ಶಿರಾ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ತುಮಕೂರು ವಿಭಾಗದ ಚಾಲಕರೊಬ್ಬರು ಮೊಬೈಲ್ನಲ್ಲಿ ಮಾತನಾಡುತ್ತ ಬಸ್ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.
ತುಮಕೂರು ವಿಭಾಗದ ಶಿರಾ ಘಟಕದ ಚಾಲಕ ಇರ್ಫನ್ ಪಾಷ ಎಂಬುವರೆ ಇಂದು (ಏ.29) ಬೆಳಗ್ಗೆ ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ ಮಾಡಿದ್ದೂ ಪ್ರಯಾಣಿಕರು ಮೊಬೈಲ್ನಲ್ಲಿ ಸೇರೆ ಹಿಡಿದಿದ್ದಾರೆ. ಈ ಬಸ್ 80 ಜನ ಪ್ರಯಾಣಿಕರು ಇದ್ದರು ಎಂದು ಹೇಳಲಾಗುತ್ತಿದೆ.
ಚಾಲಕ ಇರ್ಫನ್ ಪಾಷ ಮೊಬೈಲ್ನಲ್ಲಿ ಮಾತನಾಡುತ್ತ ಅಪಾಯಕಾರಿ ಚಾಲನೆ ಮಾಡಿರುವುದಕ್ಕೆ ಅದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ವಿಡಿಯೋವೊಂದನ್ನು ಸ್ಟಿಂಗ್ ಮಾಡಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಬಸ್ ಶಿರಾದಿಂದ ಹುಳಿಯಾರ್ಗೆ ಹೋಗುತ್ತಿತ್ತು. ಚಾಲಕ ಮೊಬೈಲ್ ಬಳಕೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಚಾರಿ ನಿಯಮ ಉಲ್ಲಂಘಿಸಿರುವ ಬಗ್ಗೆ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಈ ಹಿನ್ನೆಲೆ ಬಸ್ ಚಾಲಕನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಯಾಣಿಕರು ಸಂಸ್ಥೆಯ ಮೇಲಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಇನ್ನು KSRTC ಬಸ್ಗಳಲ್ಲಿ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಾರೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದು ಚಾಕಲನ ಕರ್ತವ್ಯವಾಗಿದೆ. ಚಾಲನೆ ಸಮಯದಲ್ಲಿ ಚಾಲಕ ಮೊಬೈಲ್ನಲ್ಲಿ ಮಾತನಾಡುವುದು, ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಆದರೂ ಕೂಡ ಚಾಲಕ ಮೊಬೈಲ್ ಬಳಸುತ್ತಾ ಚಾಲನೆ ಮಾಡಿದ್ದಾರೆ.
ಈ ರೀತಿ ಮೊಬೈಲ್ ಫೋನ್ನಲ್ಲಿ ಮಾತನಾಡಿಕೊಂಡು ಬಸ್ ಓಡಿಸುವಾಗ ಏನಾದರೂ ಅವಘಡ ಸಂಭವಿಸಿದೆ ಬಸ್ನಲ್ಲಿರುವ 70ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವ ಮಟ್ಟದಲ್ಲಿ ತೊಂದರೆ ಆಗುತ್ತದೆ ಎಂಬುವುದನ್ನು ಊಹಿಸಿಕೊಳ್ಳುವುದಕ್ಕೂ ಅಸಾಧ್ಯವಾಗುತ್ತದೆ. ಹೀಗಾಗಿ ಆದಷ್ಟು ಫೋನ್ಗಳನ್ನು ಬಳಸದೆ ಚಾಲಕರು ತಮ್ಮ ಚಾಲನೆಯತ್ತ ಗಮನ ಹರಿಸಬೇಕಿದೆ.
ಚಾಲಕರನ್ನೇ ನಂಬಿ 70ಕ್ಕೂ ಹೆಚ್ಚು ಪ್ರಯಾಣಿಕರು ಬಸ್ನಲ್ಲಿ ಆರಾಮವಾಗಿ ಪ್ರಯಾಣಿಸುತ್ತಿರುತ್ತಾರೆ. ಅದನ್ನು ಗಮನದಲ್ಲಿ ಇಟ್ಟುಕೊಂಡು ಚಾಲಕರು ತಮ್ಮ ಕರ್ತವ್ಯ ನಿಷ್ಠೆ ಮೆರೆದರೆ ಯಾವುದೆ ತೊಂದರೆ ಆಗುವುದಿಲ್ಲ. ಹೀಗಾಗಿ ಚಾಲನಾ ಸಿಬ್ಬಂದಿಗಳು ತಮ್ಮ ಕರ್ತವ್ಯದ ಮೇಲೆ ಹೆಚ್ಚು ಗಮನಕೊಡಬೇಕಿದೆ.
Related

You Might Also Like
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...