NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ತುಟ್ಟಿಭತ್ಯೆ ಹಿಂಬಾಕಿ, 2022-23ನೇ ಸಾಲಿನ ಸಮವಸ್ತ್ರ ಬದಲು ನಗದು ಜುಲೈ ವೇತನದಲ್ಲಿ ಪಾವತಿಸಿ: ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ತುಟ್ಟಿಭತ್ಯೆ ಹಿಂಬಾಕಿ ಹಾಗೂ 2022-23 ನೇ ಸಾಲಿನ ಸಮವಸ್ತ್ರದ ಬದಲು ನಗದನ್ನು ಜುಲೈ ವೇತನದಲ್ಲಿ ಪಾವತಿಸಲು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಅವರು, 01.01.2024 ರಿಂದ ಹೆಚ್ಚಳವಾದ ಶೇ 3.75 ತುಟ್ಟಿಭತ್ಯೆಯನ್ನು ಮಾರ್ಚ್‌-2024 ರ ಮಾಹೆಯಿಂದ ಅನುಷ್ಠಾನಗೊಳಿಸಿ ಪಾವತಿಸಲಾಗಿತ್ತು.

ಆ ಬಳಿಕ ಜನವರಿ-2024 ಹಾಗೂ ಫೆಬ್ರವರಿ-2024 ಮಾಹೆಯ 02 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಯನ್ನು ಹಾಗೂ 2022-23 ನೇ ಸಾಲಿನ ಸಮವಸ್ತ್ರದ ಬದಲು ನಗದು ಪಾವತಿಯನ್ನು ಮುಂದಿನ ಆದೇಶದವರೆಗೆ ಕಾಯ್ದಿರಿಸಲಾಗಿತ್ತು.

ಹೀಗಾಗಿ ಸಿಬ್ಬಂದಿಗಳ ಹಿತದೃಷ್ಟಿಯಿಂದ ನಿಗಮದ ಅಧಿಕಾರಿ/ ಸಿಬ್ಬಂದಿಗಳಿಗೆ ಜನವರಿ-2024 ಹಾಗೂ ಫೆಬ್ರವರಿ-2024 ಮಾಹೆಯ 02 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಮೊತ್ತವನ್ನು ಹಾಗೂ 2022-23 ನೇ ಸಾಲಿನ ಸಮವಸ್ತ್ರದ ನಗದು ಮೊತ್ತವನ್ನು ಜುಲೈ-2025 ರ ಮಾಹೆಯ ವೇತನದೊಂದಿಗೆ ಸೇರಿಸಿ ಪಾವತಿಸಲು ಆದೇಶ ಮಾಡಿದ್ದಾರೆ.

ಇದಿಷ್ಟೇ ಅಲ್ಲದೆ ಈ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದವರಿಗೆ ಲಭ್ಯವಿರುವ ತುಟ್ಟಿಭತ್ಯೆ ಹಿಂಬಾಕಿ ಹಾಗೂ ಸಮವಸ್ತ್ರದ ಮೊತ್ತವನ್ನು (ಸಂಸ್ಥೆಗೆ ಬರಬೇಕಾದ ಬಾಕಿ ಮೊತ್ತ ಇದ್ದಲ್ಲಿ ಕಡಿತ ಮಾಡಿಕೊಂಡು) ಧನಾದೇಶಗಳ ಮೂಲಕ 18.08.2025 ರಂದು ಪಾವತಿಸುವಂತೆಯೂ ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ