NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಹಿಂಬಾಕಿಗೆ 220 ಕೋಟಿ ಕೊಟ್ಟ ಸರ್ಕಾರ – ಮಾರ್ಚ್‌ನಲ್ಲಿ ನಿವೃತ್ತ ನೌಕರರ ಖಾತೆಗೆ ಹಣ ಜಮೆ ಎಂದ ಅನ್ಬುಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 1.1.2020 ರಿಂದ 28.02.2023 ರವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ನೌಕರರಿಗೆ ಶೇ. 15 ವೆತನ ಹೆಚ್ಚಳ, ಶೇ. 45.25 BDA ಮರ್ಜ್, ಇಂಕ್ರಿಮೆಂಟ್ ಹೆಚ್ಚಳ ಸೇರಿಸಿ ಪೇ ಪಿಕ್ಸೇಷನ್ ಮಾಡಿ ಮಾರ್ಚ್‌ನಲ್ಲಿ ನಿಮ್ಮ ಎಲ್ಲ ಬಾಕಿ ಹಣವನ್ನು ಪಾವತಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ತಿಳಿಸಿದ್ದಾರೆ.

ಇಂದು ನಿವೃತ್ತ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್‌ಗಳಲ್ಲಿ ಸಾರಿಗೆ ನಿಗಮಗಳ ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಖುದ್ದು ಭೇಟಿನೀಡಿ ಮಾತನಾಡಿದರು.

ನಿವೃತ್ತ ನೌಕರರಿಗೆ ಕೊಡಬೇಕಿರುವ ಸುಮಾರು 220 ಕೋಟಿ ರೂಪಾಯಿ ಹಿಂಬಾಕಿ ಹಣವನ್ನು ಸರ್ಕಾರ ಈಗಾಗಲೇ ಮಂಜೂರು ಮಾಡಿದೆ. ಆದರೆ ನಾವು ಬೋರ್ಡ್‌ನಲ್ಲಿ ಇನ್ನು ಅನುಮತಿ ಪಡೆಯದಿರುವುದರಿಂದ ಅದು ವಿಳಂಬವಾಗಿದೆ ಅಷ್ಟೆ ಎಂದು ತಿಳಿಸಿದರು.

ಇನ್ನು ಮಾರ್ಚ್‌ನಲ್ಲಿ ಕೆಎಸ್‌ಆರ್‌ಟಿಸಿ ಮಂಡಳಿ ಮತ್ತು ಸರ್ಕಾರದಿಂದ ಅಧಿಕೃತ ಅನುಮತಿ ಪಡೆದು ಮಾರ್ಚ್‌ ತಿಂಗಳಿನಲ್ಲಿ ನಿಮ್ಮ ವೇತನ ಪರಿಷ್ಕರಣೆ ಮಾಡಿಕೊಡುತ್ತೇವೆ. ಯಾರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಭರವಸೆಕೊಟ್ಟ ಹಿನ್ನೆಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವನ್ನು ಕೈಬಿಡಲಾಗಿದೆ ಎಂದು ಸಾರಿಗೆ ನಿಗಮಗಳ ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ತಿಳಿಸಿದರು.

ನಿವೃತ್ತ ನೌಕರರ ಬೇಡಿಕೆಗಳೇನು: 1.1.2020 ರಿಂದ ಸಾರಿಗೆ ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸುವ 4 ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 31.12.2019 ರಲ್ಲಿ ಇದ್ದ ಬೇಸಿಕ್‌ಗೆ ಶೇ. 15 ಹೆಚ್ಚಳ, ಅಂದು ಇದ್ದ ಶೇ. 45.25 BDA ಮರ್ಜ್ ಮಾಡಿ ಹಾಗೂ ಇಂಕ್ರಿಮೆಂಟ್ ಹೆಚ್ಚಳವನ್ನು ಸೇರಿಸಿ 1.1.2020 ರಿಂದ ಕೆಲಸ ಮಾಡುತ್ತಿರುವ ಎಲ್ಲ ಸಿಬ್ಬಂದಿಗಳಿಗೂ ವೇತನ ಹೆಚ್ಚಳ ಮಾಡಿ ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಆಡಳಿತ ವರ್ಗ ಆದೇಶ ಮಾಡಿದೆ.

ಅದರಂತೆ ಕರ್ತವ್ಯ ನಿರತ ಎಲ್ಲ ನೌಕರರಿಗೂ ವೇತನ ನೀಡಲಾಗುತ್ತಿದೆ. ಆದರೆ 1.1.2020 ರಿಂದ 28.02.2023 ರ ನಡುವೆ 4 ನಿಗಮಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ, ಅಧಿಕಾರಿಗಳು ಮತ್ತು ನೌಕರರಿಗೆ ಶೇ. 15 ವೇತನ ಹೆಚ್ಚಳ, ಶೇ. 45.25 BDA ಮರ್ಜ್, ಇಂಕ್ರಿಮೆಂಟ್ ಹೆಚ್ಚಳ ಸೇರಿಸಿ ಪೇ ಪಿಕ್ಸೇಷನ್ ಮಾಡಿ ಕೊಟ್ಟಿಲ್ಲ. ಮಾರ್ಚಿ ಬಂದರೆ ಒಂದು ವರ್ಷವಾಗುತ್ತದೆ.

ಇದು 1.1.2020 ರಿಂದ 28.02.2023 ರವರೆಗೆ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದವರಿಗೆ ಕೊಡುವ ಸ್ಟ್ಯಾಚುಟರಿ ಸೌಲಭ್ಯವಾಗಿದೆ. ಈ ಸೌಲಭ್ಯವನ್ನು ನಿವೃತ್ತ ನೌಕರರು ಕೇಳಬೇಕಾಗಿಯೇ ಇಲ್ಲ. ಆಡಳಿತ ವರ್ಗವೇ ಎಲ್ಲರೊಟ್ಟಿಗೆ ಆದೇಶ ಮಾಡಿ ನೀಡಬೇಕಿತ್ತು.

ಆದರೆ ಈ ಬಗ್ಗೆ ಆದೇಶ ನೀಡದೆ ಇದ್ದ ಬಗ್ಗೆ ನಿವೃತ್ತ ನೌಕರರು ಸಭೆ ನಡೆಸಿ ಆಡಳಿತ ವರ್ಗಕ್ಕೆ 17.09.2023 ರಂದು ಬೆಂಗಳೂರಿನ KSRTC ಕೇಂದ್ರ ಕಚೇರಿ ಮುಂದೆ ಸೇರಿ ಅಂದು ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿ ಕೂಡಲೇ ಆದೇಶ ಮಾಡಿ ಆರ್ಥಿಕ ಸೌಲಭ್ಯಗಳನ್ನು ಜಾರಿಗೆ ಕೊಡುವಂತೆ ಒತ್ತಾಯಿಸಲಾಗಿತ್ತು. ಆದರೂ ಅದು ಕಾರ್ಯರೂಪಕ್ಕೆ ಬಂದಿಲ್ಲ.

ನಂತರವೂ ಆದೇಶ ಬರದ ಕಾರಣ 19.10.2023 ರಂದು ಸ್ವಾತಂತ್ರ್ಯ ಯೋಧರ ಪಾರ್ಕ್‌ನಲ್ಲಿ ಒಂದು ದಿನ ಧರಣಿ ನಡೆಸಲಾಯಿತು. ಅಂದು ಇದೇ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಧರಣಿ ಸ್ಥಳಕ್ಕೆ ಬಂದು ಕೂಡಲೇ ಆದೇಶ ನೀಡುವುದಾಗಿ ಭರವಸೆ ನೀಡಿದ್ದರು. ಆನಂತರ ಹಲವು ಬಾರಿ ಈ ಬಗ್ಗೆ ಸಾರಿಗೆ ಸಚಿವರು ಮತ್ತು ಇದೇ ವ್ಯವಸ್ಥಾಪಕರ ಬಳಿ ಸಭೆ ನಡೆಸಿ ಆದೇಶ ಜಾರಿ ಮಾಡಲು ಒತ್ತಾಯಿಸಿದೆವು. ಆದರೂ ಪ್ರಯೋಜನವಾಗಿಲ್ಲ.

ಇನ್ನು ಆದೇಶ ಹೊರಡಿಸುವುದಾಗಿ ಸಕಾರಾತ್ಮವಾಗಿ ಮಾತನಾಡಿದರೂ ಸಹ ಈವರೆಗೂ ಆದೇಶ ಮಾಡದಿರುವುದು ನಿವೃತ್ತ ನೌಕರರಿಗೆ ತೋರುತ್ತಿರುವ ಅಗೌರವವಾಗಿದೆ. ಆದ್ದರಿಂದ ಜ.17ರಂದು ಸಭೆ ನಡೆಸಲಾಗಿತ್ತು ಅಂದು ಈ ಬಗ್ಗೆ ನಿವೃತ್ತ ನೌಕರರಲ್ಲಿ ಅತೃಪ್ತಿ ಹೆಚ್ಚಳವಾಗಿರುವುದನ್ನು ಮನಗಂಡು ಬೇಡಿಕೆ ಈಡೇರುವವರೆಗೂ ಫೆಬ್ರವರಿ 20ರಿಂದ ಅನಿರ್ದಿಷ್ಠಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಇಂದು ಬೇಡಿಕೆಗಳ ಈಡೇರಿಕೆಗಾಗಿ 4 ನಿಗಮಗಳಲ್ಲಿ ನಿವೃತ್ತ ಅಧಿಕಾರಿಗಳು/ ನೌಕರರು ಹಮ್ಮಿಕೊಂಡಿದ್ದರು.

ಧರಣಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಯದೆವರಾಜೇ ಅರಸು, ಕೆ.ಎಲ್‌.ಮಂಜುನಾಥ್, ಎಚ್‌.ಎಸ್‌. ಮಂಜುನಾಥ್, ವೆಂಕಟರವಣಪ್ಪ, ಕೇಂದ್ರ ಕಚೇರಿಯ ಉನ್ನತ ಅಧಿಕಾರಿಗಳು ಸೇರಿದಂತೆ ನಾಲ್ಕೂ ನಿಗಮಗಳ ನೂರಾರು  ನಿವೃತ್ತ ನೌಕರರು ಇದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...