NEWSನಮ್ಮಜಿಲ್ಲೆನಮ್ಮರಾಜ್ಯ

KSRTC:2021ರ ಮುಷ್ಕರದಲ್ಲಿ ವಜಾಗೊಂಡವರ ಮರು ನೇಮಕಕ್ಕೆ ಆಗ್ರಹಿಸಿ ಕೇಂದ್ರ ಕಚೇರಿ ಮುಂದೆ ಜಮಾಯಿಸಿದ 100ಕ್ಕೂ ಹೆಚ್ಚು ನೌಕರರ ಕುಟುಂಬಸ್ಥರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನಿಗಮಗಳಲ್ಲಿ 2021ರ ಏಪ್ರಿಲ್‌ನಲ್ಲಿ ನಡೆದ ಮುಷ್ಕರದ ವೇಳೆ ವಿನಾಕಾರಣ ಆರೋಪ ಹೊರಿಸಿ ಕೆಲಸದಿಂದ ವಜಾ ಮಾಡಿರುವ ನೌಕರರನ್ನು ಈವರೆಗೂ ತೆಗೆದುಕೊಳ್ಳದಿರುವುದರ ವಿರುದ್ಧ ನೌಕರರು ಕುಟುಂಬದವರು ಸಿಡಿದೆದ್ದಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು (ಫೆ.26ರ ಸೋಮವಾರ) ಕೆಎಸ್‌ಅರ್‌ಟಿಸಿ ಬೆಂಗಳೂರು ಕೇಂದ್ರ ಕಚೇರಿ ಮುಂದೆ 100ಕ್ಕೂ ಹೆಚ್ಚು ನೌಕರರ ಕುಟುಂಬ ಸದಸ್ಯರು ಜಮಾಯಿಸಿದ್ದು ವಜಾಗೊಳಿಸಿರುವ ನೌಕರರನ್ನು ಮರಳಿ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಇನ್ನು ವಜಾಗೊಂಡ ನೌಕರರ ಕುಟುಂಬಸ್ಥರು ಅಲ್ಲದೇ ಹಾಲಿ ಕರ್ತವ್ಯದಲ್ಲಿರುವ ನೌಕರರ ಕುಟುಂಬಸ್ಥರು ಕೂಡ ಜಮಾಯಿಸಿದ್ದು, ಸರ್ಕಾರವೇ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು, ಈ ಮೂಲಕ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಸಾರಿಗೆ ನೌಕರರ ಕುಟುಂಬದವರು ಕೇಂದ್ರ ಕಚೇರಿ ಮುಂದೆ ಜಾಮಯಿಸುತ್ತಿದ್ದಂತೆ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ ಕೊಂಚ ಆತಂಕ ಮನೆಮಾಡಿತ್ತು. ಏಕೆ ಇಷ್ಟೊಂದು ಜನ ಇಲ್ಲಿ ಬಂದಿದ್ದಾರೆ ಎಂದು ಗಾಬರಿಯಿಂದ ಹಿರಿಯ ಅಧಿಕಾರಗಳಿಗೆ ತಡಬಡಾಯಿಸಿಕೊಂಡೆ ಭಯದಲ್ಲಿ ಫೊನ್‌ ಕರೆ ಮಾಡಿ ವಿಷಯ ತಿಳಿದ್ದರು.

ಕೇಂದ್ರ ಕಚೇರಿ ಮುಂದೆ ಜಮಾಯಿಸಿರುವ ಮಂದಿ ನೀವು ಬರುವ ಮಾರ್ಚ್‌ ತಿಂಗಳ 4ರೊಳಗೆ ವಜಾಗೊಳಿಸಿರುವ ನೌಕರರನ್ನು ಮರು ನೇಮಕ ಮಾಡಿಕೊಳ್ಳಬೇಕು. ಮತ್ತೆ ಚುನಾವಣೆ ಸಮಯದಲ್ಲಿ ತಮ್ಮ ಪ್ರನಾಳಿಕೆಯಲ್ಲಿ ಕೊಟ್ಟಿರುವ ಭರವಸೆಯನ್ನು ಈಡೇರಿಸಬೇಕು. ನೌಕರರಿಗೆ ಡಿಪೋ ಮಟ್ಟದಲ್ಲಿ ಆಗುತ್ತಿರುವ ಕಿರುಕುಳವನ್ನು ತಪ್ಪಿಸಬೇಕು.

ಇನ್ನು ಇವುಗಳ ಜತೆಗೆ ಮತ್ತೊಂದು ಪ್ರಮುಖವಾದ 2020ರಲ್ಲಿ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಕೋಡಲೇ ಅದೂ ಕೂಡ ಒಂದೇ ಕಂತಿನಲ್ಲಿ ಪಾವತಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾವು ಹೋರಾಟ ಮಾಡಲು ಇಂದು ಇಲ್ಲಿಗೆ ಬಂದಿಲ್ಲ ಬೇಡಿಕೆಗಳನ್ನು ಈಡೇರಿಸಿ ಎಂದು ಕೇಳಲು ಬಂದಿದ್ದೇವೆ. ಚಿಕ್ಕಚಿಕ್ಕ ಮಕ್ಕಳು ಮತ್ತು ವಯಸ್ಸಾದ ಅಮ್ಮದಿರು ಕೂಡ ಇಂದು ಕೇಂದ್ರ ಕಚೇರಿ ಮುಂದೆ ಜಮಾಯಿಸಿದ್ದು ತಮ್ಮ ಮನೆಯ ಮನೆಯವರಿಗಾದ ಸಮಸ್ಯೆಗಳನ್ನು ನಿವಾರಿಸಿ ಎಂದು ಕೇಳುತ್ತಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ