯಾಸವೇ ತಿಳಿಯದ ಮೂರ್ಖರ ಬಾಯಲ್ಲಿ ಬರುವ ಪದಗಳು. ಇನ್ನು ಮುಂದಕ್ಕೆ ಹೋಗಿ ಹೇಳಬೇಕಾದರೆ ಈಗಿನ ವಿದ್ಯಾರ್ಥಿಗಳ ಬಾಯಲ್ಲಿ ಎಂತಹ ಸುಸಂಸ್ಕೃತ ಪದಗಳು ಬರುತ್ತವೆ ಎಂದರೆ ಇವರು ದುಪ್ಪಟ್ಟು ಹಣ ಕೊಟ್ಟು ಶಾಲಾ-ಕಾಲೇಜುಗಳಿಗೆ ಕಲಿಯುವುದಕ್ಕೆ ಹೋಗುತ್ತಿರುವುದು ಈ ಪದಗಳನ್ನೇ ಅನಿಸುತ್ತೆ.
ತಂದೆ ತಾಯಿ ವಯಸ್ಸಿನವರಿಗೂ ಅಮ್ಮನ್, ಅಕ್ಕನ್, ನಿನ್ ಅವ್ವನ್ ಅಂತಾವೇ ಎಂದರೆ ಕಾಮ ತುರಿಕೆ ಜಾಸ್ತೀ ಆದಾಗ ತನ್ನ ತಾ*ಯನ್ನೇ ಬಿಟ್ಟಿಲ್ಲವೇನೋ ಎನಿಸುತ್ತಿದೆ…
ಇನ್ನು ಈ ಎಲ್ಲ ವಿಷಯಗಳನ್ನು ನರ ಸತ್ತ ಸಂಸ್ಥೆಯ ಕೆಲ ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದೇನೆಂದರೆ ಸಾರ್ವಜನಿಕರು ದೂರು ನೀಡಿದ ತಕ್ಷಣವೇ ಚಾಲಕ, ನಿರ್ವಾಹಕರ ವಿರುದ್ಧ ಕ್ರಮ ಕೈಗೊಂಡು ನಿಮ್ಮ ತಾಕತ್ತನ್ನು ಪ್ರದರ್ಶಿಸುವ ಮೊದಲು ಚಾಲಕ, ನಿರ್ವಾಹಕರ ಮೇಲಾಗುತ್ತಿರುವ ದೌರ್ಜನ್ಯ ದಬ್ಬಾಳಿಕೆಯ ಬಗ್ಗೆ ಗಮನ ಕೊಡಿ…
ದೂರು ಬಂದ ತಕ್ಷಣ ಕ್ರಮ ಕೈಗೊಳ್ಳುವ ಮೊದಲು ತನಿಖೆ ನಡೆಸಿ ಸರಿ ತಪ್ಪು ತಿಳಿದುಕೊಳ್ಳಿ ನಿಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರಿಗೆ ನಿಮ್ಮಿಂದಲೇ ರಕ್ಷಣೆ ಇಲ್ಲ ಎಂದ ಮೇಲೆ ಮತ್ತ್ಯಾರಿಗೆ ರಕ್ಷಣೆ ಮಾಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.
ಇನ್ನು ಚಾಲಕ, ನಿರ್ವಾಹಕರೇ ನಿಮಗೆ ಅವಾಚ್ಯ ಶಬ್ದಗಳನ್ನು ಬಳಸಿದರೆ ಅದನ್ನು ವಿಡಿಯೋ ಮಾಡಿ ನನಗೆ ಕಳಿಸಿ ತಾಯಿ- ಹೆಂಡತಿಯ ಮಧ್ಯೆ ಇರುವ ಸಂಬಂಧದ ವ್ಯತ್ಯಾಸವನ್ನು ತಿಳಿಸೋಣ ಎಂದು ಶಿಲ್ಪ ಆರ್. ಗೌಡ ಧೈರ್ಯ ತುಂಬಿದ್ದಾರೆ.
ನಿಜವಾಗಲು ಈ ರೀತಿ ಪತ್ರಕರ್ತರು ನೊಂದ ನೌಕರರ ಪರ ನಿಂತರೆ ಸಮಾಜಕ್ಕೆ ಒಂದೊಳ್ಳೆ ಸಂದೇಶವನ್ನು ಕೊಡಬಹುದು ಎಂಬುವುದು ನಮ್ಮ ಅಭಿಪ್ರಾಯ. ಹೀಗಾಗಿ ಇಂಥ ಪತ್ರಕರ್ತರ ಸಂಖ್ಯೆ ಏರುಗತಿಯಲ್ಲೇ ಸಾಗಲಿ ಎಂಬುವುದು ವಿಜಯಪಥ ಆಶಯ ಕೂಡ.
Related

You Might Also Like
KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್ ಮುಖಂಡ, ವಕೀಲ ಶಂಕರೇಗೌಡ ಆಗ್ರಹ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ....
ಮೈಸೂರು: ಶೀಘ್ರದಲ್ಲೇ ಕಬಿನಿ ನೀರು ಹೊರ ವಲಯ ಬಡಾವಣೆಗಳಿಗೆ ಪೂರೈಕೆ: ಶಾಸಕ ಜಿಟಿಡಿ
ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರೂಪಾ ನಗರದಲ್ಲಿ ಸ್ಥಳೀಯ...
ಜಮೀರ್ ರಾಜೀನಾಮೆಗೆ ಸಾಗರ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯ
ಶಿವಮೊಗ್ಗ: ವಸತಿ ಇಲಾಖೆಯಿಂದ ಮನೆಗಳನ್ನು ಪಡೆಯಲು ಲಂಚ ನೀಡಬೇಕು ಎಂಬ ಶಾಸಕ ಬಿ. ಆರ್. ಪಾಟೀಲ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ...
ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ- 2-3 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ ಎಂದ NWKRTC ಅಧ್ಯಕ್ಷ ರಾಜುಕಾಗೆ
ಕಾಗವಾಡ: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ಸರ್ಕಾರದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ತಂದಿಡುತ್ತಿದ್ದಾರೆ. ಜತೆಗೆ ಸರ್ಕಾರ...
KSRTC ಮೈಸೂರು: ಸರಿಸಮಾನ ವೇತನ ಕೊಡಿ- ಎಂಡಿಗೆ ಮನವಿ ಮಾಡಿದ ಸಂಸ್ಥೆಯ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಸನ್ಮಾನ ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ಪಾಷ ಅವರನ್ನು ಕರ್ನಾಟಕ...
ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಸ್ವೀಕರಿಸಿದ ಮಾಜಿ ಪ್ರಧಾನಿ ದೇವೇಗೌಡ್ರು
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ನಗರದಲ್ಲಿ ಇಂದು ದೇವೇಗೌಡ ಅಭಿನಂದನಾ ಸಮಿತಿ...
KSRTC ಬಸ್- ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ: 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಸಕಲೇಶಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯವಾಗಿರುವ ಘಟನೆ ತಾಲೂಕಿನ...
KSRTC ಅಧಿಕಾರಿಗಳು-ನೌಕರರಿಗೆ 7ನೇ ವೇತನ ಆಯೋಗ ಘೋಷಿಸಿ: ಸಂಸ್ಥೆಯ ನೂತನ ಎಂಡಿಗೆ ಅಧಿಕಾರಿಗಳ ಸಂಘ ಮನವಿ
ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯದ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ನೌಕರರಿಗೆ 7ನೇ ವೇತನ ಅಯೋಗವನ್ನು ಘೋಷಿಸುವಂತೆ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರನ್ನು ಕೆಎಸ್ಆರ್ಟಿಸಿ ಆಫೀರ್ಸ್ ವೆಲ್ಫೇರ್...
ಜಗತ್ತಿನ ಒತ್ತಡ ಪರಿಸ್ಥಿತಿ ನಿವಾರಣೆಗೆ ಯೋಗ ಒಂದೇ ಮಾರ್ಗ: ಪ್ರಧಾನಿ ನರೇಂದ್ರ ಮೋದಿ
ನ್ಯೂಡೆಲ್ಲಿ: ಜಗತ್ತಿನ ಅನೇಕ ಕ್ಷೇತ್ರಗಳಲ್ಲಿ ಒತ್ತಡದ ಪರಿಸ್ಥಿತಿ ಎದುರಾಗಿ ಅಶಾಂತಿ ಮತ್ತು ಅಸ್ಥಿರತೆ, ಜಾಗತಿಕ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದೆ. ಇಂತಹ ಪ್ರಕ್ಷುಬ್ದ ಪರಿಸ್ಥಿತಿ ನಿವಾರಣೆ ಆಗಬೇಕು. ಯೋಗ ಒಂದೆ...