NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 1.25ಲಕ್ಷ ನೌಕರರ 18 ತಿಂಗಳ ತುಟ್ಟಿಭತ್ಯೆ ಬಾಕಿ – ಬಿಲ್‌ ತಯಾರಿಸಿ ಲೆಕ್ಕಶಾಖೆಗೆ ಸಲ್ಲಿಸಲು ಆದೇಶ

ಮಾರ್ಚ್‌ನಲ್ಲಿ ಸರ್ಕಾರ ಆದೇಶ ಮಾಡಿರುವ 3.75% DAಯ 2 ತಿಂಗಳ ಬಾಕಿಯನ್ನು ಸೇರಿಸಲು ಸೂಚನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರಿಗೆ ಜುಲೈ 2022ರಿಂದ ಜನವರಿ 2024ರವರೆಗೆ ಒಟ್ಟು 18 ತಿಂಗಳ ತುಟ್ಟಿ ಭತ್ಯೆ (DA) ಹಿಂಬಾಕಿ ಬಿಡುಗಡೆ ಮಾಡುವ ಸಂಬಂಧ ಬಿಲ್ಲುಗಳನ್ನು ತಯಾರಿಸಿ ಲೆಕ್ಕಶಾಖೆಗೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ 18 ತಿಂಗಳ ತುಟ್ಟಿಭತ್ಯೆ ಬಾಕಿಯ ಬಿಲ್ಲುಗಳನ್ನು ಇಂದು ನಾಳೆ ಅಂದರೆ ಮಾ.16 ಮತ್ತು 17 ರಂದೇ ತಯಾರಿಸಿ ಲೆಕ್ಕಪತ್ರಶಾಖೆಗೆ ಸಲ್ಲಿಸಬೇಕು. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಎರಡು ದಿನಗಳು ತಪ್ಪದೆ ಹಾಜರಾಗಬೇಕು ಎಂದು ಸಾರಿಗೆ ಮೈಸೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮಾ.15ರಂದು ಸೂಚನೆ ನೀಡಿದ್ದಾರೆ.

ಹೀಗಾಗಿ ಅಧಿಕಾರಿಗಳು/ ನೌಕರರಿಗೆ ಬಾಕಿ ಉಳಿಸಿಕೊಂಡಿರುವ 18 ತಿಂಗಳ ತುಟ್ಟಿಭತ್ಯೆ ಹಿಂಬಾಕಿಯನ್ನು ಮೂರರಿಂದ ನಾಲ್ಕೂ ಕಂತುಗಳಲ್ಲಿ ಪಾವತಿಸುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಒಟ್ಟಾರೆ ಕಳೆದ 2 ವರ್ಷದಿಂದ ನೆನಗುದಿಗೆ ಬಿದ್ದಿರುವ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಬಗ್ಗೆ ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿವರ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಡಿಎ ಹೆಚ್ಚಳ ಮಾಡಿದ ಬಳಿಕ ರಾಜ್ಯ ಸರ್ಕಾರವೂ ಕೂಡ ತನ್ನ ನೌಕರರಿಗೆ ಡಿಎ ಹೆಚ್ಚಳ ಮಾಡುತ್ತದೆ. ಅದೇ ರೀತಿ ಕಳೆದ 2022ರ ಜುಲೈನಲ್ಲಿ ಕೇಂದ್ರ ಸರ್ಕಾರ ಶೇ.4ರಷ್ಟು ಡಿಎ ಹೆಚ್ಚಳ ಮಾಡಿತ್ತು. ಬಳಿಕ ರಾಜ್ಯ ಸರ್ಕಾರ ಕೂಡ 2022ರ ಅಕ್ಟೋಬರ್‌ 7ರಂದು ಶೇ.3.75ರಷ್ಟು ಡಿಎ ಹೆಚ್ಚಳ ಮಾಡಿ ಅದು ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು.

ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಎಷ್ಟು ಹೆಚ್ಚಳವಾಗುತ್ತದೆಯೋ ಯಥಾಪ್ರಕಾರದಲ್ಲೇ ಸಾರಿಗೆ ನೌಕರರಿಗೂ ಡಿಎ ಅಷ್ಟೇ ಹೆಚ್ಚಳವಾಗುತ್ತದೆ. ಈ ಡಿಎ ಹೆಚ್ಚಳವನ್ನು ಸಾರಿಗೆ ನಿಗಮಗಳು ತಮ್ಮ ನೌಕರರಿಗೆ ಡಿಸೆಂಬರ್‌-2022ರ ವೇತನದಲ್ಲಿ ಸೇರಿಸಿದ್ದು, ಉಳಿದ 5 ತಿಂಗಳ ಡಿಎ ಹಿಂಬಾಕಿನ್ನು ಈವರೆಗೂ ನೀಡಿಲ್ಲ.

ಅದೇ ರೀತಿ 2023ರ ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಈ ತುಟ್ಟಿಭತ್ಯೆ ಹೆಚ್ಚಳವನ್ನು ಆಗಸ್ಟ್‌ ವೇತನದಲ್ಲಿ ಸಾರಿಗೆ ನೌಕರರಿಗೆ ಸೇರಿಸಲಾಗಿದ್ದು, ಇದರ 7 ತಿಂಗಳ ಹಿಂಬಾಕಿಯನ್ನು ಈವರೆಗೂ ಬಿಡುಗಡೆ ಮಾಡಿಲ್ಲ.

ಇನ್ನು 2023ರ ಜುಲೈನಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಅದರಂತೆ ಸಾರಿಗೆ ನೌಕರರಿಗೆ ಕಳೆದ ನವೆಂಬರ್‌ 2023ರ ವೇತನದಲ್ಲಿ ಸೇರಿಸಿ ಕೊಡುವಂತೆ ಸಾರಿಗೆಯ ನಾಲ್ಕೂ ಸಂಸ್ಥೆಗಳಿಗೂ ಕೆಎಸ್‌ಆರ್‌ಟಿಸಿ  ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದರು. ಈ ನಡುವೆ ಈ ಡಿಎ ಹಿಂಬಾಕಿ ಕೊಡುವುದಕ್ಕೆ ಆಯಾಯ ನಿಗಮಗಳ ಆರ್ಥಿಕ ಪರಿಸ್ಥಿತಿಯ ಮೇಲೆ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದ್ದರು.

ಇನ್ನು ಮಾರ್ಚ್‌ನಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಸಾರಿಗೆ ನೌಕರರಿಗೆ ಇದೇ ತಿಂಗಳ ವೇತನದಲ್ಲಿ ಡಿಎ ಸೇರಿಸಿ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಂಡಂತೆ ಕಾಣುತ್ತಿದೆ. ಆದರೆ, ಈ ಡಿಎ ಹಿಂಬಾಕಿ ಕೊಡುವುದಕ್ಕೆ ಆಯಾಯ ನಿಗಮಗಳ ಆರ್ಥಿಕ ಪರಿಸ್ಥಿತಿಯ ಮೇಲೆ ನಿರ್ಧಾರವಾಗಲಿದೆ.

ಹೀಗಾಗಿ ಸಾರಿಗೆ ನೌಕರರಿಗೆ 2022ರ ಜುಲೈ ತುಟ್ಟಿಭತ್ಯೆಯ ಶೇ.3.75ರಷ್ಟು ಹೆಚ್ಚಳದ 5 ತಿಂಗಳುಗಳು, 2023ರ ಜನವರಿ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳದ 7 ತಿಂಗಳುಗಳು ಮತ್ತು 2023ರ ಜುಲೈ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳದ 4 ತಿಂಗಳುಗಳ ತುಟ್ಟಿಭತ್ಯೆ ಹಾಗೂ ಪ್ರಸ್ತುತ 2024ರ ಜನವರಿ ತುಟ್ಟಿಭತ್ಯೆಯ ಶೇ.3.75ರಷ್ಟು ಹೆಚ್ಚಳದ ಎರಡು ತಿಂಗಳ ಹಿಂಬಾಕಿ ( ಮಾರ್ಚ್‌ ವೇತನದಲ್ಲಿ ತುಟ್ಟಿಭತ್ಯೆ ಕೊಟ್ಟರೆ) ಅಂದರೆ ಒಟ್ಟು 18 ತಿಂಗಳುಗಳ ಹಿಂಬಾಕಿಯನ್ನು ಸಾರಿಗೆ ನೌಕರರಿಗೆ ಬಿಡುಗಡೆ ಮಾಡಬೇಕಿದೆ.

ಈ ಬಗ್ಗೆ ಈಗಾಗಲೇ ಇದಕ್ಕೆ ಸಂಬಂಧಿಸಿದ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳಿಗೆ ಈ ತುಟ್ಟಿಭತ್ಯೆ ಹಿಂಬಾಕಿಯ ಬಿಲ್ಲುಗಳನ್ನು ಸಿದ್ಧಪಡಿಸಲು ಸೂಚಿಸಿರುವುದರಿಂದ ಮಾರ್ಚ್‌ ವೇತನದಲ್ಲೇ ಸೇರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ