NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಒಂದೇ ಕಂತಿನಲ್ಲಿ ಪಾವತಿಸಲು ಸಾರಿಗೆ ನೌಕರರ ಆಗ್ರಹ

KSRTC ಏಕ ಸದಸ್ಯ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2020ರ ವೇತನ ಪರಿಷ್ಕರಣೆ ಆಗಿದೆ. ಆದರೆ, ನೌಕರರಿಗೆ ಇನ್ನೂ ಹಿಂಬಾಕಿ ನೀಡಿಲ್ಲ ಕೂಡಲೇ ನೀಡಬೇಕು ಎಂದು ನೌಕರರ ಸಂಘಟನೆಗಳು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸಿಎಂ ಮತ್ತು ಸಾರಿಗೆ ಸಚಿವರ ಬಳಿಗೆ ಈಗಾಗಲೆ ಹಲವಾರು ಬಾರಿ ತೆರಳಿ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಈ ಬಗ್ಗೆ ಏಕ ಸದಸ್ಯ ಸಮಿತಿಗೆ ಸರ್ಕಾರ ಸೂಚನೆ ನೀಡಿ ಹಿಂಬಾಕಿಯನ್ನು ಕೊಡುವುದಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಜನವರಿ 1-2020ರಿಂದ ಜಾರಿಯಾಗಬೇಕಿದ್ದ ಪರಿಷ್ಕೃತ ವೇತನವು  ಕೋವಿಡ್‌ -19 ಮತ್ತಿತರ ಕಾರಣಗಳಿಂದ ವಿಳಂಬವಾಗಿ 17-ಮಾರ್ಚ್‌2023ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದರು.

ವೇತನ ಹೆಚ್ಚಳವು ಜನವರಿ 1-2020ರಿಂದ ಜಾರಿಗೆ ಬಂದಿದೆ. ಇದು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಮಾರ್ಚ್‌ 2023ರಿಂದ ಇದರ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ, ಹಿಂಬಾಕಿ ಬಗ್ಗೆ ಇನ್ನು ನಿರ್ಧಾರ ತೆಗೆದುಕೊಂಡಿಲ್ಲ. ಜತೆಗೆ ಈ ನಡುವೆ ನಿವೃತ್ತರಾದ ನೌಕರರಿಗೆ ಯಾವ ರೀತಿ ಹಿಂಬಾಕಿ ನೀಡಬೇಕು ಎಂಬುದರ ಬಗ್ಗೆ ಏನನ್ನೂ ಹೇಳುತ್ತಿಲ್ಲ.

ನಮಗೆ ಒಟ್ಟಾರೆ 38ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಬರಬೇಕಿದೆ. ಈ ಬಗ್ಗೆ ಕೇವಲ ಒಂದು ತಿಂಗಳೊಳಗೆ ತೀರ್ಮಾನ ತೆಗೆದುಕೊಂಡು ಹಿಂಬಾಕಿ ವೇತನ ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ಆದರೆ ಅದು 7 ತಿಂಗಳು ಕಳೆದರೂ ಇನ್ನು ಜಾರಿಯಾಗಿಲ್ಲ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮಗೆ ಈರೀತಿಯ ಸಮಸ್ಯೆ ಆಗುತ್ತವೇ ಎಂದೇ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ಹೋರಾಟ ಮಾಡಿದ್ದೆವು. ಅಂದು ಆರ್ಥಿಕ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ ಬಿಜೆಪಿ ಸರ್ಕಾರ ಕೊನೆಗೆ ಅಗ್ರಿಮೆಂಟ್‌ ಮಾಡಿತು. ಆದರೆ ಅದರ ಹಿಂಬಾಕಿಯನ್ನು ಕೊಡದೆ ಪತನಗೊಂಡಿತು.

ನಂತರ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸರ್ಕಾರ ಇನ್ನೂ ನೌಕರರಿಗೆ ಹಿಂಬಾಕಿ ಕೊಡಲು ಮೀನಮೇಷ ಎಣಿಸುತ್ತಿದೆ ಇದು ನೌಕರರಿಗೆ ತುಂಬ ನೋವಾಗುತ್ತಿದೆ. ಇನ್ನಾದರೂ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಹಿಂಬಾಕಿಯನ್ನು ಕೂಡಲೇ ಕೊಡುವುದಾಗಿ ಹೇಳಬೇಕು ಎಂದು ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಜತೆಗೆ ಏಕ ಸದಸ್ಯ ಸಮಿತಿ ಈ ಬಗ್ಗೆ ಕೂಡಲೇ ವರದಿಯನ್ನು ಸಲ್ಲಿಸಬೇಕು. ಹೀಗೆ ವಿಳಂಬ ಮಾಡುವುದು ಏತಕ್ಕೆ ಎಂದು ಪ್ರಶ್ನಿಸಿದ್ದು, ಇನ್ನಾದರೂ ನೌಕರರಿಗೆ ನ್ಯಾಯಯುತವಾಗಿ ತಲುಪಿಸಬೇಕಿರುವ  ಸೌಲಭ್ಯವನ್ನು ನೀಡುವಂತೆ ಸರ್ಕಾರಕ್ಕೆ ಏಕ ಸದಸ್ಯ ಸಮಿತಿ  ವರದಿ ನೀಡಬೇಕು ಎಂದೂ ಒತ್ತಾಯಿಸಿದ್ದಾರೆ.

ಇತ್ತ ನಿವೃತ್ತ ನೌಕರರು ಕೂಡ ವೇತನ ಹಿಂಬಾಕಿಗಾಗಿ ಕಾಯುತ್ತಿದ್ದು, ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಶೀಘ್ರದಲ್ಲೇ ನಿಯೋಗವೊಂದು ತೆರಳಲಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ