- ಒಣ ಮೆಣಸಿನ ಕಾಯಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಕೊಟ್ಟ ನಿರ್ವಾಹಕನಿಗೆ ತನಿಖಾ ಸಿಬ್ಬಂದಿಯಿಂದ ಮೆಮೋ
- ಅವಕಾಶ ಕೊಡದ ಕಂಡಕ್ಟರ್ಗೆ ಘಟಕ ವ್ಯವಸ್ಥಾಪಕರಿಂದ ಮೆಮೋ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಜಾರಿಯಲ್ಲಿರುವ ಕೆಲ ನಿಯಮಗಳು ಚಾಲನಾ ಸಿಬ್ಬಂದಿಗಳಿಗೆ ಅತ್ತ ದರಿ ಇತ್ತ ಪುಲಿ ಎಂಬಂತಿವೆ. ಕಾರಣ ನಿಯಮದಂತೆ ನಡೆದುಕೊಂಡರೂ ಶಿಕ್ಷೆ ಅನುಭವಿಸಬೇಕು ನಡೆದುಕೊಳ್ಳದಿದ್ದರೂ ಶಿಕ್ಷೆ ಅನುಭವಿಸಬೇಕಿದೆ.
ಇದಕ್ಕೆ ತಾಜಾ ನಿದರ್ಶನ ಒಂದನ್ನು ಕೇವಲ ಎರಡೇ ದಿನಗಳ ಅಂತರದಲ್ಲಿ ನಾವು ಕಾಣಬಹುದಾಗಿದೆ. ಒಂದು ಕಡೆ ಪ್ರಯಾಣಿಕರೊಬ್ಬರು ಒಣ ಮೆಣಸಿಕಾಯಿಯ ಚೀಲವೊಂದನ್ನು ತೆಗೆದುಕೊಂಡು ಬಸ್ನಲ್ಲಿ ಪ್ರಾಯಾಣಿಸುವುದಕ್ಕೆ ಅವಕಾಶ ಮಾಡಿಕೊಡುವ ಮೂಲಕ ಸಂಸ್ಥೆಯ ನಿಯಮವನ್ನು ಗಾಳಿ ತೂರಿದ್ದೀರಿ ಎಂದು ಅಪಾಧಿಸಿ ತಾಳಿಕೋಟೆ ಮಾರ್ಗದ ಸಾರಿಗೆ ಬಸ್ ನಿರ್ವಾಹಕರಿಗೆ ಏ.19ರಂದು ತನಿಖಾ ಸಿಬ್ಬಂದಿಗಳು ಮೆಮೋ ಕೊಟ್ಟಿದ್ದಾರೆ.
ಇದಾದ ಬಳಿಕ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉ.ಕ.ವಿಭಾಗ ಯಲ್ಲಾಪುರ ಘಟಕದ ವ್ಯವಸ್ಥಾಪಕರು ಪ್ರಯಾಣಿಕರೊಬ್ಬರು ಏ.20ರಂದು ಒಣ ಮೆಣಸಿನ ಕಾಯಿಯನ್ನು ಬಸ್ನಲ್ಲಿ ತೆಗೆದುಕೊಂಡು ಪ್ರಯಾಣಿಸುವುದಕ್ಕೆ ನೀವು ಅನುವು ಮಾಡಿಕೊಡದೆ ಪ್ರಯಾಣಿಕರಿಗೆ ತೊಂದರೆ ಕೊಡುವ ಮೂಲಕ ಸಂಸ್ಥೆಯ ನಿಮವನ್ನು ಉಲ್ಲಂಘನೆ ಮಾಡಿ ಬೇಜವಾಬ್ದಾರಿಯಿಂದ ವರ್ತಿಸಿದ್ದೀರಿ. ಏಕೆ ನಾವು ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಕಾರಣ ಕೇಳಿ ಮೆಮೋ ಕೊಟ್ಟಿದ್ದಾರೆ.
ಈ ರೀತಿ ಅಧಿಕಾರಿಗಳು ದ್ವಿಮುಖ ನಡೆ ಅನುಸರಿಸಿದರೆ ನಿರ್ವಾಹಕರು ಕರ್ತವ್ಯ ನಿರ್ವಹಿಸುವುದಾದರೂ ಹೇಗೆ? ಒಂದು ಕಡೆ ಒಣ ಮೆಣಸಿನಕಾಯಿ ಹಾಕಿದರೆ ಅದಕ್ಕೂ ಮೆಮೋ ಕೊಡುತ್ತಾರೆ ಇನ್ನೊಂದು ಕಡೆ ಹಾಕಿಸಿಕೊಳ್ಳದಿದ್ದರೆ ಅದಕ್ಕೂ ಮೆಮೋ ಕೊಡುತ್ತಾರೆ. ಹೀಗಾಗಿ ನಿರ್ವಾಹಕರು ಕರ್ತವ್ಯ ನಿರ್ವಹಿಸುವುದು ತುಂಬ ಕಷ್ಟಕರವಾಗುತ್ತಿದೆ.
ಹೀಗೆ ಅಧಿಕಾರಿಗಳು ತಮಗೆ ಮನ ಬಂದಂತೆ ಅಧಿಕಾರ ಚಲಾಯಿಸಿ ವರ್ತಿಸಿದರೆ ನಿರ್ವಾಹಕರು ಏನು ಮಾಡುವುದು. ಒಂದು ಸ್ಪಷ್ಟವಾದ ನಿರ್ದೇಶನ ನೀಡಿ ಹಾಕುವುದಾದರೆ ಹಾಕಬೇಕು ಬೇಡವೆಂದರೆ ಬೇಡವೆಂದು ಆದೇಶ ಹೊರಡಿಸಬೇಕು. ಹೀಗೆ ಸಮಯಕ್ಕೆ ತಕ್ಕಂತೆ ಮನಬಂದಂತೆ ವರ್ತಿಸಿದರೆ ಹೇಗೆ ಎಂದು 4 ನಿಗಮಗಳ ನೌಕರರು ಪ್ರಶ್ನಿಸುತ್ತಿದ್ದಾರೆ.
ಯಲ್ಲಾಪುರ ಘಟಕ ವ್ಯವಸ್ಥಾಪಕರು ಕೊಟ್ಟಿರುವ ಮೆಮೋದಲ್ಲೇನಿದೆ?: ನಾನು ಘಟಕ ವ್ಯವಸ್ಥಾಪಕ/ ಶಿಸ್ತುಪಾಲನಾಧಿಕಾರಿ ವಾ.ಕ.ರ.ಸಾ.ಸಂಸ್ಥೆ ಉ.ಕ.ವಿಭಾಗ ಶಿರಸಿ ಯಲ್ಲಾಪುರ ಘಟಕ ನಿಮ್ಮ ಮೇಲೆ ಆರೋಪಗಳ ಬಗ್ಗೆ ನಿಜ ಸಂಗತಿಗಳನ್ನು ತಿಳಿಯಲು ಕೆಲವು ಆಧಾರಗಳು ಪುಷ್ಟಿಕರಿಸುತ್ತೇನೆಂದು ಅಭಿಪ್ರಾಯ ಪಟ್ಟಿರುತ್ತೇನೆ. ಆದ್ದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇವೆ (ನಡವಳಿಕೆ ಶಿಸ್ತಿ) 1971 ರ ನಿಯಮಾವಳಿ 22 ವಿಧಿಯ ಪ್ರಕಾರ ಬಸವರಾಜ ಅಂಬಿಗೇರ ಚಾಲಕ/ನಿರ್ವಾಹಕರಾದ (ಬಿಲ್ಲೆ ಸಂ:1581) ನಿಮ್ಮ ಮೇಲೆ ಈ ಕೇಳ ಕಾಣಿಸಿದ ಆರೋಪಗಳನ್ನು ಮಂಡಿಸಲಾಗಿದೆ.
ದಿನಾಂಕ: 20/04/2025 ರಂದು ಅನುಸೂಚಿ 76/77 ರ ಮೇಲೆ ನಿರ್ವಾಹಕರಾಗಿ ಕರ್ತವ್ಯದ ಮೇಲಿದ್ದ ವೇಳೆ ಅಂದರೆ 20/04/2025ರ ಬೆಳಗ್ಗೆ 11:30ರ ವೇಳೆಗೆ ಮಾಗೋಡ ಸರದಿಯಲ್ಲಿ ತಾವು ಯಲ್ಲಾಪುರ ಬಸ್ ನಿಲ್ದಾಣದಿಂದ ಕಾರ್ಯಾಚರಿಸುವಾಗ ಯಲ್ಲಾಪುರದಿಂದ ಮಾಗೋಡ ಕಾಲೋನಿಗೆ ಪ್ರಯಾಣಿಸಲು ಬಂದ ಮಹಿಳಾ ಪ್ರಯಾಣಿಕರಿಗೆ ತಾವು ಒಣ ಮೆಣಸನ್ನು ಒಯ್ಯುವ ಹಾಗಿಲ್ಲ ಎಂದು ಹೇಳಿ ಬಸ್ಸಿನಿಂದ ಕೆಳಗೆ ಇಳಿಸಿರುತ್ತೀರಿ. ಈ ರೀತಿ ತಾವು ನೌಕರನಿಗೆ ತಕ್ಕುದಲ್ಲದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು ತಮ್ಮ ಮೇಲೆ ಏಕೆ ಶಿಸ್ತಿನ ಕ್ರಮ ಕೈಗೋಳ್ಳಬಾರದೆಂದು. ಈ ಆರೋಪಣ ಪತ್ರ ತಲುಪಿದ 3 ದಿನದೋಳಗಾಗಿ ಲಿಖಿತ ಉತ್ತರ ಸಲ್ಲಿಸಬೇಕು.
ನೀವು ಒಂದು ಪಕ್ಷ ಮೇಲೆ ಗೋತ್ತು ಪಡಿಸಿದ ಆರೋಪಗಳ ಬಗ್ಗೆ 3 ದಿನಗಳಲ್ಲಿ ಲಿಖಿತ ಉತ್ತರ ನೀಡದೇ ಹೋದಲ್ಲಿ ನಿಮ್ಮಿಂದ ಯಾವುದೇ ವಿವರಣೆ ಇಲ್ಲವೆಂದು ಊಹಿಸಿ ಶಿಸ್ತು ಮತ್ತು ನಡವಳಿಕೆ ನಿಯಮದ ಪ್ರಕಾರ ಏಕಪಕ್ಷಿಯವಾಗಿ ಕ್ರಮ ಕೈಗೋಳ್ಳಲಾಗುವುದು ಎಂದು ಘಟಕ ವ್ಯವಸ್ಥಾಪಕರು ಮೆಮೋ ಕೊಟ್ಟಿದ್ದಾರೆ.
ಇನ್ನು ಸಿ.ವಿ.ಸೊನ್ನದ ಎಂಬ ನಿರ್ವಾಹಕರಿಗೆ ನೀವು ಬಸ್ನಲ್ಲಿ ಒಣ ಮೆಣಸಿನ ಕಾಯಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಮಾಡಿಕೊಡುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯಮವನ್ನು ಅಂದರೆ ಒಣ ಮೆಣಸಿನ ಕಾತಿ ಘಾಟು ಇರುವ ವಸ್ತುವನ್ನು ತೆಗೆದುಕೊಂಡು ಹೋಗಬಾರದು ಎಂಬ ನಿಯಮವನ್ನು ಉಲ್ಲಂಘನೆ ಮಾಡುವ ಮೂಲಕ ಸಂಸ್ಥೆಯ ನಿಯಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದೀರಿ. ಹೀಗಾಗಿ ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಜರುಗಿಸಬಾರದು ಎಂದು ಕಾರಣ ಕೇಳಿ ತನಿಖಾ ಸಿಬ್ಬಂದಿಗಳು ಏ.19ರಂದು ಮೆಮೋ ಕೊಟ್ಟಿದ್ದಾರೆ.
ಇನ್ನು ಇದಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳು ಉತ್ತರ ಕೊಡಬೇಕು. ಇಲ್ಲಿ ನಿರ್ವಾಹಕರು ಯಾವ ನಿಯಮವನ್ನು ಪಾಲನೆ ಮಾಡಬೇಕು. ಒಂದು ಕಡೆ ಇಳಿಸಿರುವುದು ತಪ್ಪು ಎಂದು ಹೇಳುತ್ತೀರಿ ಮತ್ತೊಂದುಕಡೆ ಒಣ ಮೆಣಸಿನ ಕಾಯಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಮಾಡಿಕೊಟ್ಟಿರುವುದು ತಪ್ಪು ಎನ್ನುತ್ತೀರಿ ಹೀಗಾದರೆ ನೌಕರರು ಯಾವ ರೀತಿ ಕೆಲಸ ಮಾಡಬೇಕು. ನೀವೆ ಉತ್ತರ ಕೊಡಬೇಕು.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...