ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ತುಮಕೂರು ವಿಭಾಗದ ಕೆಲವು ಘಟಕಗಳಲ್ಲಿ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಡ್ಯೂಟಿರೋಟ ಪದ್ಧತಿಯನ್ನು ಜೇಷ್ಠತೆಯ ಆಧಾರದ ಮೇಲೆ ಮಾಡುತ್ತಿಲ್ಲ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಎಸ್.ಎಲ್.ಲೋಕೇಶ್ ಲಿಖಿತ ದೂರು ನೀಡಿದ್ದಾರೆ.
ಈ ಸಂಬಂಧ ಶನಿವಾರ ದೂರು ನೀಡಿರುವ ಲೋಕೇಶ್, ತುಮಕೂರು ವಿಭಾಗದಲ್ಲಿ ಏಳು ಘಟಕಗಳ ಪೈಕಿ ಶಿರ ಹಾಗೂ ಮಧುಗಿರಿಯಲ್ಲಿ ಕೇಂದ್ರ ಕಚೇರಿ ಆದೇಶದ ಅನ್ವಯ ಜೇಷ್ಠತೆ ಆಧಾರದ ಮೇಲೆ ಡ್ಯೂಟಿರೋಟ ಪದ್ಧತಿಯನ್ನು ಜನವರಿಯಿಂದ ಜಾರಿಗೆ ತಂದಿದ್ದಾರೆ. ಆದರೆ ಉಳಿದ ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸಂಚಾರ ಶಾಖೆಯಲ್ಲಿ ಇರುವ ಸಿಬ್ಬಂದಿಗಳು ಹಲವಾರು ಕಾರಣಗಳನ್ನು ಹೇಳಿಕೊಂಡು ಡ್ಯೂಟಿರೋಟ ಪದ್ಧತಿಯ ಕೌನ್ಸಿಲಿಂಗ್ ಮಾಡುವುದನ್ನು ಮುಂದೂಡುತ್ತಾ ಬಂದಿದ್ದಾರೆ.
ಕೆಲವು ಘಟಕಗಳಲ್ಲಿ ಬಿಎಂಟಿಸಿ ಇಂದ ಕೆಲವು ಸಿಬ್ಬಂದಿಗಳು ವರ್ಗಾವಣೆಯಾಗಿ ಬರುವುದಿದೆ ಅವರು ಬಂದ ನಂತರ ಮಾಡುತ್ತೇವೆ ಎಂದು ಇನ್ನೂ ಕೆಲವು ಘಟಕಗಳಲ್ಲಿ ನಮ್ಮನ್ನು ನೀವು ಕೇಳಬೇಡಿ ವಿಭಾಗಿಯ ಸಂಚಲನಾಧಿಕಾರಿಗಳನ್ನು ಕೇಳಿ ಎಂದು ಮತ್ತೆ ಕೆಲವು ಘಟಕಗಳಲ್ಲಿ, ಈ ವಾರ ಮುಂದಿನ ವಾರ ಎಂದು ಸಬೂಬು ಹೇಳುತ್ತಾ ಬರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಮುಖ್ಯವಾಗಿ ಸಂಚಾರ ಶಾಖೆಯ ಅಧಿಕಾರಿಗಳಿಗೆ ಕೆಲವು ಚಾಲನೆ ಸಿಬ್ಬಂದಿಗಳು ಹೊಂದಾಣಿಕೆಯ ಕಾರಣದಿಂದ ಹಣ ನೀಡಿ ಮಾರ್ಗಗಳನ್ನು ಆಯ್ಕೆ ಮಾಡಿಕೊಂಡು ಅವರ ಅನುಕೂಲಕ್ಕಾಗಿ ಡ್ಯೂಟಿರೋಟ ಪದ್ದತಿ ಮಾಡುವುದನ್ನು ಮುಂದೂಡುತ್ತ ಬಂದಿದ್ದಾರೆ.
ತಿಪಟೂರು ಘಟಕದಲ್ಲಿ 2024ರಲ್ಲಿ ಆದಂತ ಡ್ಯೂಟಿರೋಟ ಪದ್ಧತಿಯ ಆಯ್ಕೆ ಮಾಡಿಕೊಂಡ ಶೇಕಡ 50ಕ್ಕೂ ಹೆಚ್ಚು ಸಿಬ್ಬಂದಿಗಳು ಆ ಮಾರ್ಗಗಳಲ್ಲಿ ಡ್ಯೂಟಿ ಮಾಡದೆ ಸಂಚಾರ ಶಾಖೆಯವರ ನಡುವೆ ಹಣದ ಹೊಂದಾಣಿಕೆಯ ಕಾರಣದಿಂದ ಹೆಚ್ಚು ರೂಟ್ಗಳನ್ನು ಹಾಗೂ ರಿಟರ್ನ್ ರೂಟ್ಗಳನ್ನು ಅತಿ ಹೆಚ್ಚು ಹಣ ನೀಡಿ ಮಾಡುವಂತ ವ್ಯವಸ್ಥೆ ಮಾಡಿಕೊಂಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇನ್ನು ಸೇವಾ ಹಿರಿತನದ ನೌಕರರಿಗೆ ಮಾರ್ಗಗಳು ದೊರೆಯುತ್ತಿಲ್ಲ. ಮುಖ್ಯವಾಗಿ ಎಲ್ಲ ಘಟಕಗಳಲ್ಲಿಯೂ ಹಿರಿಯ ಸಿಬ್ಬಂದಿಗಳಿಗೆ ಹೆಚ್ಚಿನ ತೊಂದರೆ ಇದ್ದು ಇತ್ತೀಚಿಗೆ ಬಂದಂತಹ ಕಿರಿಯ ಸಿಬ್ಬಂದಿಗಳು ಸಂಚಾರ ಶಾಖೆಯವರಿಗೆ ಹಣ ನೀಡಿ ಹಿರಿಯ ಸಿಬ್ಬಂದಿಗಳನ್ನು ಕಡೆಗಣನೆ ಮಾಡಿದ್ದಾರೆ.
ಈ ಎಲ್ಲ ಸಮಸ್ಯೆಗಳ ಬಗ್ಗೆ ಘಟಕಗಳಿಗೆ ಪ್ರತಿ ತಿಂಗಳು ಆಗಮಿಸುವ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಹಾಗೂ ವಿಭಾಗೀಯ ಸಂಚಲನಾಧಿಕಾರಿಗಳಿಗೆ ಎಲ್ಲ ಘಟಕಗಳಲ್ಲಿಯೂ ಸಿಬ್ಬಂದಿಗಳು ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಅಧಿಕಾರಿಗಳು ಸಂಚಾರ ಶಾಖೆಯವರಿಂದ ಪ್ರತಿ ತಿಂಗಳು ಮಾಮೂಲಿ ಪಡೆಯುವ ಕಾರಣಕ್ಕಾಗಿಯೇ ಡ್ಯೂಟಿರೋಟ ಪದ್ಧತಿ ಅನುಷ್ಠಾನಗೊಳಿಸುವ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸೇವಾ ಹಿರಿತನದ ಚಾಲನೆ ಸಿಬ್ಬಂದಿಗಳಿಗೆ ಘಟಕಗಳಲ್ಲಿ ಕೆಲಸ ನಿರ್ವಹಿಸುವಂತಹ ವಾತಾವರಣ ಇಲ್ಲವಾಗಿದೆ. ಪ್ರತಿ ಸಿಬ್ಬಂದಿಯೂ ಸಹ ಘಟಕದಲ್ಲಿ ಉಸಿರುಗಟ್ಟಿಸುವಂತಹ ವಾತಾವರಣದಲ್ಲಿಯೇ ಕೆಲಸ ನಿರ್ವಹಿಸಲು ಹೋಗುವ ಕಾರಣದಿಂದ ಅವರ ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬರುತ್ತಿವೆ.
ಈ ಅಂಶಗಳನ್ನು ಹಾಗೂ ಕಾರಣಗಳನ್ನು ಪರಿಶೀಲಿಸಿ, ತುಮಕೂರು ವಿಭಾಗದ ಅಧಿಕಾರಿಗಳಿಗೆ ಚಾಲನಾ ಸಿಬ್ಬಂದಿಗಳಿಗೆ ಅನುಕೂಲಕರ ವಾಗುವ ರೀತಿಯಲ್ಲಿ ಡ್ಯೂಟಿರೋಟ ಪದ್ಧತಿಯನ್ನು ಈ ಕೂಡಲೇ ತತಕ್ಷಣಕ್ಕೆ ಜಾರಿಗೆ ಬರುವಂತೆ ಮಾಡಲು ವಿಭಾಗಿಯ ನಿಯಂತ್ರಣ ಅಧಿಕಾರಿಗಳಿಗೆ ತಾವು ನಿರ್ದೇಶನ ನೀಡಬೇಕೆಂದು ಹಾಗೂ ಈ ಪದ್ದತಿಯನ್ನು ಅನುಷ್ಠಾನಗೊಳಿಸಲು ತಡ ಮಾಡುತ್ತಿರುವಂತಹ ಪ್ರತಿ ಘಟಕದ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಶಾಖೆಯ ಇನ್ಸ್ಪೆಕ್ಟರ್ ಗಳಿಗೆ ಸೂಕ್ತ ರೀತಿಯ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...