ಸಾರಿಗೆ ನೌಕರರ ಸೈಕಲ್ಜಾಥಾದ ಯಶಸ್ಸು ಸಹಿಸದೆ ನೌಕರರನ್ನು ಎತ್ತಿಕಟ್ಟುವ ಕೆಲಸ – ಕೂಟದ ಅಧ್ಯಕ್ಷರ ವಿರುದ್ಧ ಅಪಪ್ರಚಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಇದೇ ಅ.10ರಿಂದ ಹಮ್ಮಿಕೊಂಡಿರುವ ರಾಜ್ಯಾದ್ಯಂತ ಬೃಹತ್ಸೈಕಲ್ಜಾಥಾ ಹತ್ತಿಕ್ಕುವ ಹುನ್ನಾರಗಳು ನಡೆಯುತ್ತಿವೆ.
ಈ ನಿಟ್ಟಿನಲ್ಲಿ ಕೂಟದ ಅಧ್ಯಕ್ಷ ಚಂದ್ರಶೇಖರ್ವಿರುದ್ಧ ವಜಾಗೊಂಡ, ಅಮಾನತಾಗಿರುವ ಮತ್ತು ಇತರೆ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿಕೊಂಡಿರುವ ನೌಕರರನ್ನು ಎತ್ತಿಕಟ್ಟುವ ಕೆಲಸಕ್ಕೆ ಕೆಲ ಸಂಘಟನೆಗಳ ಮುಖಂಡರು ತೆರೆಮರೆಯಲ್ಲಿ ಕಸರತ್ತು ಮಾಡುತ್ತಿದ್ದಾರೆ.
ಸಾರಿಗೆ ನೌಕರರ ಕೂಟದ ಅಧ್ಯಕ್ಷರು ನೌಕರರು ಮತ್ತು ಕೂಟದ ಪದಾಧಿಕಾರಿಗಳ ಮಾತನ್ನೇ ಕೇಳುವುದಿಲ್ಲ ಎಂದು ಎರಡು ತಿಂಗಳ ಹಳೆಯ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ಮೂಲಕ ಸೈಕಲ್ಜಾಥಾವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ.
ಆದರೆ, ಈ ಬಗ್ಗೆ ಯಾವ ನೌಕರರು ತೆಲೆ ಕೆಡಿಸಿಕೊಳ್ಳದೆ ನಮ್ಮ ನ್ಯಾಯಯುತ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಚಂದ್ರು ಮನವಿ ಮಾಡಿದ್ದಾರೆ. ಅಲ್ಲದೆ ನಾವು ಕುಟುಂಬವನ್ನು ನೂರಾರು ಕಿಮೀ ದೂರದಲ್ಲಿ ಬಿಟ್ಟು ರಾಜ್ಯಾದ ಮೂಲೆ ಮೂಲೆಗಳಿಗೂ ಸೈಕಲ್ಜಾಥಾ ಮಾಡುತ್ತಿದ್ದೇವೆ. ಅಲ್ಲಿ ನಮ್ಮ ಕುಟುಂಬ ಯಾವ ಸ್ಥಿತಿಯಲ್ಲಿ ಇದೆ ಎಂಬುವುದು ಕೂಡ ನಮಗೆ ಗೊತ್ತಾಗುತ್ತಿಲ್ಲ.
ಈ ಹೋರಾಟ ನನಗಾಗಿ ಅಲ್ಲ, ನಮಗಾಗಿ ಅಂದರೆ ಸಮಸ್ತ ನೌಕರರು ಮತ್ತು ಕುಟುಂಬದವರ ಮುಂದಿನ ಭವಿಷ್ಯಕ್ಕಾಗಿ. ಈಗಾಗಲೇ ಪ್ರತಿ ನೌಕರನಿಗೂ ಇದು ತಿಳಿದಿದೆ. ಈ ಬಗ್ಗೆ ನಾನು ಏನನ್ನು ಹೇಳಬೇಕಿಲ್ಲ. ಅದರೆ, ಕೆಲ ಕಿಡಿಗೇಡಿಗಳು ನೌಕರರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದು ಒಂದು ಸಂಘಟನೆ ಎಂದು ನೋಡಬೇಡಿ ನಾವು ನಿಮ್ಮ ಭವಿಷ್ಯ ಉತ್ತಮವಾಗಿರಲಿ ಎಂದು ಮತ್ತು ನೌಕರರಿಗೆ ಸಿಗಬೇಕಿರುವ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಮತ್ತು ನಿಗಮಗಳ ಆಡಳಿತ ಮಂಡಳಿಗಳ ಮುಂದೆ ಮಂಡಿಸುತ್ತಿದ್ದು ಈಡೇರಸಬೇಕು ಎಂದು ಮನವಿ ಮಾಡುತ್ತಿದ್ದೇವೆ.
ಆದರೆ, ನಮ್ಮ ಬೇಡಿಕೆಗಳಲ್ಲಿ ಪ್ರಮುಖವಾಗಿರುವ ವೇತನ ಆಯೋಗದ ಬಗ್ಗೆ ನಮ್ಮ ನೌಕರರ ಹಲವು ಸಂಘಟನೆಗಳ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಮಾನ ವೇತನ ಬೇಡ ಎಂಬ ನಿಟ್ಟಿನಲ್ಲಿ ಮಾತನಾಡುತ್ತಿದ್ದಾರೆ.
ಅವರಂತೆ ನಾವು ಮಾಡಿದರೆ ಮತ್ತೆ 4 ವರ್ಷಕ್ಕೊಮ್ಮೆ ಇದೆ ಅಮಾನತು, ವಜಾ ಶಿಕ್ಷೆಗೆ ನೌಕರರು ಗುರಿಯಾಗುತ್ತಲೇ ಇರುತ್ತೇವೆ. ಅದು ಬೇಡ ನಮಗೆ ಶಾಶ್ವತ ಪರಿಹಾರ ಬೇಕು ಎಂದು ಎಂಬ ನಿಟ್ಟಿನಲ್ಲಿ ನಾವು ಅಂತಿಮವಾಗಿ ಈ ಜಾಥಾ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಇದೇ ಅ.27ರಂದು ಕಲಬುರಗಿಯಲ್ಲಿ ಬೃಹತ್ಸಮಾವೇಶ ನಡೆಯಲಿದೆ. ಅದಕ್ಕೆ ಸಾವಿರಕ್ಕೂ ಮೀರಿ ನೌಕರರು ಭಾಗವಹಿಸಲಿದ್ದಾರೆ. ಈ ಸಮಾವೇಶವನ್ನು ಹತ್ತಿಕ್ಕುವ ಸಲುವಾಗಿಯೂ ಈ ಪಿತೂರಿ ಮಾಡುತ್ತಿದ್ದಾರೆ ಎಂದು ಚಂದ್ರು ಆರೋಪಿಸಿದ್ದಾರೆ.
ಒಟ್ಟಾರೆ ನಮ್ಮ ಜೀವವಿರುವ ವರೆಗೂ ನಾವು ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಶ್ರಮಿಸುತ್ತಿರುವತ್ತೇವೆ ಎಂದು ನೌಕರರ ಕೂಟದ ಎಲ್ಲ ಪದಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಇನ್ನು ಕಳೆದ 2-3 ತಿಂಗಳ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಆಗುತ್ತಿರುವುದರ ಬಗ್ಗೆ ಕೂಟದ ಜಮರಾಮ ರಾಥೋಡ್ಅವರು ವಿಜಯಪಥಕ್ಕೆ ಪ್ರತಿಕ್ರಿಯಿಸಿದ್ದು, ಅಂದು ಮಾತನಾಡಿರುವುದು ನಾವೇ. ಅದು ಅಂದಿನ ಸಂದರ್ಭದಲ್ಲಿ ನಮ್ಮನ್ನು ಯಾರೋ ದಿಕ್ಕು ತಪ್ಪಿಸಿದ್ದರಿಂದ ಸ್ವಲ್ಪಕೋಪಗೊಂಡು ಚಂದ್ರಶೇಖರ್ಅವರ ಬಗ್ಗೆ ಮಾತನಾಡಿದ್ದೇವೆ. ಆದರೆ ಆ ರೀತಿ ಏನು ಇಲ್ಲ ನಾನು ಕೂಟದಲ್ಲೇ ಇದ್ದೇನೆ. ಈಗ ದೊಡ್ಡಮಟ್ಟದ ಸಮಾವೇಶ ಮಾಡುತ್ತಿದ್ದೇವೆ. ಹೀಗಾಗಿ ನೌಕರರು ಯಾರು ಆ ಆಡಿಯೋ ಬಗ್ಗೆ ತಲೆಕೆಡಿಸಿಕೊಳ್ಳದೆ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...