CRIMENEWSನಮ್ಮಜಿಲ್ಲೆ

KSRTC ಬಸ್‌- ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ: ವ್ಯಾನ್‌ ಚಾಲಕ ಸ್ಥಳದಲ್ಲೇ ಸಾವು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಹಾಗೂ ಓಮ್ನಿವ್ಯಾನ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಓಮ್ನಿವ್ಯಾನ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದ ಅಮಾನಿ ಕೆರೆ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ.

ಕೋಲಾರ ಮೂಲದ ವ್ಯಾನ್‌ ಚಾಲಕ ಫೋಟೋಗ್ರಾಫರ್‌ ಚೇತನ್‌ (20) ಎಂಬುವರೆ  ಮೃತಪಟ್ಟವರು. ಗುರುವಾರ ಮುಂಜಾನೆ 3ಗಂಟೆ ಸುಮಾರಿಗೆ ಸಮಾರಂಭ ಒಂದರ ಫೋಟೋಶೋಟ್‌ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್‌ ಕೋಲಾರಕ್ಕೆ ಬರುತ್ತಿದ್ದಾಗ ನಿದ್ರೆಮಂಪರಿನಲ್ಲಿ ಎದುರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಇನ್ನು ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಸಿ ಬಸ್‌ ಚಾಲಕ ವ್ಯಾನ್‌ ತನ್ನ ಕಡೆಗೆ ಬರುತ್ತಿರುವುದನ್ನು ನೋಡಿ ಬ್ರೇಕ್‌ ಹಾಕುವ ಮೂಲಕ ಬಸ್ಸನ್ನು ನಿಂತ್ರಿಸುತ್ತಿದ್ದರು ಆದರೆ ಅಷ್ಟರಲ್ಲೇ ಓಮ್ನಿವ್ಯಾನ್‌ ಬಸ್‌ಗೆ ಡಿಕ್ಕಿಹೊಡೆದಿದ್ದರಿಂದ ಬಸ್‌ ಚಾಲಕನ ಭಾಗಕ್ಕೆ ವ್ಯಾನ್‌ ನುಗ್ಗಿದೆ. ಇದರಿಂದ ವ್ಯಾನ್‌ ಚಾಲಕ ಚೇತನ ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಅಫಘಾತಕ್ಕೆ ವ್ಯಾನ್‌ ಚಾಲಕ ಎಡಭಾಗದಿಂದ ಬಸ್‌ ಬರುತ್ತಿದ್ದ ಬಲಭಾಗಕ್ಕೆ ಹೋಗಿರುವುದೇ ಕಾರಣ ಎಂದು ಹೇಳಲಾಗುತ್ತಿದ್ದು ವ್ಯಾನ್‌ ಬಸ್‌ಗೆ ಡಿಕ್ಕಿ ಹೊಡದ ರಭಸಕ್ಕೆ ಮುಂದಿನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಟೆರಿಂಗ್‌ ಮೇಲೆಯೇ ಚೇತನ್‌ ಮೃತಪಟ್ಟಿದ್ದಾರೆ.

ಇನ್ನು ಬಸ್‌ ಮತ್ತು ವ್ಯಾನ್‌ಅನ್ನು ಬೇರ್ಪಡಿಸಿದ ಬಳಿಕ ವ್ಯಾನ್‌ನಲ್ಲಿದ್ದ ಚೇತನ್‌ ಅವರ ಮೃತದೇಹವನ್ನು ಹೊರ ತೆಗೆಯಲೂ ಕೂಡ ಪೊಲೀಸರು ರಾಡ್‌ ಬಳಸಬೇಕಾಯಿತು. ಅಂದರೆ ಅಪಘಾತದ ತೀವ್ರತೆ ಎಷ್ಟಿತ್ತು ಎಂಬುವುದು ಇದರಿಂದ ಊಹಿಸಿಕೊಳ್ಳಬಹುದು.

ಬಳಿಕ ಪೊಲೀಸರು ಚೇತನ್‌ ಮೃತದೇಹವನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ರವಾನಿಸಿದರು. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!