Breaking NewsCRIMENEWSನಮ್ಮರಾಜ್ಯ

KSRTC: ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಚಾಲಕರ ಕಾಯಂ ಮಾಡಿಸುವುದಾಗಿ ನಂಬಿಸಿ ಲಕ್ಷ ರೂ.ಲಪಟಾಯಿಸಿದ ವಂಚಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಚಾಲಕರನ್ನು ಕಾಯಂ (Permanent) ಮಾಡಿಸುತ್ತೇನೆ ಎಂದು ವ್ಯಕ್ತಿಯೊಬ್ಬ 1ಲಕ್ಷ ರೂಪಾಯಿವರೆಗೂ ಫೋನ್‌ ಪೇ ಮಾಡಿಸಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ರೀತಿ ನಂಬಿಸಿ ಹಂತಹಂತವಾಗಿ ಒಂದು ಲಕ್ಷ ರೂಪಾಯಿ ವರೆಗೂ ಫೋನ್‌ ಫೇ ಮಾಡಿಸಿಕೊಂಡಿರುವ ಈತ ಕೆಎಸ್‌ಆರ್‌ಟಿಸಿ ನಿಗಮದ ನೌಕರ ಎಂದು ಹೇಳಲಾಗುತ್ತಿದೆ. ಆದರೆ, ಹಣ ಕೊಟ್ಟಿರುವವರು ಈತನ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ಇನ್ನು ಈತ ಸಾರಿಗೆ ಸಂಸ್ಥೆಯ ಡ್ರೈವರ್‌ಗಳನ್ನು ಯಾವುದೇ ಚಾಲನಾ ಪರೀಕ್ಷೆ ಮಾಡದೆ ಹಾಗೂ ಯಾವುದೇ ನಿಯಮಗಳು ಇಲ್ಲದಂತೆ ಸಾರಿಗೆ ಸಂಸ್ಥೆಯಲ್ಲಿ ಕಾಯಂ (Permanent) ಮಾಡಿಸುತ್ತೇನೆ ಎಂದು ಕಳೆದ 2024ರ ಸೆಪ್ಟೆಂಬರ್‌ನಿಂದಲೂ ಹಂತಹಂತವಾಗಿ 1 ಲಕ್ಷ ರೂಪಾಯಿವರೆಗೆ ವಸೂಲಿ ಮಾಡಿದ್ದು, ಈತನ ಹಿಂದೆ ಯಾರೆಲ್ಲ ಇದ್ದಾರೆ ಎಂಬುದರ ಬಗ್ಗೆ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ.

ಅಲ್ಲದೆ ಈ ರೀತಿ ಸಂಸ್ಥೆಗೆ ಕೆಟ್ಟ ಹೆಸರು ಬರುವಂತೆ ಮಾಡುತ್ತಿರುವ ಈ ಆರೋಪಿಯ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿ ಸಂಸ್ಥೆಗೆ ಯಾವುದೇ ರೀತಿಯ ಅಗೌರವ ಬರದಂತೆ ನೋಡಿಕೊಳ್ಳಬೇಕಿರುವುದು ಸಂಬಂಧಪಟ್ಟ ಕಾನೂನು ವಿಭಾಗದ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ನೌಕರರು ಒತ್ತಾಯಿಸಿದ್ದಾರೆ.

ಇನ್ನು ಒಂದು ಮೂಲಗಳ ಪ್ರಕಾರ ಈ ವ್ಯಕ್ತಿಯು ಸಾರಿಗೆ ಸಂಸ್ಥೆಯಲ್ಲಿಯೇ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಇದೆ. ಈತ ರಾಮನಗರ, ಮಂಡ್ಯ, ಬೆಂಗಳೂರು ಕೇಂದ್ರೀಯ ವಿಭಾಗ, ಚಿಕ್ಕಬಳ್ಳಾಪುರ, ತುಮಕೂರು ಕಡೆಯಲ್ಲೆಲ್ಲ ತನ್ನ ಈ ರೀತಿ ಜಾಲವನ್ನು ಹರಡಿದ್ದು ಹಣ ಲಪಟಾಯಿಸಿ ವಂಚಿಸುವುದೇ ಈತನ ಮುಖ್ಯ ಕಾಯಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಲಂಚದ ಹಣವನ್ನು ಫೋನ್‌ ಪೇ ಮೂಲಕ ತೆಗೆದುಕೊಂಡಿರುವ ಹಾಗೂ ಹಣ ಕೊಟ್ಟಿರುವ ಬಗ್ಗೆ ದಾಖಲೆ ಸಹಿತ ಮತ್ತು ಆಡಿಯೋ ಕೂಡ ಇದೆ. ಈತ ಹಣವನ್ನು ಯಾವ ರೀತಿ ಕಬಳಿಸಲು ಸಂಚು ರೂಪಿಸಿದ್ದಾನೆ ಎಂಬುದರ ಬಗ್ಗೆ ಆಡಿಯೋ ಇದ್ದು, ನಾಗರಾಜು ಎಂಬ ಹೆಸರಿನ ಬ್ಯಾಂಕ್‌ ಖಾತೆಗೆ ಹಣವನ್ನು ಫೋನ್‌ ಪೇ ಮಾಡಿಸಿಕೊಂಡಿದ್ದಾನೆ.

ಈ ನಾಗರಾಜು ಎಂಬಾತ ಯಾರು? ಈತ ಸಾರಿಗೆಯ ಯಾವ ಡಿಪೋದಲ್ಲಿ ಕೆಲಸ ಮಾಡುತ್ತಿದ್ದಾನೆ? ಈತನ ಹಿನ್ನೆಲೆ ಏನು? ಸಾರಿಗೆ ಸಂಸ್ಥೆಯ ಅಧಿಕಾರಿಗಳು ಈತನೊಂದಿಗೆ ಕೈ ಜೋಡಿಸಿದ್ದಾರೆಯೇ? ಇಲ್ಲ ಈತನೊಬ್ಬನೆ ಈರೀತಿ ಮಾಡುತ್ತಿದ್ದಾನೆಯೇ ಎಂಬ ಬಗ್ಗೆ ಸಂಸ್ಥೆಯ ಹಾಗೂ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.

Deva
the authorDeva

Leave a Reply

error: Content is protected !!
Latest news
ಮಾತುಕತೆ ಯಶಸ್ವಿ: ಆರ್‌ಟಿಸಿ ಮುಷ್ಕರ ಅಂತ್ಯ-ಇಂದಿನಿಂದ ಬಸ್ ಸೇವೆ ಪುನಾರಂಭ ಏ.27ರಂದು ಪಿಎಫ್ ಕಚೇರಿ ಮುಂದೆ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ : ನಂಜುಂಡೇಗೌಡ BMS ಸಂಘಟನೆಯ ಹೋರಾಟ: ನೌಕರರ ಧ್ವನಿಗೆ ಸ್ಪಂದಿಸಿದ ಸರ್ಕಾರ- ಸೂಕ್ತ ವ್ಯವಸ್ಥೆ ಮಾಡದೆ ಬಿಟ್ಟಿ ಸಲಹೆ ಕೊಟ್ಟ ಎಂಡಿ ಅಕ್ರಮ... NWKRTC: ಬ್ಯಾಡಗಿ ಬಸ್‌ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಧ್ಯೆ ಸಿಲುಕಿದ ಕಾಲೇಜು ವಿದ್ಯಾರ್ಥಿ- ಚಿಂತಾಜನಕ ಸ್ಥಿತಿ ಸಾರಿಗೆ ನೌಕರರ ಮುಷ್ಕರ: ಆತ್ಮಹತ್ಯೆಗೆ ಯತ್ನಿಸಿದ ನರಸಂಪೇಟೆ ಡಿಪೋ ಚಾಲಕ ಶಂಕರ್ ಗೌಡ್ ಚಿಕಿತ್ಸೆ ಫಲಿಸದೆ ಮೃತ ಬೇಡಿಕೆ ಈಡೇರಿಸದ ಸರ್ಕಾರ: ಸಾರಿಗೆ ನೌಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ- ಸಾವು ಬದುಕಿನ ನಡುವೆ ಹೋರಾಟ KSRTC ನೌಕರರ ಏಪ್ರಿಲ್‌ ತಿಂಗಳ ವೇತನ ಏ.30ರಂದೆ ಪಾವತಿಸಲು ಎಂಡಿ ಆದೇಶ ಎಸ್‌ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲ ಅಂತ ಅಂಧ ವಿದ್ಯಾರ್ಥಿನಿಯ ಫೇಲ್ ಮಾಡಿದ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ - ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ SSLC ಪರೀಕ್ಷಾ ಫಲಿತಾಂಶ ಅಧಿಕೃತ ಪ್ರಕಟ: ಶೇ.94.1 ತೇರ್ಗಡೆ ಹುಡುಗಿಯರೇ ಈ ಬಾರಿಯೂ ಮೇಲುಗೈ