ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು/ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ ಅರ್ಜಿ ಹಾಕಿದ್ದು ಅದರ ವಿಚಾರಣೆ ನಾಳೆ ನಡೆಯಬೇಕಿತ್ತು ಆದರೆ, ಕೆಲ ಕಾರಣಗಳಿಂದ ಇದೇ ಜೂನ್ 9ಕ್ಕೆ ಕೋರ್ಟ್ ಹಾಲ್ಗೆ ಬರಲಿದೆ ಎಂದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ವಕೀಲ ಎಚ್.ಬಿ.ಶಿವರಾಜು ತಿಳಿಸಿದ್ದಾರೆ.
ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು 16ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ಈ ವೇಳೆ ರಾಜ್ಯ ಸರ್ಕಾರದ ಪರ ಹಾಗೂ ಸಾರಿಗೆ ಸಂಸ್ಥೆಯ ಪರ ವಕೀಲರು ವಕಾಲತ್ತು ಹಾಕಲು ಏಪ್ರಿಲ್ 7ರಂದು 2 ವಾರಗಳ ಕಾಲ ಸಮಯ ಕೇಳಿದ್ದರಿಂದ ನ್ಯಾಯಾಲಯವು ಅವರಿಗೆ ಅವಕಾಶ ಕೊಟ್ಟು ವಿಚಾರಣೆಯನ್ನು ಮುಂದೂಡಿತ್ತು. ಆದರೆ, ಈ ನಡುವೆ ನ್ಯಾಯಾಲಯದಿಂದ ಜನರೇಟರ್ ಆಗಿರುವ ದಿನಾಂಕದವರೆಗೆ ನೌಕರರ ಪರ ವಕೀಲರು ಕಾಯುವ ಅಗತ್ಯವಿಲ್ಲ ಎಂದು ಈ ಹಿಂದೆ ವಕೀಲರು ಹೇಳಿದ್ದರು.
ಅಂದರೆ ವೇತನ ಸೌಲಭ್ಯ ಸಂಬಂಧ ನೌಕರರ ಪರವಾಗಿ ಪ್ರಕರಣವನ್ನು ದಾಖಲು ಮಾಡಿರುವ ವಕೀಲ ಎಚ್.ಬಿ.ಶಿವರಾಜು ಅವರು ಪ್ರಕರಣದ ತುರ್ತು ವಿಚಾರಣೆಗಾಗಿ ಮೆಮೋ ಸಲ್ಲಿಸಿದ್ದೇ ಆದಲ್ಲಿ ಪ್ರಕರಣವನ್ನು ಈ ಎರಡು ವಾರಗಳ ನಡುವೆ ಯಾವಾಗಬೇಕಾದರೂ ನ್ಯಾಯಾಲಯ ಕೈಗೆತ್ತಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಿದ್ದರು.
ಅದರಂತೆ ಏ.22ರಂದು ಪ್ರಕರಣದ ವಿಚಾರಣೆಗೆ ಬಂದಿತ್ತು. ನೌಕರರ ಪರ ವಕೀಲರು ಪ್ರಕರಣವನ್ನು ತುರ್ತು ವಿಚಾರಣೆ ಮಾಡುವಂತೆ ಮತ್ತೆ ಮನವಿ ಮಾಡಿದ್ದರಿಂದ ಜೂ.4ರಂದು ಪ್ರಕರಣ ವಿಚಾರಣೆ ಮಾಡಲು ತಿಳಿಸಿದ್ದರು,ಆದರೆ ಹೊಸ ನ್ಯಾಯಮೂರ್ತಿಗಳು ಬಂದಿರುವುದರಿಂದ ಜೂ.9ರಂದು ವಿಚಾರಣೆಗೆ ಬರಲಿದೆ ಎಂದು ತಿಳಿಸಿದ್ದಾರೆ.
ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್ 10ರಂದು ಈ ಸಂಬಂಧ ಹೈ ಕೋರ್ಟ್ನಲ್ಲಿ ಶಿವರಾಜು ಹಾಗೂ ಅವರ ವಕೀಲರ ತಂಡ ಅರ್ಜಿ ಹಾಕಿದೆ. ಅರ್ಜಿಯನ್ನು ಮಾ.11ರಂದು ಮಾನ್ಯಮಾಡಿದ ಹೈ ಕೋರ್ಟ್ ಸಂಬಂಧಪಟ್ಟ ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತ್ತು. ಆ ವಿಚಾರಣೆ ಏ.7ರಂದು ನಡೆದಿದ್ದು, ನೌಕರರ ಪರವಾಗಿ ಶಿವರಾಜು ಹಾಗೂ ಕೆಲ ಹಿರಿಯ ವಕೀಲರು ವಾದ ಮಂಡಿಸಿದ್ದರು.
ಪ್ರಕರಣವೇನು?: ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರ ಸಹಿಯೊಂದಿಗೆ ಮಾ.10ರಂದು ಪಿಟಿಶನ್ ಫೈಲ್ ಮಾಡಿದ್ದಾರೆ.
ಇನ್ನು ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ಮಲತಾಯಿಯಂತೆ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಜತೆಗೆ ಕೆಲ ಸಂಘಟನೆಗಳ ಮುಖಂಡರು ವೈಯಕ್ತಿಕ ದ್ವೇಷದಿಂದ ಸರ್ಕಾರಕ್ಕೆ ಎಚ್ಚರಿಕೆ ಕೊಡದೆ ಮೀನಮೇಷ ಎಣಿಸುತ್ತಿದ್ದಾರೆ.
ಇತ್ತ ಸಾರಿಗೆ ನೌಕರರಿಗೆ ಕೊಡುವುದಕ್ಕೆ ಸರ್ಕಾರ ಈವರೆಗೂ ಮುಂದೆ ಬಂದಿಲ್ಲ. ಹೀಗಾಗಿ ನೌಕರರು ತಮ್ಮ ವೇತನ ಸೌಲಭ್ಯ ಪಡೆಯಲೂ ಇನ್ನೂ ಸಾಧ್ಯವಾಗಿಲ್ಲ. ಈ ಎಲ್ಲವನ್ನು ಗಮನಿಸಿರುವ ಶಿವರಾಜು ಅವರು ನೌಕರರಿಗೆ ವೇತನಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
Related

You Might Also Like
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...