- ಒಣ ಮೆಣಸಿನ ಕಾಯಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಕೊಟ್ಟ ನಿರ್ವಾಹಕನಿಗೆ ತನಿಖಾ ಸಿಬ್ಬಂದಿಯಿಂದ ಮೆಮೋ
- ಅವಕಾಶ ಕೊಡದ ಕಂಡಕ್ಟರ್ಗೆ ಘಟಕ ವ್ಯವಸ್ಥಾಪಕರಿಂದ ಮೆಮೋ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಜಾರಿಯಲ್ಲಿರುವ ಕೆಲ ನಿಯಮಗಳು ಚಾಲನಾ ಸಿಬ್ಬಂದಿಗಳಿಗೆ ಅತ್ತ ದರಿ ಇತ್ತ ಪುಲಿ ಎಂಬಂತಿವೆ. ಕಾರಣ ನಿಯಮದಂತೆ ನಡೆದುಕೊಂಡರೂ ಶಿಕ್ಷೆ ಅನುಭವಿಸಬೇಕು ನಡೆದುಕೊಳ್ಳದಿದ್ದರೂ ಶಿಕ್ಷೆ ಅನುಭವಿಸಬೇಕಿದೆ.
ಇದಕ್ಕೆ ತಾಜಾ ನಿದರ್ಶನ ಒಂದನ್ನು ಕೇವಲ ಎರಡೇ ದಿನಗಳ ಅಂತರದಲ್ಲಿ ನಾವು ಕಾಣಬಹುದಾಗಿದೆ. ಒಂದು ಕಡೆ ಪ್ರಯಾಣಿಕರೊಬ್ಬರು ಒಣ ಮೆಣಸಿಕಾಯಿಯ ಚೀಲವೊಂದನ್ನು ತೆಗೆದುಕೊಂಡು ಬಸ್ನಲ್ಲಿ ಪ್ರಾಯಾಣಿಸುವುದಕ್ಕೆ ಅವಕಾಶ ಮಾಡಿಕೊಡುವ ಮೂಲಕ ಸಂಸ್ಥೆಯ ನಿಯಮವನ್ನು ಗಾಳಿ ತೂರಿದ್ದೀರಿ ಎಂದು ಅಪಾಧಿಸಿ ತಾಳಿಕೋಟೆ ಮಾರ್ಗದ ಸಾರಿಗೆ ಬಸ್ ನಿರ್ವಾಹಕರಿಗೆ ಏ.19ರಂದು ತನಿಖಾ ಸಿಬ್ಬಂದಿಗಳು ಮೆಮೋ ಕೊಟ್ಟಿದ್ದಾರೆ.
ಇದಾದ ಬಳಿಕ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉ.ಕ.ವಿಭಾಗ ಯಲ್ಲಾಪುರ ಘಟಕದ ವ್ಯವಸ್ಥಾಪಕರು ಪ್ರಯಾಣಿಕರೊಬ್ಬರು ಏ.20ರಂದು ಒಣ ಮೆಣಸಿನ ಕಾಯಿಯನ್ನು ಬಸ್ನಲ್ಲಿ ತೆಗೆದುಕೊಂಡು ಪ್ರಯಾಣಿಸುವುದಕ್ಕೆ ನೀವು ಅನುವು ಮಾಡಿಕೊಡದೆ ಪ್ರಯಾಣಿಕರಿಗೆ ತೊಂದರೆ ಕೊಡುವ ಮೂಲಕ ಸಂಸ್ಥೆಯ ನಿಮವನ್ನು ಉಲ್ಲಂಘನೆ ಮಾಡಿ ಬೇಜವಾಬ್ದಾರಿಯಿಂದ ವರ್ತಿಸಿದ್ದೀರಿ. ಏಕೆ ನಾವು ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಕಾರಣ ಕೇಳಿ ಮೆಮೋ ಕೊಟ್ಟಿದ್ದಾರೆ.
ಈ ರೀತಿ ಅಧಿಕಾರಿಗಳು ದ್ವಿಮುಖ ನಡೆ ಅನುಸರಿಸಿದರೆ ನಿರ್ವಾಹಕರು ಕರ್ತವ್ಯ ನಿರ್ವಹಿಸುವುದಾದರೂ ಹೇಗೆ? ಒಂದು ಕಡೆ ಒಣ ಮೆಣಸಿನಕಾಯಿ ಹಾಕಿದರೆ ಅದಕ್ಕೂ ಮೆಮೋ ಕೊಡುತ್ತಾರೆ ಇನ್ನೊಂದು ಕಡೆ ಹಾಕಿಸಿಕೊಳ್ಳದಿದ್ದರೆ ಅದಕ್ಕೂ ಮೆಮೋ ಕೊಡುತ್ತಾರೆ. ಹೀಗಾಗಿ ನಿರ್ವಾಹಕರು ಕರ್ತವ್ಯ ನಿರ್ವಹಿಸುವುದು ತುಂಬ ಕಷ್ಟಕರವಾಗುತ್ತಿದೆ.
ಹೀಗೆ ಅಧಿಕಾರಿಗಳು ತಮಗೆ ಮನ ಬಂದಂತೆ ಅಧಿಕಾರ ಚಲಾಯಿಸಿ ವರ್ತಿಸಿದರೆ ನಿರ್ವಾಹಕರು ಏನು ಮಾಡುವುದು. ಒಂದು ಸ್ಪಷ್ಟವಾದ ನಿರ್ದೇಶನ ನೀಡಿ ಹಾಕುವುದಾದರೆ ಹಾಕಬೇಕು ಬೇಡವೆಂದರೆ ಬೇಡವೆಂದು ಆದೇಶ ಹೊರಡಿಸಬೇಕು. ಹೀಗೆ ಸಮಯಕ್ಕೆ ತಕ್ಕಂತೆ ಮನಬಂದಂತೆ ವರ್ತಿಸಿದರೆ ಹೇಗೆ ಎಂದು 4 ನಿಗಮಗಳ ನೌಕರರು ಪ್ರಶ್ನಿಸುತ್ತಿದ್ದಾರೆ.
ಯಲ್ಲಾಪುರ ಘಟಕ ವ್ಯವಸ್ಥಾಪಕರು ಕೊಟ್ಟಿರುವ ಮೆಮೋದಲ್ಲೇನಿದೆ?: ನಾನು ಘಟಕ ವ್ಯವಸ್ಥಾಪಕ/ ಶಿಸ್ತುಪಾಲನಾಧಿಕಾರಿ ವಾ.ಕ.ರ.ಸಾ.ಸಂಸ್ಥೆ ಉ.ಕ.ವಿಭಾಗ ಶಿರಸಿ ಯಲ್ಲಾಪುರ ಘಟಕ ನಿಮ್ಮ ಮೇಲೆ ಆರೋಪಗಳ ಬಗ್ಗೆ ನಿಜ ಸಂಗತಿಗಳನ್ನು ತಿಳಿಯಲು ಕೆಲವು ಆಧಾರಗಳು ಪುಷ್ಟಿಕರಿಸುತ್ತೇನೆಂದು ಅಭಿಪ್ರಾಯ ಪಟ್ಟಿರುತ್ತೇನೆ. ಆದ್ದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸೇವೆ (ನಡವಳಿಕೆ ಶಿಸ್ತಿ) 1971 ರ ನಿಯಮಾವಳಿ 22 ವಿಧಿಯ ಪ್ರಕಾರ ಬಸವರಾಜ ಅಂಬಿಗೇರ ಚಾಲಕ/ನಿರ್ವಾಹಕರಾದ (ಬಿಲ್ಲೆ ಸಂ:1581) ನಿಮ್ಮ ಮೇಲೆ ಈ ಕೇಳ ಕಾಣಿಸಿದ ಆರೋಪಗಳನ್ನು ಮಂಡಿಸಲಾಗಿದೆ.
ದಿನಾಂಕ: 20/04/2025 ರಂದು ಅನುಸೂಚಿ 76/77 ರ ಮೇಲೆ ನಿರ್ವಾಹಕರಾಗಿ ಕರ್ತವ್ಯದ ಮೇಲಿದ್ದ ವೇಳೆ ಅಂದರೆ 20/04/2025ರ ಬೆಳಗ್ಗೆ 11:30ರ ವೇಳೆಗೆ ಮಾಗೋಡ ಸರದಿಯಲ್ಲಿ ತಾವು ಯಲ್ಲಾಪುರ ಬಸ್ ನಿಲ್ದಾಣದಿಂದ ಕಾರ್ಯಾಚರಿಸುವಾಗ ಯಲ್ಲಾಪುರದಿಂದ ಮಾಗೋಡ ಕಾಲೋನಿಗೆ ಪ್ರಯಾಣಿಸಲು ಬಂದ ಮಹಿಳಾ ಪ್ರಯಾಣಿಕರಿಗೆ ತಾವು ಒಣ ಮೆಣಸನ್ನು ಒಯ್ಯುವ ಹಾಗಿಲ್ಲ ಎಂದು ಹೇಳಿ ಬಸ್ಸಿನಿಂದ ಕೆಳಗೆ ಇಳಿಸಿರುತ್ತೀರಿ. ಈ ರೀತಿ ತಾವು ನೌಕರನಿಗೆ ತಕ್ಕುದಲ್ಲದ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದು ತಮ್ಮ ಮೇಲೆ ಏಕೆ ಶಿಸ್ತಿನ ಕ್ರಮ ಕೈಗೋಳ್ಳಬಾರದೆಂದು. ಈ ಆರೋಪಣ ಪತ್ರ ತಲುಪಿದ 3 ದಿನದೋಳಗಾಗಿ ಲಿಖಿತ ಉತ್ತರ ಸಲ್ಲಿಸಬೇಕು.
ನೀವು ಒಂದು ಪಕ್ಷ ಮೇಲೆ ಗೋತ್ತು ಪಡಿಸಿದ ಆರೋಪಗಳ ಬಗ್ಗೆ 3 ದಿನಗಳಲ್ಲಿ ಲಿಖಿತ ಉತ್ತರ ನೀಡದೇ ಹೋದಲ್ಲಿ ನಿಮ್ಮಿಂದ ಯಾವುದೇ ವಿವರಣೆ ಇಲ್ಲವೆಂದು ಊಹಿಸಿ ಶಿಸ್ತು ಮತ್ತು ನಡವಳಿಕೆ ನಿಯಮದ ಪ್ರಕಾರ ಏಕಪಕ್ಷಿಯವಾಗಿ ಕ್ರಮ ಕೈಗೋಳ್ಳಲಾಗುವುದು ಎಂದು ಘಟಕ ವ್ಯವಸ್ಥಾಪಕರು ಮೆಮೋ ಕೊಟ್ಟಿದ್ದಾರೆ.
ಇನ್ನು ಸಿ.ವಿ.ಸೊನ್ನದ ಎಂಬ ನಿರ್ವಾಹಕರಿಗೆ ನೀವು ಬಸ್ನಲ್ಲಿ ಒಣ ಮೆಣಸಿನ ಕಾಯಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಮಾಡಿಕೊಡುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿಯಮವನ್ನು ಅಂದರೆ ಒಣ ಮೆಣಸಿನ ಕಾತಿ ಘಾಟು ಇರುವ ವಸ್ತುವನ್ನು ತೆಗೆದುಕೊಂಡು ಹೋಗಬಾರದು ಎಂಬ ನಿಯಮವನ್ನು ಉಲ್ಲಂಘನೆ ಮಾಡುವ ಮೂಲಕ ಸಂಸ್ಥೆಯ ನಿಯಮವನ್ನು ಪಾಲಿಸುವಲ್ಲಿ ವಿಫಲರಾಗಿದ್ದೀರಿ. ಹೀಗಾಗಿ ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಜರುಗಿಸಬಾರದು ಎಂದು ಕಾರಣ ಕೇಳಿ ತನಿಖಾ ಸಿಬ್ಬಂದಿಗಳು ಏ.19ರಂದು ಮೆಮೋ ಕೊಟ್ಟಿದ್ದಾರೆ.
ಇನ್ನು ಇದಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳು ಉತ್ತರ ಕೊಡಬೇಕು. ಇಲ್ಲಿ ನಿರ್ವಾಹಕರು ಯಾವ ನಿಯಮವನ್ನು ಪಾಲನೆ ಮಾಡಬೇಕು. ಒಂದು ಕಡೆ ಇಳಿಸಿರುವುದು ತಪ್ಪು ಎಂದು ಹೇಳುತ್ತೀರಿ ಮತ್ತೊಂದುಕಡೆ ಒಣ ಮೆಣಸಿನ ಕಾಯಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಮಾಡಿಕೊಟ್ಟಿರುವುದು ತಪ್ಪು ಎನ್ನುತ್ತೀರಿ ಹೀಗಾದರೆ ನೌಕರರು ಯಾವ ರೀತಿ ಕೆಲಸ ಮಾಡಬೇಕು. ನೀವೆ ಉತ್ತರ ಕೊಡಬೇಕು.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...