CRIMENEWSನಮ್ಮಜಿಲ್ಲೆ

KSRTC ಬಸ್‌- ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ: ವ್ಯಾನ್‌ ಚಾಲಕ ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಹಾಗೂ ಓಮ್ನಿವ್ಯಾನ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿವ್ಯಾನ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದ ಅಮಾನಿ ಕೆರೆ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ.

ಕೋಲಾರ ಮೂಲದ ವ್ಯಾನ್‌ ಚಾಲಕ ಫೋಟೋಗ್ರಾಫರ್‌ ಚೇತನ್‌ (20) ಎಂಬುವರೆ  ಮೃತಪಟ್ಟವರು. ಗುರುವಾರ ಮುಂಜಾನೆ 3ಗಂಟೆ ಸುಮಾರಿಗೆ ಸಮಾರಂಭ ಒಂದರ ಫೋಟೋಶೋಟ್‌ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್‌ ಕೋಲಾರಕ್ಕೆ ಬರುತ್ತಿದ್ದಾಗ ನಿದ್ರೆಮಂಪರಿನಲ್ಲಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಇನ್ನು ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಸಿ ಬಸ್‌ ಚಾಲಕ ವ್ಯಾನ್‌ ತನ್ನ ಕಡೆಗೆ ಬರುತ್ತಿರುವುದನ್ನು ನೋಡಿ ಬ್ರೇಕ್‌ ಹಾಕುವ ಮೂಲಕ ಬಸ್ಸನ್ನು ನಿಂತ್ರಿಸುತ್ತಿದ್ದರು ಆದರೆ ಅಷ್ಟರಲ್ಲೇ ಓಮ್ನಿವ್ಯಾನ್‌ ಬಸ್‌ಗೆ ಡಿಕ್ಕಿಹೊಡೆದಿದ್ದರಿಂದ ಬಸ್‌ ಚಾಲಕನ ಭಾಗಕ್ಕೆ ವ್ಯಾನ್‌ ನುಗ್ಗಿದೆ. ಇದರಿಂದ ವ್ಯಾನ್‌ ಚಾಲಕ ಚೇತನ ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಅಫಘಾತಕ್ಕೆ ವ್ಯಾನ್‌ ಚಾಲಕ ಎಡಭಾಗದಿಂದ ಬಸ್‌ ಬರುತ್ತಿದ್ದ ಬಲಭಾಗಕ್ಕೆ ಹೋಗಿರುವುದೇ ಕಾರಣ ಎಂದು ಹೇಳಲಾಗುತ್ತಿದ್ದು ವ್ಯಾನ್‌ ಬಸ್‌ಗೆ ಡಿಕ್ಕಿ ಹೊಡದ ರಭಸಕ್ಕೆ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಟೆರಿಂಗ್‌ ಮೇಲೆಯೇ ಚೇತನ್‌ ಮೃತಪಟ್ಟಿದ್ದಾರೆ.

ಇನ್ನು ಬಸ್‌ ಮತ್ತು ವ್ಯಾನ್‌ಅನ್ನು ಬೇರ್ಪಡಿಸಿದ ಬಳಿಕ ವ್ಯಾನ್‌ನಲ್ಲಿದ್ದ ಚೇತನ್‌ ಅವರ ಮೃತದೇಹವನ್ನು ಹೊರ ತೆಗೆಯಲೂ ಕೂಡ ಪೊಲೀಸರು ರಾಡ್‌ ಬಳಸಬೇಕಾಯಿತು. ಅಂದರೆ ಅಪಘಾತದ ತೀವ್ರತೆ ಎಷ್ಟಿತ್ತು ಎಂಬುವುದು ಇದರಿಂದ ಊಹಿಸಿಕೊಳ್ಳಬಹುದು.

ಬಳಿಕ ಪೊಲೀಸರು ಚೇತನ್‌ ಮೃತದೇಹವನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ರವಾನಿಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...