NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಪರಿಷ್ಕರಣೆ ನನ್ನ ಹಂತ ದಾಟಿ ಸಿಎಂ ಬಳಿ ಹೋಗಿದೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ ನನ್ನ ಹಂತ ದಾಟಿ ಮುಖ್ಯಮಂತ್ರಿಗಳ ಬಳಿ ಹೋಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಅವರ ನಾಯಕತ್ವದಲ್ಲಿ ಸಭೆಯಾಗಿ ನಿರ್ಧಾರವಾಗಬೇಕು. ಈ ವಿಚಾರದಲ್ಲಿ ನಾನು ವೀಕ್ ಆಗಿಲ್ಲ, ಸ್ಟ್ರಾಂಗ್ ಆಗಿದ್ದೇನೆ ಎಂದು ತಿಳಿಸಿದರು.

ಇನ್ನು ನಾವು ಅಧಿಕಾರದಲ್ಲಿದ್ದಾಗ 2016ರಲ್ಲಿ ವೇತನ ಪರಿಷ್ಕರಣೆ ಮಾಡಲಾಯಿತು. ನಂತರ 2020ರಲ್ಲಿ ಮಾಡಬೇಕಿತ್ತು. ಕೋವಿಡ್ ಕಾರಣದಿಂದ ಹಿಂದಿನ ಸರ್ಕಾರದವರು 2023ರಲ್ಲಿ ಹೆಚ್ಚಳ ಮಾಡಿದರು.

ಅದನ್ನು 2020 ಜನವರಿಯಿಂದ ಅನ್ವಯವಾಗುವಂತೆ ಆದೇಶ ಮಾಡಬೇಕಿತ್ತು. ಆದರೆ ಆದೇಶದಲ್ಲಿ 2023ರಿಂದ ಅನುಷ್ಠಾನ ಎಂದು ಮಾಡಿರುವುದು ಇದೀಗ ಸಮಸ್ಯೆಯಾಗಿದೆ ಎಂದು ಹೇಳಿದರು.

ಅಲ್ಲದೆ ಮುಖ್ಯಮಂತ್ರಿಗಳೇ ಹಣಕಾಸು ಸಚಿವರಾಗಿರುವ ಕಾರಣ ಇದನ್ನು ಅವರೇ ಬಗೆಹರಿಸಬೇಕಿದೆ. ಹಿಂದಿನ ಸರ್ಕಾರದ ಆದೇಶದಲ್ಲಿನ ನ್ಯೂನತೆಯಿಂದಾಗಿ ಈ ಗೊಂದಲ ಸೃಷ್ಟಿಯಾಗಿದೆ‌ ಎಂದರು.

ಇನ್ನು ಹಿಂದಿನ ಸರ್ಕಾರ ಸಾರಿಗೆ ಸಂಸ್ಥೆಗಳಿಗೆ ನೌಕರರ ನೇಮಕಾತಿ ಮಾಡಿಕೊಳ್ಳದ ಪರಿಣಾಮ ಹೊರಗುತ್ತಿಗೆ ಜಾಸ್ತಿಯಾಗಿದೆ. 2016ರಿಂದ 2023ರವರೆಗೆ ನೇಮಕಾತಿಯಾಗಲಿಲ್ಲ. ಹೀಗಾಗಿ ಚಾಲಕರು, ಮೆಕ್ಯಾನಿಕ್‌ಗಳನ್ನು ಹೊರಗುತ್ತಿಗೆ ಮೇಲೆ ಪಡೆಯಲಾಗಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌ ಮೊದಲ ದಿನದ ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿ, ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದುವರಿಕೆ KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ