KSRTC ನೌಕರರ ವೇತನ ಹೆಚ್ಚಳ ಸಂಬಂಧದ ಪ್ರಕರಣ: ಇನ್ನೂ ಏಕೆ Objection ಹಾಕಿಲ್ಲ- ಸಂಸ್ಥೆಯ ವಕೀಲರ ಪ್ರಶ್ನಿಸಿದ ನ್ಯಾಯಪೀಠ

- ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧದ ಈ ಪ್ರಕರಣವೇ ಬೇರೆ
- ಪಿಐಎಲ್ ಹಾಕಿರುವುದೇ ಬೇರೆ ಅದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದ ವಕೀಲರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2020 ಜನವರಿ 1ರಿಂದ ಹೆಚ್ಚಳವಾಗಿರುವ ಶೇ.15ರಷ್ಟು ವೇತನದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ವೇತನ ಹೆಚ್ಚಳವಾಗಬೇಕಿರುವ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ಇಂದು ಹೈ ಕೋರ್ಟ್ನ ಏಕಸದಸ್ಯ ನ್ಯಾಯಪೀಠದ ಮುಂದೆ ಬಂದಿತ್ತು.
ಈ ವೇಳೆ ಹೈ ಕೋರ್ಟ್ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯರೂರ ಅವರಿದ್ದ ಏಕಸದಸ್ಯ ನ್ಯಾಯಪೀಠ ಸಾರಿಗೆ ನಿಗಮದ ವಕೀಲರನ್ನು ಈ ಪ್ರಕರಣ ಸಂಬಂಧ ಆಕ್ಷೇಪಣೆ (Objection) ಸಲ್ಲಿಸಿದ್ದೀರಾ ಎಂದು ಕೇಳಿತು. ಅದಕ್ಕೆ ಇನ್ನು ಹಾಕಿಲ್ಲ ಎಂದು ಹೇಳಿದ್ದಕ್ಕೆ ಏಕೆ 5ತಿಂಗಳು ಕಳೆದಿದ್ದರೂ ಇನ್ನೂ ಹಾಕಿಲ್ಲ ಎಂದು ಸ್ವಲ್ಪ ಖಾರವಾಗಿಯೇ ಪ್ರಶ್ನಿಸಿತು.
ಆಗ ಇಲ್ಲ ನಿನ್ನೆ ಈ ಸಂಬಂಧ ಮತ್ತೊಂದು ಪ್ರಕರಣವಿದ್ದು ಅದು ನಾಳೆ ವಿಚಾರಣೆಗೆ ಬರಲಿದೆ ಎಂದು ಸಾರಿಗೆ ಸಂಸ್ಥೆಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಈ ವೇಳೆ ಆ ಪ್ರಕರಣ ಬೇರೆ ಈ ಪ್ರಕರಣ ಬೇರೆ ಅದು ಪಿಐಎಲ್ ಹಾಕಿರುವುದು ನಾವು ವೇತನ ಹೆಚ್ಚಳದ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳಕ್ಕೆ ಸಂಬಂಧಿಸಿದ ಅರ್ಜಿ ಹಾಕಿರುವುದು ಎಂದು ನೌಕರರ ಪರ ವಕೀಲರು ಹೇಳಿದರು.
ಅದಕ್ಕೆ ಆ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ ನೀವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ (Objection) ಇದ್ದರೆ ಹಾಕಿ ಎಂದು ಹೇಳಿ ಪ್ರಕರಣವನ್ನು ಮುಂದಿನವಾರಕ್ಕೆ ಕೈಗೆತ್ತಿಕೊಳ್ಳುವುದಾಗಿ ನ್ಯಾಯಪೀಠ ಹೇಳಿತು. ಈ ವೇಳೆ ನೌಕರರ ಪರ ವಕೀಲರಾದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ವಕೀಲ ಎಚ್.ಬಿ.ಶಿವರಾಜು ಅವರು ಇಲ್ಲ ನಾವು ಹೈದರಾಬಾದ್ನಲ್ಲಿ ಖಾಸಗಿ ಕಂಪನಿಯೊಂದರ ವಕೀಲರಾಗಿರುವುದರಿಂದ ನಮಗೆ ಕಾಲವಕಾಶಬೇಕು ಹಾಗಾಗಿ ಸೆ.3ರೊಳಗೆ ಹಾಕಿ ಎಂದು ಮನವಿ ಮಾಡಿದ್ದರಿಂದ ಸೆ.3ಕ್ಕೆ ಪ್ರಕರಣವನ್ನು ಮುಂದೂಡಿದ್ದಾರೆ.
ಇನ್ನು ಸಾರಿಗೆ ಸಂಸ್ಥೆಯ ವಕೀಲರು ಈ ಬಾರಿ ಡೇಟ್ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದರು ಆದರೆ, ಅದಕ್ಕೆ ಅವಕಾಶಕೊಡದೆ ನೌಕರರ ಪರ ವಕೀಲರು ಪ್ರಕರಣ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದ್ದರಿಂದ ವಿಚಾರಣೆ ನಡೆಯಿತು. ಈ ವೇಳೆ ಇದು ವೈಯಕ್ತಿಕ ಅರ್ಜಿಯಾಗಿದ್ದು, ಯಾವುದೇ ಸಂಘಟನೆಯೂ ಭಾಗಿಯಾಗಿಲ್ಲದ ಕಾರಣ ಇದನ್ನು ಪರಿಗಣಿಸಬಾರದು ಎಂದರು. ಅದಕ್ಕೆ ನೌಕರರ ಪರ ವಕೀಲರು ಇಲ್ಲ ಈ ಪ್ರಕರಣದಲ್ಲಿ ಸಂಸ್ಥೆಯ ನೌಕರರು ಇದ್ದು ಅವರು ಎಂಡಿಯವರಿಗೆ ಮನವಿ ಪತ್ರ ನೀಡಿ ನಮಗೆ ವೇತನ ಹೆಚ್ಚಳಮಾಡಿಕೊಡಿ ಎಂದು ಕೋರಿದ್ದಾರೆ. ಹೀಗಾಗಿ ಇದನ್ನು ಮಾನ್ಯ ಮಾಡಬೇಕು ಎಂದು ಕೋರಿದರು.
ಇನ್ನು ಈ ಪ್ರಕರಣ ಜೂನ್ 25ರಂದು ಪ್ರಕರಣ ನಡೆದಿತ್ತು. ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಈ ವೇಳೆ ಯಾವುದಾದರೂ ನೌಕರರ ಪರ ಸಂಘಟನೆಗಳು ಸಂಸ್ಥೆಯ ಎಂಡಿ ಅವರಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಸಂಬಂಧ ಮನವಿ ಮಾಡಿರುವ ಪ್ರತಿಯನ್ನು ಲಗತ್ತಿಸಲು ಕೇಳಿ ಜುಲೈ 2ಕ್ಕೆ ನ್ಯಾಯಪೀಠ ಮುಂದೂಡಿತ್ತು.
ಆ ಬಳಿಕ ಸಮಯದ ಅಭಾವದಿಂದ ಜುಲೈ 16ಕ್ಕೆ ಮುಂದೂಡಿತ್ತು. ಮತ್ತೆ ಇಂದಿಗೆ ಅಂದರೆ ಆ.6ಕ್ಕೆ ಮುಂದೂಡಿತ್ತು. ಇಂದು ಸಂಸ್ಥೆಯ ಎಂಡಿ ಅವರಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಸಂಬಂಧ ಮನವಿ ಮಾಡಿರುವ ಪ್ರತಿಯನ್ನು ಲಗತ್ತಿಸಲು ಕೇಳಿರುವುದರ ಸಂಬಂಧ ಎಲ್ಲ ಅರ್ಜಿಗಳನ್ನು ಕ್ರೂಢೀಕರಿಸಿಕೊಂಡಿದ್ದು, ಅಲ್ಲದೆ ಸರ್ಕಾರ ಪ್ರತಿ 4ವರ್ಷಕ್ಕೊಮ್ಮೆ ನೌಕರರ ವೇತನ ಹೆಚ್ಚಳ ಮಾಡಿರುವ ಪ್ರತಿಗಳನ್ನು ಸಂಸ್ಥೆಯಿಂದ ಕಲೆಹಾಕಿದ್ದು ಅದನ್ನು ಸೆ.3ರಂದು ಸಲ್ಲಿಸಲಾಗುವುದು ಎಂದು ನೌಕರರ ಪರ ವಕೀಲರಾದ ಎಚ್.ಬಿ.ಶಿವರಾಜು ವಿಜಯಪಥಕ್ಕೆ ತಿಳಿಸಿದ್ದಾರೆ.
ಪ್ರಕರಣವೇನು?: ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು19ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್ 10ರಂದು ಹೈ ಕೋರ್ಟ್ನಲ್ಲಿ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ, ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...