KSRTC: ಮಾರ್ಗಮಧ್ಯದಲ್ಲಿ ಬಸ್ಗಳ ಯಾವುದೇ ಬಿಡಿ ಭಾಗಗಳು ಕಟ್ಟಾದರೂ ಚಾಲಕರು ದಂಡ ಕಟ್ಟಬೇಕಿಲ್ಲ- ಪಿಆರ್ಒ ಸುಮಲತ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಯಾಂತ್ರಿಕ ಇಲಾಖೆ ಕೇಂದ್ರ ಕಚೇರಿಯಿಂದ ಅಶೋಕ ಲೈಲ್ಯಾಂಡ್, ಟಾಟಾ ಮತ್ತು ಏಷರ್ ವಾಹನಗಳಲ್ಲಿ ಅಳವಡಿಸಿರುವ ಹ್ಯಾಂಗರ್ ಮತ್ತು ಮೊದಲನೇ, ಎರಡನೇ ಕಟ್ಟಾವೋಟ್ಗಳು ಕಟ್ಟಾದಾಗ ಕರ್ತವ್ಯದಲ್ಲಿದ್ದ ಚಾಲಕರಿಗೆ ದಂಡ ವಿಧಿಸುವ ಕುರಿತು ಯಾವುದೇ ಸುತ್ತೋಲೆ/ ಆದೇಶಗಳನ್ನು ಹೊರಡಿಸಿರುವುದಿಲ್ಲ ಎಂದು ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಯಾಂತ್ರಿಕ ಅಭಿಯಂತರರಾದ ಎಚ್.ಸುಮಲತ ತಿಳಿಸಿದ್ದಾರೆ.
ಸಾಮಾನ್ಯವಾಗಿ ಮಾರ್ಗಮಧ್ಯದಲ್ಲಿ ಬಸ್ಗಳ ರಾಡ್ ಅಥವಾ ಯಾವುದೇ ಬಿಡಿ ಭಾಗಗಳು ಕಟ್ಟಾದರೂ ಅದರ ಎಲ್ಲ ವೆಚ್ಚವನ್ನು ಚಾಲಕರ ಮೇಲೆ ಘಟಕಗಳಲ್ಲಿ ಇರುವ ಅಧಿಕಾರಿಗಳು ಹಾಕಿ ಅವರ ವೇತನದಿಂದ ಹಣವನ್ನು ಕಟ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಸಂಸ್ಥೆಯ ನೌಕರರ ಕೋಲಾರ ನಿವಾಸಿ ಸಿ. ಶಂಕರಪ್ಪ ಎಂಬುವರು ಈ ಬಗ್ಗೆ ಮಾಹಿತಿ ಕೇಳಿದ್ದರು.
ಅವರು ಕೇಳಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕರು ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ವಾಹನದ ಅಂದರೆ ಚಾಲನೆಯಲ್ಲಿರುವ ಅಶೋಕ ಲೈಲಾಂಡ್, ಟಾಟಾ ಮತ್ತು ಏಸರ್ (ASHOK LEYLAND, TATA, EICHER) ಕಂಪನಿಯ ವಾಹನಗಳಲ್ಲಿ ಅಳವಡಿಸಿರುವ ಹ್ಯಾಂಗರ್ ಮತ್ತು ಮೊದಲನೇ ಮತ್ತು ಎರಡನೇ ಕಟ್ಟಾವೋಟ್ಗಳು ಕಟ್ಟಾದಾಗ (HANGER, FIRST AND SECOND BLADE) ಕರ್ತವ್ಯದಲ್ಲಿದ್ದ ಚಾಲಕರಿಗೆ ದಂಡ ವಿಧಿಸಬೇಕಾದಂತಹ ಕೇಂದ್ರ ಕಚೇರಿಯಿಂದ ಹೊರಡಿಸಿರುವ ಆದೇಶ ಸುತ್ತೋಲೆ ಅಥವಾ ಸಾಮಾನ್ಯ ಸ್ಥಾಯಿ ಆದೇಶವನ್ನು ದೃಢೀಕರಿಸಿ ಮಾಹಿತಿ ಹಕ್ಕು ಅಧಿನಿಯಮ-2005ರ ಪ್ರಕಾರ ಮಾಹಿತಿ ನೀಡಿ ಎಂದು ಕೇಳಿದ್ದರು.
ಅದಕ್ಕೆ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಯಾಂತ್ರಿಕ ಅಭಿಯಂತರರಾದ ಸುಮಲತ ಅವರು ಈ ರೀತಿ ಉತ್ತರ ನೀಡಿದ್ದಾರೆ. ಅಂದರೆ ಇಲ್ಲಿ ಘಟಕ ಮಟ್ಟದ ಅಧಿಕಾರಿಗಳು ಚಾಲಕರನ್ನು ಹುರಿದು ಮುಕ್ಕುವುದನ್ನೆ ಅಭ್ಯಾಮಾಡಿಕೊಂಡಿದ್ದು, ಇದಕ್ಕೆ ಬಹುತೇಕ ಡಿಸಿಗಳು ಕೂಡ ಸಾಥ್ ನೀಡುತ್ತಿರುವುದು ಗುಟ್ಟಾಗೇನು ಉಳಿದಿಲ್ಲ.
ಆದರೂ ಕೂಡ ಈ ಭ್ರಷ್ಟರ ವಿರುದ್ದ ಮೇಲಧಿಕಾರಿಗಳು ಅಂದರೆ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಭದ್ರತಾ ಜಾಗೃತಾಧಿಕಾರಿಗಳು ಕೂಡ ನಮಗೇನು ಗೊತ್ತಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಇನ್ನು ಸಾರಿಗೆ ಸಚಿವರ ಗಮನಕ್ಕೆ ಇಂಥ ವಿಷಯಗಳನ್ನು ಈ ಅಧಿಕಾರಿಗಳೆ ಮುಟ್ಟಿಸಬೇಕಿದೆ. ಆದರೆ ಈ ಭ್ರಷ್ಟ ಅಧಿಕಾರಿಗಳು ಸಚಿವರ ಹತ್ತಿರಕ್ಕೂ ಈ ವಿಷಯ ಸುಳಿಯದ ರೀತಿ ನೋಡಿಕೊಳ್ಳುವುದರಿಂದ ಸಚಿವರು ಕೂಡ ಏನು ಕ್ರಮ ತೆಗೆದುಕೊಳ್ಳಲಾಗುವುದಿಲ್ಲ.
ಒಟ್ಟಾರೆ ಈ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಎಷ್ಟೋ ವಿಷಯಗಳನ್ನು ತಿಳಿಸದೆ ಡಿಪೋಗಳು ಮತ್ತು ವಿಭಾಗೀಯ ಮಟ್ಟದಲ್ಲೇ ನಿಯಮಬಾಹಿರವಾಗಿ ನೌಕರರಿಂದ ಲಂಚ ವಸೂಲಿ ಮಾಡುವುದರಲ್ಲಿ ಈ ರೀತಿ ದಂಡ ಕಟ್ಟಿಸುವುರಲ್ಲೇ ಬಹುತೇಕ ಅಧಿಕಾರಿಗಳು ನಿರತರಾಗಿದ್ದಾರೆ. ಇದು ಸಾಮಾನ್ಯ ನೌಕರರಿಗೆ ಭಾರಿ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ ಸಚಿವರು ಹಾಗೂ ಎಂಡಿಗಳು ಈ ಬಗ್ಗೆ ಗಮನಹರಿಬೇಕಿದೆ.
Related

You Might Also Like
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...