KSRTC ಮೈಸೂರು: ಸರಿಸಮಾನ ವೇತನ ಕೊಡಿ- ಎಂಡಿಗೆ ಮನವಿ ಮಾಡಿದ ಸಂಸ್ಥೆಯ ಅಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು

- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳಿಂದ ಸನ್ಮಾನ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್ಪಾಷ ಅವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಸನ್ಮಾನಿಸಿ, ನೌಕರರ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಬೇಕು ಎಂದು ಮನವಿ ಮಾಡಿದರು.
KSRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸಾಂಸ್ಕೃತಿಕ ನಗರಿ ಮೈಸೂರಿಗೆ ಮೊದಲ ಬಾರಿಗೆ ಆಗಮಿಸಿದ ಅಕ್ರಮ್ ಪಾಷ ಅವರನ್ನು ಶನಿವಾರ ಮೈಸೂರಿನಲ್ಲಿರುವ ಸಂಸ್ಥೆಯ ಅತಿಥಿ ಗೃಹದಲ್ಲಿ ಕೂಟದ ರಾಜ್ಯ ಗೌರವಾಧ್ಯಕ್ಷ ಬಿ.ಎಸ್. ಸುರೇಶ್, ಸಿ.ಡಿ.ವಿಶ್ವನಾಥ್ ಹಾಗೂ ಪದಾಧಿಕಾರಿಗಳು ಭೇಟಿ ಮಾಡಿ ಗೌರವ ಸಲ್ಲಿಸಿದರು.
ಬಳಿಕ ಸಂಸ್ಥೆಯಲ್ಲಿ ಇಂದು ನೌಕರರು ಪಡುತ್ತಿರುವ ಪರಿಶ್ರಮ ಹಾಗೂ ಪರಿಸ್ಥಿತಿಯ ಬಗ್ಗೆ ಎಂಡಿ ಅವರ ಗಮನಕ್ಕೆ ತಂದರು. ಅಲ್ಲದೆ ಶೀಘ್ರದಲ್ಲೇ ನೌಕರರಿಗೆ ಸಿಗಬೇಕಿರುವ ವೇತನ ಸೇರಿದಂತೆ ಇತರೆ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರದ ಜತೆ ಮಾತನಾಡಬೇಕು ಎಂದು ಒತ್ತಾಯಿಸಿದರು.
ಈ ಸಮಯದಲ್ಲಿ ಮುಖ್ಯ ಯಾಂತ್ರಿಕ ಅಭಿಯಂತರ ಕೆ.ಎಚ್.ಶ್ರೀನಿವಾಸ್ ಹಾಗೂ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಗೌರವಾಂಬಾ, ಮೈಸೂರು ನಗರ ಸಾರಿಗೆ ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿ ಎಚ್.ಟಿ.ವೀರೇಶ್, ಗ್ರಾಮಾಂತರ ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿ ಬಿ.ಶ್ರೀನಿವಾಸ್ ಹಾಗೂ ಮೈಸೂರು ನಗರ ಹಾಗೂ ಗ್ರಾಮಾಂತರ ವಿಭಾಗದ ವಿಭಾಗಿಯ ಭದ್ರತಾ ಹಾಗೂ ಜಾಗೃತ ಅಧಿಕಾರಿಗಳಾದ ಎನ್.ಎಸ್.ಶಿವರಾಜೇಗೌಡ, ಎಂ.ಪಿ.ರಘು ಹಾಗೂ ಎರಡು ವಿಭಾಗದ ಅಧಿಕಾರಿಗಳು ಇದೇ ಒತ್ತಾಯವನ್ನು ಮಾಡಿದರು.
ಅದರಲ್ಲಿ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಪ್ರಮುಖವಾಗಿ ನಮ್ಮ ಸಾರಿಗೆ ಸಂಸ್ಥೆಯ ನೌಕರರು ಹಗಲಿರುಳು ಎನ್ನದೆ ಶ್ರಮಪಟ್ಟು ಯಶಸ್ವಿಗೊಳಿಸಿದ್ದಾರೆ. ಜತೆಗೆ ನಮ್ಮ ನೌಕರರ ಶ್ರಮಕ್ಕೆ ಯಾವುದೇ ಸರ್ಕಾರಿ ಅರೆ ಸರ್ಕಾರಿ ನೌಕರರ ಶ್ರಮಕ್ಕೆ ಹೋಲಿಸುವ ವಿಚಾರ ಹೊಂದಿಲ್ಲ. ಅತಿ ಹೆಚ್ಚು ಶ್ರಮವಹಿಸುವ ನೌಕರರು ನಮ್ಮ ಸಾರಿಗೆ ಸಂಸ್ಥೆಯ ನೌಕರರು ಅವರಿಗೆ ಒಂದು ಶಾಶ್ವತ ಪರಿಹಾರ ಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಮನವಿ ಮಾಡಿದರು.
ಇನ್ನು ಸರ್ಕಾರಿ ನೌಕರರಿಗಿಂತ ಅತಿ ಕಡಿಮೆ ಅಂದರೆ ಶೇ.40 ರಿಂದ ಶೇ.55ವರೆಗೆ ಕಡಿಮೆ ವೇತನ ತೆಗೆದುಕೊಳ್ಳುತ್ತಿದ್ದೇವೆ. ಹೀಗಾಗಿ ಮತ್ತೆ ನಾವು ನಾಲ್ಕು ವರ್ಷಕ್ಕೊಮ್ಮೆ ಬೀದಿಯಲ್ಲಿ ಕುಳಿತು ಹೋರಾಟ ಮಾಡಿ ಅತಿ ಕಡಿಮೆ ವೇತನವನ್ನು ಪಡೆಯುವ ಪದ್ಧತಿಯನ್ನು ಒಪ್ಪುವುದಿಲ್ಲ. ಇದನ್ನು ಕೊನೆಗಾಣಿಸಿ ಸಂಸ್ಥೆಯ ಅಧಿಕಾರಿಗಳು/ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ಕೊಡಬೇಕು ಎಂದರು.
ಒಂದು ಶಾಶ್ವತ ಪರಿಹಾರ ನೀಡಿ ಹಾಗೂ ನೌಕರರ ವೇತನ ವಿಚಾರ ಡಿಎ ಮತ್ತು ಬಿಡಿಎ ಹಾಗೂ ಕಳೆದ 2020ರ ಜನವರಿ 1ರಿಂದ ಅನ್ವಯಾಗುವಂತೆ ಹೆಚ್ಚಳವಾಗಿರುವ ವೇತನದ 38 ತಿಂಗಳು ಹಿಂಬಾಕಿ ಹಾಗೂ 2024 ಆರ್ಥಿಕ ವರ್ಷದ 18 ತಿಂಗಳು ಹಿಂಬಾಕಿ ಕೊಡಬೇಕು ಹಾಗೂ ಖಾಸಗಿಕರಣ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಇನ್ನು 2021ರ ಏಪ್ರಿಲ್ 7ರಿಂದ 21ರವರೆಗೆ 14 ದಿನಗಳ ಕಾಲ ನಡೆದ ಮುಷ್ಕರದ ವೇಳೆ ಆಗಿರುವ ಶಿಸ್ತು ಪ್ರಕರಣಗಳನ್ನು ಕೈ ಬಿಟ್ಟು ಎಲ್ಲ ನೌಕರರಿಗೂ ಡ್ಯೂಟಿ ಕೊಡುವ ಜತೆಗೆ ಸರ್ಕಾರದ ಸೌಲಭ್ಯಗಳನ್ನು ಕೊಡಬೇಕು ಎಂದು ಮನವಿ ಮಾಡಿದರು.
ನೀವು ಕಾರ್ಮಿಕ ಆಯುಕ್ತರಾಗಿ ಕಾರ್ಯನಿರ್ವಹಿಸಿ ಬಂದಿದ್ದೀರಿ ಹೀಗಾಗಿ ನಮ್ಮ ಸಾರಿಗೆ ನೌಕರರ ಬಗ್ಗೆ ಹೆಚ್ಚಿಗೆ ವಿವರಿಸಿ ಹೇಳುವ ಅಗತ್ಯವಿಲ್ಲ ಕಾರಣ ಎಲ್ಲ ನಿಮಗೆ ಗೊತ್ತಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಲ್ಲಿ ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ವಿವರಿಸಿದರು. ಜತೆಗೆ ಕಾಂಗ್ರೆಸ್ ಚುನಾವಣೆ ವೇಳೆ ಕೊಟ್ಟಿರುವ ಭರವಸೆಯಂತೆ ಸರಿಸಮಾನ ವೇತನ ಕೊಡುವುದಕ್ಕೆ ತಾವು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ವಿನಂತಿಸಿದರು.
ಇನ್ನು ವಿಶೇಷ ಎಂದರೆ ಮೈಸೂರಿನಲ್ಲೂ ಅಧಿಕಾರಿಗಳು ಸರಿ ಸಮಾನ ವೇತನ ಮಾಡುವ ಬಗ್ಗೆ ಎಂಡಿ ಅವರಲ್ಲಿ ಮನವಿ ಮಾಡಿರುವುದು ಒಂದು ಧನಾತ್ಮಕ ಬೆಳವಣಿಗೆಯಾಗಿದೆ. ಇದನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು – ನೌಕರರು ಬೇರೆ ಎಂಬ ಮಹಾಗೋಡೆ ಕುಸಿದುಬಿದ್ದು ನಾವೆಲ್ಲರೂ ಒಂದೆ ಸಾರಿಗೆ ಸಂಸ್ಥೆಗಳ ನೌಕರರು ಎಂಬ ಭಾವನೆ ಹೆಮ್ಮರವಾಗಿ ಬೆಳೆಯಲಿದೆ ಎಂಬ ಭರವಸೆ ಮೂಡಿರುವುದು ಸಮಸ್ತ ನಾಲ್ಕೂ ನಿಗಮಗಳ ಅಧಿಕಾರಿಗಳು- ನೌಕರರಲ್ಲಿ ಸಂತಸ ತಂದಿದೆ.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...