ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ತುಮಕೂರು ವಿಭಾಗದ ಕೆಲವು ಘಟಕಗಳಲ್ಲಿ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಡ್ಯೂಟಿರೋಟ ಪದ್ಧತಿಯನ್ನು ಜೇಷ್ಠತೆಯ ಆಧಾರದ ಮೇಲೆ ಮಾಡುತ್ತಿಲ್ಲ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಎಸ್.ಎಲ್.ಲೋಕೇಶ್ ಲಿಖಿತ ದೂರು ನೀಡಿದ್ದಾರೆ.
ಈ ಸಂಬಂಧ ಶನಿವಾರ ದೂರು ನೀಡಿರುವ ಲೋಕೇಶ್, ತುಮಕೂರು ವಿಭಾಗದಲ್ಲಿ ಏಳು ಘಟಕಗಳ ಪೈಕಿ ಶಿರ ಹಾಗೂ ಮಧುಗಿರಿಯಲ್ಲಿ ಕೇಂದ್ರ ಕಚೇರಿ ಆದೇಶದ ಅನ್ವಯ ಜೇಷ್ಠತೆ ಆಧಾರದ ಮೇಲೆ ಡ್ಯೂಟಿರೋಟ ಪದ್ಧತಿಯನ್ನು ಜನವರಿಯಿಂದ ಜಾರಿಗೆ ತಂದಿದ್ದಾರೆ. ಆದರೆ ಉಳಿದ ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸಂಚಾರ ಶಾಖೆಯಲ್ಲಿ ಇರುವ ಸಿಬ್ಬಂದಿಗಳು ಹಲವಾರು ಕಾರಣಗಳನ್ನು ಹೇಳಿಕೊಂಡು ಡ್ಯೂಟಿರೋಟ ಪದ್ಧತಿಯ ಕೌನ್ಸಿಲಿಂಗ್ ಮಾಡುವುದನ್ನು ಮುಂದೂಡುತ್ತಾ ಬಂದಿದ್ದಾರೆ.
ಕೆಲವು ಘಟಕಗಳಲ್ಲಿ ಬಿಎಂಟಿಸಿ ಇಂದ ಕೆಲವು ಸಿಬ್ಬಂದಿಗಳು ವರ್ಗಾವಣೆಯಾಗಿ ಬರುವುದಿದೆ ಅವರು ಬಂದ ನಂತರ ಮಾಡುತ್ತೇವೆ ಎಂದು ಇನ್ನೂ ಕೆಲವು ಘಟಕಗಳಲ್ಲಿ ನಮ್ಮನ್ನು ನೀವು ಕೇಳಬೇಡಿ ವಿಭಾಗಿಯ ಸಂಚಲನಾಧಿಕಾರಿಗಳನ್ನು ಕೇಳಿ ಎಂದು ಮತ್ತೆ ಕೆಲವು ಘಟಕಗಳಲ್ಲಿ, ಈ ವಾರ ಮುಂದಿನ ವಾರ ಎಂದು ಸಬೂಬು ಹೇಳುತ್ತಾ ಬರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಮುಖ್ಯವಾಗಿ ಸಂಚಾರ ಶಾಖೆಯ ಅಧಿಕಾರಿಗಳಿಗೆ ಕೆಲವು ಚಾಲನೆ ಸಿಬ್ಬಂದಿಗಳು ಹೊಂದಾಣಿಕೆಯ ಕಾರಣದಿಂದ ಹಣ ನೀಡಿ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಅವರ ಅನುಕೂಲಕ್ಕಾಗಿ ಡ್ಯೂಟಿರೋಟ ಪದ್ದತಿ ಮಾಡುವುದನ್ನು ಮುಂದೂಡುತ್ತ ಬಂದಿದ್ದಾರೆ.
ತಿಪಟೂರು ಘಟಕದಲ್ಲಿ 2024ರಲ್ಲಿ ಆದಂತ ಡ್ಯೂಟಿರೋಟ ಪದ್ಧತಿಯ ಆಯ್ಕೆ ಮಾಡಿಕೊಂಡ ಶೇಕಡ 50ಕ್ಕೂ ಹೆಚ್ಚು ಸಿಬ್ಬಂದಿಗಳು ಆ ಮಾರ್ಗಗಳಲ್ಲಿ ಡ್ಯೂಟಿ ಮಾಡದೆ ಸಂಚಾರ ಶಾಖೆಯವರ ನಡುವೆ ಹಣದ ಹೊಂದಾಣಿಕೆಯ ಕಾರಣದಿಂದ ಹೆಚ್ಚು ರೂಟ್ಗಳನ್ನು ಹಾಗೂ ರಿಟರ್ನ್ ರೂಟ್ಗಳನ್ನು ಅತಿ ಹೆಚ್ಚು ಹಣ ನೀಡಿ ಮಾಡುವಂತ ವ್ಯವಸ್ಥೆ ಮಾಡಿಕೊಂಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಸೇವಾ ಹಿರಿತನದ ನೌಕರರಿಗೆ ಮಾರ್ಗಗಳು ದೊರೆಯುತ್ತಿಲ್ಲ. ಮುಖ್ಯವಾಗಿ ಎಲ್ಲ ಘಟಕಗಳಲ್ಲಿಯೂ ಹಿರಿಯ ಸಿಬ್ಬಂದಿಗಳಿಗೆ ಹೆಚ್ಚಿನ ತೊಂದರೆ ಇದ್ದು ಇತ್ತೀಚಿಗೆ ಬಂದಂತಹ ಕಿರಿಯ ಸಿಬ್ಬಂದಿಗಳು ಸಂಚಾರ ಶಾಖೆಯವರಿಗೆ ಹಣ ನೀಡಿ ಹಿರಿಯ ಸಿಬ್ಬಂದಿಗಳನ್ನು ಕಡೆಗಣನೆ ಮಾಡಿದ್ದಾರೆ.
ಈ ಎಲ್ಲ ಸಮಸ್ಯೆಗಳ ಬಗ್ಗೆ ಘಟಕಗಳಿಗೆ ಪ್ರತಿ ತಿಂಗಳು ಆಗಮಿಸುವ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಹಾಗೂ ವಿಭಾಗೀಯ ಸಂಚಲನಾಧಿಕಾರಿಗಳಿಗೆ ಎಲ್ಲ ಘಟಕಗಳಲ್ಲಿಯೂ ಸಿಬ್ಬಂದಿಗಳು ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಅಧಿಕಾರಿಗಳು ಸಂಚಾರ ಶಾಖೆಯವರಿಂದ ಪ್ರತಿ ತಿಂಗಳು ಮಾಮೂಲಿ ಪಡೆಯುವ ಕಾರಣಕ್ಕಾಗಿಯೇ ಡ್ಯೂಟಿರೋಟ ಪದ್ಧತಿ ಅನುಷ್ಠಾನಗೊಳಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸೇವಾ ಹಿರಿತನದ ಚಾಲನೆ ಸಿಬ್ಬಂದಿಗಳಿಗೆ ಘಟಕಗಳಲ್ಲಿ ಕೆಲಸ ನಿರ್ವಹಿಸುವಂತಹ ವಾತಾವರಣ ಇಲ್ಲವಾಗಿದೆ. ಪ್ರತಿ ಸಿಬ್ಬಂದಿಯೂ ಸಹ ಘಟಕದಲ್ಲಿ ಉಸಿರುಗಟ್ಟಿಸುವಂತಹ ವಾತಾವರಣದಲ್ಲಿಯೇ ಕೆಲಸ ನಿರ್ವಹಿಸಲು ಹೋಗುವ ಕಾರಣದಿಂದ ಅವರ ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬರುತ್ತಿವೆ.
ಈ ಅಂಶಗಳನ್ನು ಹಾಗೂ ಕಾರಣಗಳನ್ನು ಪರಿಶೀಲಿಸಿ, ತುಮಕೂರು ವಿಭಾಗದ ಅಧಿಕಾರಿಗಳಿಗೆ ಚಾಲನಾ ಸಿಬ್ಬಂದಿಗಳಿಗೆ ಅನುಕೂಲಕರ ವಾಗುವ ರೀತಿಯಲ್ಲಿ ಡ್ಯೂಟಿರೋಟ ಪದ್ಧತಿಯನ್ನು ಈ ಕೂಡಲೇ ತತಕ್ಷಣಕ್ಕೆ ಜಾರಿಗೆ ಬರುವಂತೆ ಮಾಡಲು ವಿಭಾಗಿಯ ನಿಯಂತ್ರಣ ಅಧಿಕಾರಿಗಳಿಗೆ ತಾವು ನಿರ್ದೇಶನ ನೀಡಬೇಕೆಂದು ಹಾಗೂ ಈ ಪದ್ದತಿಯನ್ನು ಅನುಷ್ಠಾನಗೊಳಿಸಲು ತಡ ಮಾಡುತ್ತಿರುವಂತಹ ಪ್ರತಿ ಘಟಕದ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಶಾಖೆಯ ಇನ್ಸ್ಪೆಕ್ಟರ್ ಗಳಿಗೆ ಸೂಕ್ತ ರೀತಿಯ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...