ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಸರ್ಕಾರಿ ನೌಕರರಿಗೆ ಕೊಡುವಂತ ವೇತನವನ್ನು ಆಯಾ ಹುದ್ದೆಗಳಿಗೆ ಅನುಗುಣವಾಗಿ ಸರಿ ಸಮಾನ ವೇತನ ಹಾಗೂ ಇನ್ನಿತರ ಸೌಲಭ್ಯಗಳನ್ನು ಕೊಡುತ್ತೇವೆ ಎಂದು ಭರವಸೆ ಕೊಟ್ಟಿದೆ.
ಆದರೆ, ಸರ್ಕಾರ ರಚನೆಯಾಗಿ 2 ವರ್ಷ ಕಳೆಯುತ್ತಾ ಬಂದರೂ ಈವರೆಗೂ ಕೊಟ್ಟ ಭರವಸೆಯಂತೆ ಸಾರಿಗೆ ನೌಕರರಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿಲ್ಲ. ಈ ನಡುವೆ 2024 ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಆಗಬೇಕಾಗಿದೆ. ಅದನ್ನು ಮಾಡುತ್ತಿಲ್ಲ.
ಈ ಎಲ್ಲದರ ಮಧ್ಯೆ ಎಲ್ಲ ಸಾರಿಗೆ ಸಂಘಟನೆಗಳು ಸರ್ಕಾರಕ್ಕೆ ಸರಿ ಸಮಾನ ವೇತನಕ್ಕಾಗಿ ಮನವಿ ಕೊಡಬೇಕಾಗಿತ್ತು. ದುರ್ದೈವದ ಸಂಗತಿ ಏನಂದರೆ ಕೆಲವು ಸಂಘಟನೆಗಳು ಸೇರಿಕೊಂಡು ಜಂಟಿ ಕ್ರಿಯಾ ಸಮೀತಿ ಎಂದು ನಾಮಕರಣ ಮಾಡಿಕೊಂಡು ಶೇ.25 ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಇದನ್ನು ಗಮನಿಸಿದರೆ ಈಗಾಗಲೇ ಸರ್ಕಾರಿ ನೌಕರರಿಗಿಂತ ಶೇ.40 ರಿಂದ 50ರವರೆಗೆ ಕಡಿಮೆ ವೇತನ ಪಡೆಯುತ್ತಿರುವ ನಾವು ಸರ್ಕಾರಿ ನೌಕರರ ಸರಿ ಸಮಾನ ವೇತನ ಪಡೆಯುವ ಮಟ್ಟಕ್ಕೆ ಬರಲು ಸಾಧ್ಯವೇ? ಈ ಬಗ್ಗೆ ಯೋಚನೆ ಮಾಡಬೇಕಿದೆ.
ಇದರ ಜತೆಗೆ ಈಗಾಗಲೇ 1-1-2024 ರಿಂದ ಇಚೇಗೆ ಹಲವಾರು ನೌಕರರು ನಿವೃತ್ತಿ ಹೊಂದಿದ್ದರೆ, ಮುಂದಿನ ದಿನಗಳಲ್ಲಿ ಅಂದರೆ 31-12-2027 ನಿವೃತ್ತಿ ಹೊಂದುವವರಿಗೆ, ಸರಿ ಸಮಾನ ವೇತನವಾದರೆ ಲಕ್ಷ ರೂ.ಗಳಿಗೂ ಹೆಚ್ಚು ಗ್ರಾಚುಟಿ ಹಣ ನಮಗೆ ಬರುತ್ತದೆ. ಅಲ್ಲದೆ ಇದರಿಂದ ಹೆಚ್ಚಿನ ಲಾಭ ನೌಕರರಿಗೆ ಆಗುತ್ತದೆ. ಇತರ ಸೌಲಭ್ಯಗಳು ಸಿಗುತ್ತವೆ.
ಆದರೆ ಜಂಟಿ ಕ್ರಿಯಾ ಸಮೀತಿ ಪದಾಧಿಕಾರಿಗಳು ತಾವು 7ನೆಯ ವೇತನ ಆಯೋಗದ ಪ್ರಕಾರ ಸರಿ ಸಮಾನ ವೇತನಕ್ಕೆ ಮನವಿ ಕೊಡದೆ ಹೋದರೆ, ಈ ನಿವೃತ್ತಿ ಹೊಂದಿರುವ ಮುಂದೆ ಹೊಂದುವ ನೌಕರರಿಗೆ ಆಗುವ ನಷ್ಟವನ್ನು ಹೇಗೆ ಸರಿಪಡಿಸುತ್ತೀರಿ. ಆ ನಷ್ಟವನ್ನು ಯಾರು ಭರಿಸುವರು ಈ ಬಗ್ಗೆ ತಾವು ಸ್ಪಷ್ಟನೆ ಕೊಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
ಈ ಎಲ್ಲದ ನಡುವೆ ತಮ್ಮಲ್ಲಿ ಮತ್ತೊಮ್ಮೆ ಮನವಿ ಮಾಡಿಕೋಳ್ಳುತ್ತಿದ್ದೇವೆ ತಾವು ಸಹ 7ನೇ ವೇತನ ಆಯೋಗದ ಪ್ರಕಾರ ಸರಿ ಸಮಾನ ವೇತನಕ್ಕೆ ಮನವಿ ಕೊಡಿ ಎಂದು ನಿಮ್ಮ ಮೇಲೆ ನಿರೀಕ್ಷೆ ಇಟ್ಟಿರುವ ನೊಂದ ಸಾರಿಗೆ ನೌಕರರು ಮನವು ಮಾಡುತ್ತಿದ್ದೇವೆ ಎಂದ್ದಾರೆ.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...