NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕೇಂದ್ರ ಕಚೇರಿ, ವಿಭಾಗ ಕಚೇರಿ, ಘಟಕಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ನೌಕರರು ತಮ್ಮ ಕುಟುಂಬದವರನ್ನು ಕಳುಹಿಸುವ ಮೂಲಕ ಸರ್ಕಾರಕ್ಕೆ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತುಮಕೂರಿನಲ್ಲಿ ಇದೇ ಮೇ 19ರಂದು ನಡೆಯುವ ಸರ್ಕಾರದ ಸಾಧನ ಸಮಾವೇಶಕ್ಕೆ ನಿಮ್ಮ ಪತ್ನಿ/ ಪತಿ, ಮಗಳು/ ಮಕ್ಕಳನ್ನು ಕಳುಹಿಸಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವ ಮೂಲಕ ನಮ್ಮ ವೇತನ ಹೆಚ್ಚಳದಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಆಕ್ರೋಶ ಹೊರಹಾಕಿದೆ ಎಂದು ನೌಕರರು ಕರೆ ನೀಡುತ್ತಿದ್ದಾರೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕೇಂದ್ರ ಕಚೇರಿ, ವಿಭಾಗ ಕಚೇರಿ, ಘಟಕಗಳಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳು, ಸಿಬ್ಬಂದಿ, ನೌಕರರು ತಮ್ಮ ಕುಟುಂಬದವರನ್ನು ಕಳುಹಿಸುವ ಮೂಲಕ ಸರ್ಕಾರಕ್ಕೆ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.

ಇತ್ತ ಅಧಿಕಾರಿಗಳು ನಮಗೆ ಯಾರೂ ಆಹ್ವಾನ ನೀಡಿಲ್ಲ, ನಾವು ದೇವರ ಮಕ್ಕಳು ಮುಷ್ಕರದಲ್ಲಿ ಭಾಗಿಯಾಗಲು ಬರುವುದಿಲ್ಲ ಎಂಬ ಕಾಲ್ಪನಿಕ ಲೋಕದಲ್ಲೇ ಅಧಿಕಾರಿಗಳು ಹಾಗೂ ಕೇಂದ್ರ ಕಚೇರಿ ಸಿಬ್ಬಂದಿಗಳು ಇದ್ದೀರಿ. ಈಗ ಸಮಯ ಬಂದಿದೆ ಸ್ವಲ್ಪ ಜ್ಞಾನೋದಯವಾಗಿ ಸರ್ಕಾರಕ್ಕೆ ನಿಮ್ಮ ಬೇಡಿಕೆಯನ್ನು ಈ ಮೂಲಕ ಸಲ್ಲಿಸಲು ಮುಂದಾಗಿ ಎಂದು ನೌಕರರು ಕರೆ ನೀಡಿದ್ದಾರೆ.

ಹೌದು! ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಮಗೆ ಆಹ್ವಾನ ಇಲ್ಲ ಎಂಬ ಕಾರಣ ನೀಡದೆ ಮೇ 19ರಂದು ನಡೆಯುವ ಸಾಧನ ಸಮಾವೇಶಕ್ಕೆ ನಿಮ್ಮ ಪತ್ನಿ/ಪತಿ, ಮಗಳು/ಮಕ್ಕಳು ರವರನ್ನು ಕಳುಹಿಸಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸುವ ಮೂಲಕ ನಿಮ್ಮ ಆಕ್ರೋಶವನ್ನು ಹೊರಹಾಕಿ.

ನಿಮಗೆ ಇದಕ್ಕಿಂತ ಸದಾವಕಾಶ ಮತ್ತೊಮ್ಮೆ ಸಿಗುವುದಿಲ್ಲ. ಇಷ್ಟು ಮಾಡಲು ಸಾಧ್ಯವಿಲ್ಲದಿದ್ದರೆ ನಿಮ್ಮಂತಹ ಹೇಡಿಗಳು ಯಾರೂ ಇಲ್ಲ. ಸಾರಿಗೆ ನೌಕರರ ಶೋಷಣೆಗೆ ತಕ್ಕ ಪಾಠ ಕಲಿಸಲು ಸದಾವಕಾಶ. ಸದುಪಯೋಗಪಡಿಸಿಕೊಳ್ಳಿ. ಸಮಸ್ತ ಸಾರಿಗೆ ಕುಟುಂಬ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಶೇರ್‌ ಆಗುತ್ತಿದೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ