KSRTC: ಮಾರ್ಗಮಧ್ಯದಲ್ಲಿ ಬಸ್ಗಳ ಯಾವುದೇ ಬಿಡಿ ಭಾಗಗಳು ಕಟ್ಟಾದರೂ ಚಾಲಕರು ದಂಡ ಕಟ್ಟಬೇಕಿಲ್ಲ- ಪಿಆರ್ಒ ಸುಮಲತ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಯಾಂತ್ರಿಕ ಇಲಾಖೆ ಕೇಂದ್ರ ಕಚೇರಿಯಿಂದ ಅಶೋಕ ಲೈಲ್ಯಾಂಡ್, ಟಾಟಾ ಮತ್ತು ಏಷರ್ ವಾಹನಗಳಲ್ಲಿ ಅಳವಡಿಸಿರುವ ಹ್ಯಾಂಗರ್ ಮತ್ತು ಮೊದಲನೇ, ಎರಡನೇ ಕಟ್ಟಾವೋಟ್ಗಳು ಕಟ್ಟಾದಾಗ ಕರ್ತವ್ಯದಲ್ಲಿದ್ದ ಚಾಲಕರಿಗೆ ದಂಡ ವಿಧಿಸುವ ಕುರಿತು ಯಾವುದೇ ಸುತ್ತೋಲೆ/ ಆದೇಶಗಳನ್ನು ಹೊರಡಿಸಿರುವುದಿಲ್ಲ ಎಂದು ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಹಾಯಕ ಯಾಂತ್ರಿಕ ಅಭಿಯಂತರರಾದ ಎಚ್.ಸುಮಲತ ತಿಳಿಸಿದ್ದಾರೆ.
ಸಾಮಾನ್ಯವಾಗಿ ಮಾರ್ಗಮಧ್ಯದಲ್ಲಿ ಬಸ್ಗಳ ರಾಡ್ ಅಥವಾ ಯಾವುದೇ ಬಿಡಿ ಭಾಗಗಳು ಕಟ್ಟಾದರೂ ಅದರ ಎಲ್ಲ ವೆಚ್ಚವನ್ನು ಚಾಲಕರ ಮೇಲೆ ಘಟಕಗಳಲ್ಲಿ ಇರುವ ಅಧಿಕಾರಿಗಳು ಹಾಕಿ ಅವರ ವೇತನದಿಂದ ಹಣವನ್ನು ಕಟ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಸಂಬಂಧ ಸಂಸ್ಥೆಯ ನೌಕರರ ಕೋಲಾರ ನಿವಾಸಿ ಸಿ. ಶಂಕರಪ್ಪ ಎಂಬುವರು ಈ ಬಗ್ಗೆ ಮಾಹಿತಿ ಕೇಳಿದ್ದರು.
ಅವರು ಕೇಳಿದ್ದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕರು ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ವಾಹನದ ಅಂದರೆ ಚಾಲನೆಯಲ್ಲಿರುವ ಅಶೋಕ ಲೈಲಾಂಡ್, ಟಾಟಾ ಮತ್ತು ಏಸರ್ (ASHOK LEYLAND, TATA, EICHER) ಕಂಪನಿಯ ವಾಹನಗಳಲ್ಲಿ ಅಳವಡಿಸಿರುವ ಹ್ಯಾಂಗರ್ ಮತ್ತು ಮೊದಲನೇ ಮತ್ತು ಎರಡನೇ ಕಟ್ಟಾವೋಟ್ಗಳು ಕಟ್ಟಾದಾಗ (HANGER, FIRST AND SECOND BLADE) ಕರ್ತವ್ಯದಲ್ಲಿದ್ದ ಚಾಲಕರಿಗೆ ದಂಡ ವಿಧಿಸಬೇಕಾದಂತಹ ಕೇಂದ್ರ ಕಚೇರಿಯಿಂದ ಹೊರಡಿಸಿರುವ ಆದೇಶ ಸುತ್ತೋಲೆ ಅಥವಾ ಸಾಮಾನ್ಯ ಸ್ಥಾಯಿ ಆದೇಶವನ್ನು ದೃಢೀಕರಿಸಿ ಮಾಹಿತಿ ಹಕ್ಕು ಅಧಿನಿಯಮ-2005ರ ಪ್ರಕಾರ ಮಾಹಿತಿ ನೀಡಿ ಎಂದು ಕೇಳಿದ್ದರು.
ಅದಕ್ಕೆ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಸಹಾಯಕ ಯಾಂತ್ರಿಕ ಅಭಿಯಂತರರಾದ ಸುಮಲತ ಅವರು ಈ ರೀತಿ ಉತ್ತರ ನೀಡಿದ್ದಾರೆ. ಅಂದರೆ ಇಲ್ಲಿ ಘಟಕ ಮಟ್ಟದ ಅಧಿಕಾರಿಗಳು ಚಾಲಕರನ್ನು ಹುರಿದು ಮುಕ್ಕುವುದನ್ನೆ ಅಭ್ಯಾಮಾಡಿಕೊಂಡಿದ್ದು, ಇದಕ್ಕೆ ಬಹುತೇಕ ಡಿಸಿಗಳು ಕೂಡ ಸಾಥ್ ನೀಡುತ್ತಿರುವುದು ಗುಟ್ಟಾಗೇನು ಉಳಿದಿಲ್ಲ.
ಆದರೂ ಕೂಡ ಈ ಭ್ರಷ್ಟರ ವಿರುದ್ದ ಮೇಲಧಿಕಾರಿಗಳು ಅಂದರೆ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಬಂಧಪಟ್ಟ ಭದ್ರತಾ ಜಾಗೃತಾಧಿಕಾರಿಗಳು ಕೂಡ ನಮಗೇನು ಗೊತ್ತಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಇನ್ನು ಸಾರಿಗೆ ಸಚಿವರ ಗಮನಕ್ಕೆ ಇಂಥ ವಿಷಯಗಳನ್ನು ಈ ಅಧಿಕಾರಿಗಳೆ ಮುಟ್ಟಿಸಬೇಕಿದೆ. ಆದರೆ ಈ ಭ್ರಷ್ಟ ಅಧಿಕಾರಿಗಳು ಸಚಿವರ ಹತ್ತಿರಕ್ಕೂ ಈ ವಿಷಯ ಸುಳಿಯದ ರೀತಿ ನೋಡಿಕೊಳ್ಳುವುದರಿಂದ ಸಚಿವರು ಕೂಡ ಏನು ಕ್ರಮ ತೆಗೆದುಕೊಳ್ಳಲಾಗುವುದಿಲ್ಲ.
ಒಟ್ಟಾರೆ ಈ ಅಧಿಕಾರಿಗಳು ಉನ್ನತ ಅಧಿಕಾರಿಗಳಿಗೆ ಹಾಗೂ ಸಚಿವರಿಗೆ ಎಷ್ಟೋ ವಿಷಯಗಳನ್ನು ತಿಳಿಸದೆ ಡಿಪೋಗಳು ಮತ್ತು ವಿಭಾಗೀಯ ಮಟ್ಟದಲ್ಲೇ ನಿಯಮಬಾಹಿರವಾಗಿ ನೌಕರರಿಂದ ಲಂಚ ವಸೂಲಿ ಮಾಡುವುದರಲ್ಲಿ ಈ ರೀತಿ ದಂಡ ಕಟ್ಟಿಸುವುರಲ್ಲೇ ಬಹುತೇಕ ಅಧಿಕಾರಿಗಳು ನಿರತರಾಗಿದ್ದಾರೆ. ಇದು ಸಾಮಾನ್ಯ ನೌಕರರಿಗೆ ಭಾರಿ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ ಸಚಿವರು ಹಾಗೂ ಎಂಡಿಗಳು ಈ ಬಗ್ಗೆ ಗಮನಹರಿಬೇಕಿದೆ.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...