KSRTC: ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಚಾಲಕರ ಕಾಯಂ ಮಾಡಿಸುವುದಾಗಿ ನಂಬಿಸಿ ಲಕ್ಷ ರೂ.ಲಪಟಾಯಿಸಿದ ವಂಚಕ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಚಾಲಕರನ್ನು ಕಾಯಂ (Permanent) ಮಾಡಿಸುತ್ತೇನೆ ಎಂದು ವ್ಯಕ್ತಿಯೊಬ್ಬ 1ಲಕ್ಷ ರೂಪಾಯಿವರೆಗೂ ಫೋನ್ ಪೇ ಮಾಡಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ರೀತಿ ನಂಬಿಸಿ ಹಂತಹಂತವಾಗಿ ಒಂದು ಲಕ್ಷ ರೂಪಾಯಿ ವರೆಗೂ ಫೋನ್ ಫೇ ಮಾಡಿಸಿಕೊಂಡಿರುವ ಈತ ಕೆಎಸ್ಆರ್ಟಿಸಿ ನಿಗಮದ ನೌಕರ ಎಂದು ಹೇಳಲಾಗುತ್ತಿದೆ. ಆದರೆ, ಹಣ ಕೊಟ್ಟಿರುವವರು ಈತನ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ಇನ್ನು ಈತ ಸಾರಿಗೆ ಸಂಸ್ಥೆಯ ಡ್ರೈವರ್ಗಳನ್ನು ಯಾವುದೇ ಚಾಲನಾ ಪರೀಕ್ಷೆ ಮಾಡದೆ ಹಾಗೂ ಯಾವುದೇ ನಿಯಮಗಳು ಇಲ್ಲದಂತೆ ಸಾರಿಗೆ ಸಂಸ್ಥೆಯಲ್ಲಿ ಕಾಯಂ (Permanent) ಮಾಡಿಸುತ್ತೇನೆ ಎಂದು ಕಳೆದ 2024ರ ಸೆಪ್ಟೆಂಬರ್ನಿಂದಲೂ ಹಂತಹಂತವಾಗಿ 1 ಲಕ್ಷ ರೂಪಾಯಿವರೆಗೆ ವಸೂಲಿ ಮಾಡಿದ್ದು, ಈತನ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ.
ಅಲ್ಲದೆ ಈ ರೀತಿ ಸಂಸ್ಥೆಗೆ ಕೆಟ್ಟ ಹೆಸರು ಬರುವಂತೆ ಮಾಡುತ್ತಿರುವ ಈ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಸಂಸ್ಥೆಗೆ ಯಾವುದೇ ರೀತಿಯ ಅಗೌರವ ಬರದಂತೆ ನೋಡಿಕೊಳ್ಳಬೇಕಿರುವುದು ಸಂಬಂಧಪಟ್ಟ ಕಾನೂನು ವಿಭಾಗದ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ನೌಕರರು ಒತ್ತಾಯಿಸಿದ್ದಾರೆ.
ಇನ್ನು ಒಂದು ಮೂಲಗಳ ಪ್ರಕಾರ ಈ ವ್ಯಕ್ತಿಯು ಸಾರಿಗೆ ಸಂಸ್ಥೆಯಲ್ಲಿಯೇ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಇದೆ. ಈತ ರಾಮನಗರ, ಮಂಡ್ಯ, ಬೆಂಗಳೂರು ಕೇಂದ್ರೀಯ ವಿಭಾಗ, ಚಿಕ್ಕಬಳ್ಳಾಪುರ, ತುಮಕೂರು ಕಡೆಯಲ್ಲೆಲ್ಲ ತನ್ನ ಈ ರೀತಿ ಜಾಲವನ್ನು ಹರಡಿದ್ದು ಹಣ ಲಪಟಾಯಿಸಿ ವಂಚಿಸುವುದೇ ಈತನ ಮುಖ್ಯ ಕಾಯಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಲಂಚದ ಹಣವನ್ನು ಫೋನ್ ಪೇ ಮೂಲಕ ತೆಗೆದುಕೊಂಡಿರುವ ಹಾಗೂ ಹಣ ಕೊಟ್ಟಿರುವ ಬಗ್ಗೆ ದಾಖಲೆ ಸಹಿತ ಮತ್ತು ಆಡಿಯೋ ಕೂಡ ಇದೆ. ಈತ ಹಣವನ್ನು ಯಾವ ರೀತಿ ಕಬಳಿಸಲು ಸಂಚು ರೂಪಿಸಿದ್ದಾನೆ ಎಂಬುದರ ಬಗ್ಗೆ ಆಡಿಯೋ ಇದ್ದು, ನಾಗರಾಜು ಎಂಬ ಹೆಸರಿನ ಬ್ಯಾಂಕ್ ಖಾತೆಗೆ ಹಣವನ್ನು ಫೋನ್ ಪೇ ಮಾಡಿಸಿಕೊಂಡಿದ್ದಾನೆ.
ಈ ನಾಗರಾಜು ಎಂಬಾತ ಯಾರು? ಈತ ಸಾರಿಗೆಯ ಯಾವ ಡಿಪೋದಲ್ಲಿ ಕೆಲಸ ಮಾಡುತ್ತಿದ್ದಾನೆ? ಈತನ ಹಿನ್ನೆಲೆ ಏನು? ಸಾರಿಗೆ ಸಂಸ್ಥೆಯ ಅಧಿಕಾರಿಗಳು ಈತನೊಂದಿಗೆ ಕೈ ಜೋಡಿಸಿದ್ದಾರೆಯೇ? ಇಲ್ಲ ಈತನೊಬ್ಬನೆ ಈರೀತಿ ಮಾಡುತ್ತಿದ್ದಾನೆಯೇ ಎಂಬ ಬಗ್ಗೆ ಸಂಸ್ಥೆಯ ಹಾಗೂ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...