NEWSನಮ್ಮರಾಜ್ಯಶಿಕ್ಷಣ-

KSRTC ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ  ಶೇಕಡ80% ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಹ ನೌಕರರ ಮಕ್ಕಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘವು ಎಸ್ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.80 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಸಂಘದಲ್ಲಿ ಸದಸ್ಯತ್ವ ಪಡೆದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಿದೆ.

ಹೀಗಾಗಿ ಸಂಘದಲ್ಲಿ ಸದಸ್ಯತ್ವ ಪಡೆದಿರುವ ನಾಲ್ಕು ನಿಗಮಗಳ ನೌಕರರ ಅರ್ಹ ಮಕ್ಕಳ ಶಾಲಾ ಅಂಕಪಟ್ಟಿ, ಆಧಾರ್ ಕಾರ್ಡ್, ನೌಕರರು ಪಡೆದಿರುವ ಸಂಘದ ಸದಸ್ಯತ್ವ ಕಾರ್ಡ್‌ ಮತ್ತು ಸಿಬ್ಬಂದಿಯ ಗುರುತಿನ ಕಾರ್ಡ್ ನಕಲು ಪ್ರತಿಗಳ ( Xerox) ದಾಖಲಾತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ನಂ31/31 ಹೆಗ್ಗನಹಳ್ಳಿ ಮುಖ್ಯ ರಸ್ತೆ ಸಲ್ಲಾಪುರದಮ್ಮ ದೇವಸ್ಥಾನದ ಪಕ್ಕ ಸುಂಕದಕಟ್ಟೆ ಬೆಂಗಳೂರು-91 ಇಲ್ಲಿಗೆ ಕಳುಹಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘ ಬಿಎಂಟಿಸಿ ಅಧ್ಯಕ್ಷ ಎಸ್. ರುದ್ರೇಶ್ (ಮೊ.ನಂ: 9449501386, 7022704236) ಅವರನ್ನು ಸಂಪರ್ಕಿಸಬಹುದು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ